ರಾಜ್ಯದಲ್ಲಿ ಹೊಸದಾಗಿ 22 ಮಂದಿಗೆ ಕೊರೊನಾ ಅಟ್ಯಾಕ್, ಇಬ್ಬರು ಬಲಿ!

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಜನರಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಇಂದು ಒಂದೇ ದಿನ 12 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಕೊರೊನಾಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದು, ದಾವಣಗೆರೆ, ವಿಜಯಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ 640ನೇ ಸೋಂಕಿತ, ದಾವಣಗೆರೆ ಜಿಲ್ಲೆಯ […]

ರಾಜ್ಯದಲ್ಲಿ ಹೊಸದಾಗಿ 22 ಮಂದಿಗೆ ಕೊರೊನಾ ಅಟ್ಯಾಕ್, ಇಬ್ಬರು ಬಲಿ!
ಸಾಧು ಶ್ರೀನಾಥ್​

Updated on: May 05, 2020 | 5:28 PM

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಜನರಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಇಂದು ಒಂದೇ ದಿನ 12 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಕೊರೊನಾಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದು, ದಾವಣಗೆರೆ, ವಿಜಯಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ 640ನೇ ಸೋಂಕಿತ, ದಾವಣಗೆರೆ ಜಿಲ್ಲೆಯ 662ನೇ ಸೋಂಕಿತರು ಸಾವಿಗೀಡಾಗಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಈವರೆಗೆ 29 ಜನರು ಬಲಿಯಾಗಿದ್ದಾರೆ.

Published On - 5:26 pm, Tue, 5 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us