AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ನೀಡಲು ನಿರ್ಧಾರ: ಸಚಿವ ಸುನಿಲ್ ಕುಮಾರ್

ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡಲು ತೀರ್ಮಾನ ಮಾಡಿದೆ ಎಂದು ಕನ್ನಡ & ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಮಾಸಾಶನ ನೀಡಲು ಈ ಯೋಜನೆಯನ್ನು ಹಾಕಿಕೊಂಡಿದೆ.

ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ನೀಡಲು ನಿರ್ಧಾರ: ಸಚಿವ ಸುನಿಲ್ ಕುಮಾರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 20, 2022 | 12:39 PM

Share

ಕರಾವಳಿ ಭಾಗದಲ್ಲಿ ದೈವಾರಾಧನೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ ದೈವ ನರ್ತನ ಮಾಡುವ ಬಡ ಕುಟುಂಬಗಳ ಬಹಳ ದಿನಗಳ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ದೈವ ನರ್ತಕರ ಕುಟುಂಬಕ್ಕೆ ಸರ್ಕಾರ ಈಗ ಆಶಾದಾಯಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದೀಗ ಸರ್ಕಾರ ದೈವಕ್ಕೆ ಕಟ್ಟುವ ಅಂದರೆ ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡಲು ತೀರ್ಮಾನ ಮಾಡಿದೆ. ಪಂಬದರು, ನಲಿಕೆಯವರು, ಪರವರಿಗೆ ಅಂದರೆ ಇವರೆಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರುತ್ತಾರೆ. ಇವರ ಅಭಿವೃದ್ಧಿಗಾಗಿ ಈ ಕ್ರಮವನ್ನು ತರಲಾಗಿದೆ.

ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡಲು ತೀರ್ಮಾನ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಮಾಸಾಶನ ನೀಡಲು ಈ ಯೋಜನೆಯನ್ನು ಹಾಕಿಕೊಂಡಿದೆ. ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ.

ಇದನ್ನು ಓದಿ: ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲವೇ? ದೈವಗಳ ಹುಟ್ಟಿನ ಐತಿಹ್ಯದ ವಿಸ್ತೃತ ಮಾಹಿತಿ ಇಲ್ಲಿದೆ

ಕನ್ನಡದಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿದ ಕಾಂತಾರ ಸಿನಿಮಾ, ಅನೇಕ ಕಡೆಗಳಲ್ಲಿ ಪ್ರಶಂಸೆಗೆ ಕಾರಣವಾಗಿದೆ. ಈ ಮೂಲಕ ದೈವ ನರ್ತಕ ಕಷ್ಟಗಳನ್ನು ಅಥವಾ ಆ ಒಂದು ಸಮುದಾಯದ ಜನರ ಕಷ್ಟಗಳನ್ನು ತಿಳಿಸುವ ಪ್ರಯತ್ನವನ್ನು ಈ ಸಿನಿಮಾ ಮಾಡಿತ್ತು.  ಈ ಸಿನಿಮಾವನ್ನು ನೋಡಿದ ಅನೇಕ ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಒಳ್ಳೆಯ ಯೋಜನೆಗಳನ್ನು ತರಬೇಕು ಮತ್ತು ಅವರಿಗಾಗಿ ಮಾಸಾಶನ  ನೀಡಬೇಕು ಎಂದು ಸರ್ಕಾರಕ್ಕೆ ಸಲಹೆಯನ್ನು ನೀಡಿದ್ದರು, ಇಂದಿಗೂ ಈ ಬಗ್ಗೆ ಸರ್ವಾಜನಿಕ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಮಾತುಗಳು ಕೇಳಿ ಬರುತ್ತಿದೆ.  ಇದೀಗ ಸರ್ಕಾರ ದೈವ ನರ್ತಕರ ಕಷ್ಟಕ್ಕೆ ಮತ್ತು ಬೇಡಿಕೆಯನ್ನು ಒಪ್ಪಿಕೊಂಡು ಮತ್ತು ಈ ಸಿನಿಮಾದ ಮೂಲಕ ಬಂದ ಒತ್ತಡಕ್ಕೆ ದೈವ ನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ ನೀಡಲು ನಿರ್ಧಾರ ಮಾಡಿದೆ.

Published On - 12:21 pm, Thu, 20 October 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?