AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಜನ ಸಾವು, ಈ ಪೈಕಿ ಬೈಕ್ ಸವಾರರೇ ಹೆಚ್ಚು

ಹೆಚ್ಚು ಬೈಕ್​ ಸವಾರರೇ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುತ್ತಿದ್ದಾರೆ. ಅಂಕಿಅಂಶಗಳ ಪ್ರಕಾರ, ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ ಶೇಕಡಾ 60 ರಷ್ಟು ಜನ ಬೈಕ್ ಸವಾರರು ಎಂಬುವುದು ಆಘಾತಕಾರಿ ಅಂಶವಾಗಿದೆ. ಮೂರನೇ ಎರಡರಷ್ಟು ಬೈಕ್ ಸವಾರರು ರಸ್ತೆಯಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದ್ದರಿಂದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಜನ ಸಾವು, ಈ ಪೈಕಿ ಬೈಕ್ ಸವಾರರೇ ಹೆಚ್ಚು
ಅಪಘಾತ
Follow us
Shivaprasad
| Updated By: ವಿವೇಕ ಬಿರಾದಾರ

Updated on:Sep 05, 2023 | 9:51 AM

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಅಪಘಾತ (Karnataka Accident) ಪ್ರಕರಣಗಳ ಸಂಖ್ಯೆ ಏರುತ್ತಿದೆ. ಚಾಲಕರ ಅಜಾಗರೂಕತೆ, ಹಾಳಾದ ರಸ್ತೆಯಿಂದ ಅಪಘಾತಗಳು ಸಂಭವಿಸುತ್ತಿವೆ. 2023ರ ಮೊದಲಾರ್ಧದಲ್ಲಿ 5830 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಅಪಘಾತದಿಂದ ಅತ್ಯಧಿಕ ಸಾವು ನೋವು ಸಂಭವಿಸಿದೆ. ಅಪಘಾತದಿಂದ ಬರೋಬ್ಬರಿ 1094 ಜನ ಮೃತಪಟ್ಟಿದ್ದಾರೆ. ಜೂನ್​ನಲ್ಲಿ 965, ಜುಲೈನಲ್ಲಿ 807, ಆಗಸ್ಟ್​​ನಲ್ಲಿ 795 ಜನ ನಿಧನರಾಗಿದ್ದಾರೆ. ಅಪಘಾತದ ಸಾವಿಗೀಡಾದ ಹೆಚ್ಚಿನ ಜನರು ಬೆಂಗಳೂರು (Bengaluru), ಬೆಂಗಳೂರು ಗ್ರಾಮಾಂತರ (Bengaluru Rurel) ಮತ್ತು ತುಮಕೂರು (Tumakuru) ಜಿಲ್ಲೆಯವರಾಗಿದ್ದಾರೆ.

ಹೆಚ್ಚು ಬೈಕ್​ ಸವಾರರೇ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುತ್ತಿದ್ದಾರೆ. ಅಂಕಿಅಂಶಗಳ ಪ್ರಕಾರ, ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ ಶೇಕಡಾ 60 ರಷ್ಟು ಜನ ಬೈಕ್ ಸವಾರರು ಎಂಬುವುದು ಆಘಾತಕಾರಿ ಅಂಶವಾಗಿದೆ. ಮೂರನೇ ಎರಡರಷ್ಟು ಬೈಕ್ ಸವಾರರು ರಸ್ತೆಯಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದ್ದರಿಂದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ನಾಲ್ವರ ಸಾವು

ದ್ವಿಚಕ್ರ ವಾಹನ ಬಳಕೆದಾರರಿಗೆ ಸಂಬಂಧಿಸಿದ ಸುರಕ್ಷತೆಯ ಬಗ್ಗೆ ಅತಿಯಾಗಿ ಹೇಳಲಾಗುವುದಿಲ್ಲ. ಸಾವನ್ನಪ್ಪಿದ ಶೇ 60 ರಷ್ಟು ಬೈಕ್​ ಸವಾರರಲ್ಲಿ 2/3 ಜನರು ಮಾತ್ರ ಹೆಲ್ಮೆಟ್ ಧರಿಸಿದ್ದರು. ಹೆಲ್ಮೆಟ್ ಧರಿಸಿ ಪ್ರಯಾಣ ಮಾಡುವುದರಿಂದ ಅಪಘಾತ ಸಮಯದಲ್ಲಿ ಸಾವಿನಿಂದ ದೂರವಾಗಬಹುದು. ಇನ್ನು 50 ರಿಂದ 52 ರಷ್ಟು ಬೈಕ್ ಸವಾರರು ಬೆಂಗಳೂರಲ್ಲಿ ಸಂಭವಿಸಿದ ಅಪಘಾದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ ತಿಂಗಳಲ್ಲಿ 29, ಜೂನ್​ನಲ್ಲಿ 28, ಜುಲೈನಲ್ಲಿ 8 ಮತ್ತು ಆಗಸ್ಟ್​ನಲ್ಲಿ 6 ಜನ ಅಪಘಾತದಿಂದ ನಿಧನರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:17 am, Tue, 5 September 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ