AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕೊರೊನಾ ಸೋಂಕಿತೆಯರಿಬ್ಬರು ಕೊವಿಡ್ ಕೇಂದ್ರದಿಂದ ಪರಾರಿ; ಪ್ರೀತಿಸಿದವರ ಜೊತೆ ಓಡಿ ಹೋಗಿರುವ ಶಂಕೆ

ಕೊರೊನಾ ಸೋಂಕಿತ ಯುವತಿಯರು ದಾವಣಗೆರೆ ಜೆ.ಎಚ್.ಪಟೇಲ್ ಬಡಾವಣೆಯ ಕೊವಿಡ್ ಕೇರ್ ಸೆಂಟರ್​ನಿಂದ ಪರಾರಿಯಾಗಿದ್ದಾರೆ. ರಾಜ್ಯ ಮಹಿಳಾ ನಿಲಯ ನಿವಾಸಿಗಳಾಗಿದ್ದ 21 ಮತ್ತು 19 ವರ್ಷದ ಯುವತಿಯರು ಪರಾರಿಯಾದವರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಅಂತರ್ ಧರ್ಮೀಯ ಯುವಕನನ್ನು ಒಬ್ಬರು ಮದುವೆಯಾಗಿದ್ದರು.

sandhya thejappa
|

Updated on: May 20, 2021 | 10:09 AM

Share

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಂಕನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಲಾಕ್​ಡೌನ್​​ ಘೋಷಿಸಿದ ಜೊತೆಗೆ ಚಿಕಿತ್ಸೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆದರೆ ಕೊರೊನಾ ಬಗ್ಗೆ ಕೆಲ ಜನರಿಗೆ ಮಾತ್ರ ಇನ್ನು ಭಯ ಹುಟ್ಟಿಲ್ಲ. ಇಬ್ಬರು ಯುವತಿಯರಿಗೆ ಕೊರೊನಾ ಸೋಂಕು ತಗುಲಿತ್ತು. ಕೊವಿಡ್ ಕೇರ್ ಸೆಂಟರ್​ಗೆ ದಾಖಲಾಗಿದ್ದರು. ಆದರೆ ಆ ಯುವತಿಯರು ಕೊರೊನಾ ಭೀತಿಯಲ್ಲದೆ ಕೊವಿಡ್ ಕೇರ್ ಸೆಂಟರ್ನಿಂದ ಪರಾರಿಯಾಗಿದ್ದಾರೆ.

ಕೊರೊನಾ ಸೋಂಕಿತ ಯುವತಿಯರು ದಾವಣಗೆರೆ ಜೆ.ಎಚ್.ಪಟೇಲ್ ಬಡಾವಣೆಯ ಕೊವಿಡ್ ಕೇರ್ ಸೆಂಟರ್​ನಿಂದ ಪರಾರಿಯಾಗಿದ್ದಾರೆ. ರಾಜ್ಯ ಮಹಿಳಾ ನಿಲಯ ನಿವಾಸಿಗಳಾಗಿದ್ದ 21 ಮತ್ತು 19 ವರ್ಷದ ಯುವತಿಯರು ಪರಾರಿಯಾದವರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಅಂತರ್ ಧರ್ಮೀಯ ಯುವಕನನ್ನು ಒಬ್ಬರು ಮದುವೆಯಾಗಿದ್ದರು. ಆದರೆ ಆಗ 18 ವರ್ಷ ತುಂಬದೇ ಇದ್ದ ಕಾರಣ ಪ್ರಕರಣ ದಾಖಲಿಸಿ ಯುವಕನನ್ನು ಜೈಲಿಗೆ ಕಳುಹಿಸಲಾಗಿತ್ತು. ಯುವತಿ ಹೆತ್ತವರ ಮನೆಗೆ ಹೋಗಲು ಒಪ್ಪಿರಲಿಲ್ಲ.

ಅದೇ ರೀತಿ ಮತ್ತೊಬ್ಬರು 2020ರಲ್ಲಿ ತನ್ನ ಸಂಬಂಧಿ ಯುವಕನನ್ನು ಪ್ರೀತಿಸಿ ಮದುವೆಯಾಗಲು ಹೊರಟಿದ್ದರು. ಅವರಿಗೂ ಆಗ 18 ತುಂಬಿರಲಿಲ್ಲ. ಮದುವೆಯನ್ನು ತಡೆಯಲಾಗಿತ್ತು. ಆಕೆಯೂ ತಾಯಿ ಜೊತೆ ಹೋಗಲು ಒಪ್ಪಿರಲಿಲ್ಲ. ಹಾಗಾಗಿ ಇಬ್ಬರೂ ಸ್ಟೇ ಹೋಂನಲ್ಲಿದ್ದರು. ಕೊರೊನಾ ಬಂದರೂ ಲಕ್ಷಣಗಳು ಇಲ್ಲದ ಕಾರಣ ಅವರನ್ನು ಕೊವಿಡ್ ಕೇರ್ ಸೆಂಟರ್​ಗೆ ದಾಖಲಿಸಲಾಗಿತ್ತು. ತಡರಾತ್ರಿ ವಾಚ್ಮನ್ ಊಟಕ್ಕೆ ಹೋಗಿದ್ದ ಸಮಯದಲ್ಲಿ ಪರಾರಿಯಾಗಿದ್ದಾರೆ. ಪರಾರಿಯಾದ ಯುವತಿಯರು ಆ ಯುವಕರ ಜೊತೆಗೆ ಪರಾರಿಯಾಗಿರಬೇಕು ಎಂದು ಶಂಕಿಸಲಾಗಿದೆ. ಈ ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

ನಿಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು ಇದೆಯೇ ಒಮ್ಮೆ ಗಮನಿಸಿ

ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು

(Two Corona infected escapes from davanagere covid care center )

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!