AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ರ್ಯಾಲಿಗಳಲ್ಲಿ ಉಳಿದ ವಿಷಪೂರಿತ ಆಹಾರ ಸೇವಿಸಿ 22 ಜಾನುವಾರುಗಳ ಸಾವು

ಎರಡು ಪ್ರತ್ಯೇಕ ಘಟನೆಯಲ್ಲಿ ವಿಷಪೂರಿತ ಆಹಾರ ಸೇವಿಸಿ 22 ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಇದೇ ತಿಂಗಳು ರಾಯಚೂರು ಮತ್ತು ಯಾದಗಿರಿಯಲ್ಲಿ ನಡೆದಿದೆ.

ಚುನಾವಣಾ ರ್ಯಾಲಿಗಳಲ್ಲಿ ಉಳಿದ ವಿಷಪೂರಿತ ಆಹಾರ ಸೇವಿಸಿ 22 ಜಾನುವಾರುಗಳ ಸಾವು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 27, 2023 | 6:19 PM

Share

ಯಾದಗಿರಿ/ರಾಯಚೂರು: ಎರಡು ಪ್ರತ್ಯೇಕ ಘಟನೆಯಲ್ಲಿ ವಿಷಪೂರಿತ ಆಹಾರ ಸೇವಿಸಿ 22 ಜಾನುವಾರುಗಳು (Cattle) ಸಾವನ್ನಪ್ಪಿರುವ ಘಟನೆ ಇದೇ ತಿಂಗಳು ರಾಯಚೂರು (Raichuru) ಮತ್ತು ಯಾದಗಿರಿಯಲ್ಲಿ (Yadgiri) ನಡೆದಿದೆ. ಎರಡು ರಾಜಕೀಯ ರ್ಯಾಲಿಯಲ್ಲಿ (Election Rally) ಉಳಿದ ಆಹಾರವನ್ನು ಸೇವಿಸಿ ಜಾನುವಾರುಗಳು ಸಾವನ್ನಪ್ಪಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಇಂಡಿಯನ್​ ಎಕ್ಸಪ್ರೆಸ್​ ವರದಿ ಮಾಡಿದೆ. ಇತ್ತೀಚಿಗೆ ಮಾರ್ಚ್ 25 ರಂದು ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ 15 ಜಾನುವಾರುಗಳು ಸತ್ತಿರುವುದು ಬೆಳಕಿಗೆ ಬಂದಿತ್ತು. ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಪರಿಶೀಲಿಸಿದಾಗ ಜಾನುವಾರುಗಳು ಜೆಡಿಎಸ್ ರ್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸಾವನ್ನಪ್ಪಿವೆ ಎಂದು ತಿಳಿಸಿದ್ದರು.

ಗುರ್ಮಿಟ್ಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್​ ಆಕಾಂಕ್ಷಿ ಶರಣಗೌಡ ಕಂದಕೂರ್ ಅವರು ಮಾರ್ಚ್ 24 ರಂದು ಚುನಾವಣಾ ರ್ಯಾಲಿ ನಡೆಸಿದ್ದರು. ಈ ರ್ಯಾಲಿಯಲ್ಲಿ ಉಳಿದ ಆಹಾರವನ್ನು, ಅದೇ ದಿನ ಸಂಜೆ ಗ್ರಾಮದ ಸುಮಾರು 30-35 ಜಾನುವಾರುಗಳು ಸೇವಿಸಿವೆ. ಮರುದಿನ ಬೆಳಗ್ಗೆ ಜಾನುವಾರುಗಳನ್ನು ನೋಡಿದಾಗ ಹೊಟ್ಟೆ ಉಬ್ಬುಗೊಂಡಿದ್ದವು. ಇದರಿಂದ ಕೆಲವು ಜಾನುವಾರುಗಳು ಸಾವನ್ನಪ್ಪಿದವು ಎಂದು ಸ್ಥಳೀಯರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಗೆಲ್ಲಲು 3 ಪಕ್ಷಗಳ ರಣತಂತ್ರಗಳೇನು? ಸದ್ಯದ ಬಲಾಬಲಗಳೇನು? ರೆಡ್ಡಿ ಮಾಸ್ಟರ್ ಪ್ಲ್ಯಾನ್​ಗಳೇನು?

ಮೆಟಬಾಲಿಕ್ ಆಸಿಡೋಸಿಸ್​ನಿಂದಾಗಿ ಜಾನುವಾರುಗಳು ಸಾವನ್ನಪ್ಪಿವೆ. ಜಾನುವಾರುಗಳು ಕಾರ್ಬೋಹೈಡ್ರೇಟ್‌ಗಳನ್ನು ಒಳಗೊಂಡಿರುವ ಬಹಳಷ್ಟು ಆಹಾರವನ್ನು ಸೇವಿಸಿದ್ದರಿಂದ ಸಾವನ್ನಪ್ಪಿವೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಪ್ರಾಣಿಗಳು ಅಪಾರ ಪ್ರಮಾಣದ ಅಕ್ಕಿಯನ್ನು ಸೇವಿಸಿರುವುದು ಸಾವಿಗೆ ಕಾರಣವಾಯಿತು ಎಂದು ಎಂದು ಪಶುಸಂಗೋಪನಾ ಇಲಾಖೆಯ ಯಾದಗಿರಿ ಜಿಲ್ಲಾ ಉಪನಿರ್ದೇಶಕ ರಾಜು ದೇಶಮುಖ ತಿಳಿಸಿದ್ದಾರೆ.

ಜಾನುವಾರುಗಳ ಸಾವಿಗೆ “ವಿಷಪೂರಿತ ಆಹಾರ” ಸೇವನೆಯೇ ಕಾರಣ. ಜಾನುವಾರುಗಳು 5-6 ಕೆ.ಜಿ ಕೊಳೆತ ಆಹಾರವನ್ನು ಸೇವಿಸಿದ್ದು ಅವುಗಳ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ಇದೇ ತಿಂಗಳ ಆರಂಭದಲ್ಲಿ ರಾಯಚೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದಲ್ಲಿ ಮಾರ್ಚ್ 10 ರಂದು ನಡೆದ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯಲ್ಲಿ ಉಳಿದ ಆಹಾರವನ್ನು ಸೇವಿಸಿ 7 ಜಾನುವಾರುಗಳು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಮಾರ್ಚ್ 10 ರ ರಾತ್ರಿ ರ್ಯಾಲಿಯಲ್ಲಿ ಉಳಿದ ಆಹಾರವನ್ನು 15 ಜಾನುವಾರುಗಳು ಸೇವಿಸಿವೆ. ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ 7 ಜಾನುವಾರಗಳು ಸಾವನ್ನಪ್ಪಿದ್ದವು. 8 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿವೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:46 pm, Mon, 27 March 23

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್