AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಿನೈದು ದಿನದ ಅಂತರದಲ್ಲಿ ಬೆಳಗಾವಿಯ ಒಂದೇ ಕುಟುಂಬದ ಮೂವರು ಸಹೋದರರು ಕೊರೊನಾಗೆ ಬಲಿ

ಮೃತರು ಮೂಲತಃ ಧಾರವಾಡ ತಾಲೂಕಿನ ಹೆಬ್ಬಳ್ಳಿಯವರು. ಹಲವು ವರ್ಷಗಳಿಂದ ಇನಾಮ ಹೊಂಗಲಗೆ ಬಂದು ನೆಲೆಸಿದ್ದರು. ಹದಿನೈದು ದಿನಗಳ ಅಂತರದಲ್ಲಿ ಕುಟುಂಬಕ್ಕೆ ಆಸರೆಯಾಗಿದ್ದ ಮೂವರು ಕೊವಿಡ್​ಗೆ ಬಲಿಯಾಗಿದ್ದಾರೆ.

Follow us
sandhya thejappa
|

Updated on: May 27, 2021 | 8:35 AM

ಬೆಳಗಾವಿ: ಮಹಾಮಾರಿ ಕೊರೊನಾದಿಂದ 15 ದಿನದ ಅಂತರದಲ್ಲಿ ಮೂವರು ಸಹೋದರರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮ ಹೊಂಗಲ ಗ್ರಾಮದ ಗಂಗಾರಾಮ ಬಗಲೆ(52), ದುರ್ಗಾಣಿ ಬಗಲೆ(48), ಶಿವಾಜಿ ಬಗಲೆ(45) ಮೃತಪಟ್ಟಿದ್ದಾರೆ. ಮೃತರು ಮೂಲತಃ ಧಾರವಾಡ ತಾಲೂಕಿನ ಹೆಬ್ಬಳ್ಳಿಯವರು. ಹಲವು ವರ್ಷಗಳಿಂದ ಇನಾಮ ಹೊಂಗಲಗೆ ಬಂದು ನೆಲೆಸಿದ್ದರು. ಹದಿನೈದು ದಿನಗಳ ಅಂತರದಲ್ಲಿ ಕುಟುಂಬಕ್ಕೆ ಆಸರೆಯಾಗಿದ್ದ ಮೂವರು ಕೊವಿಡ್​ಗೆ ಬಲಿಯಾಗಿದ್ದಾರೆ.

ಹನಿಮೂನ್​ನಿಂದ ವಾಪಸಾಗಿದ್ದ ರಾಯಚೂರು ದಂಪತಿಗೆ ಕೊರೊನಾ; ಪತಿ ಬಲಿ ರಾಯಚೂರು: ದಂಪತಿ ಮದುವೆಯಾಗಿ ಕೇವಲ ಏಳು ತಿಂಗಳಾಗಿತ್ತು. ಮುಂದಿನ ಜೀವನದ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಆದರೆ ಮಹಾಮಾರಿ ಕೊರೊನಾ ಅವರ ಬದುಕಿಗೆ ಕೊಳ್ಳಿ ಇಟ್ಟಿದೆ. ಹನಿಮೂನ್​ನಿಂದ ವಾಪಸಾಗಿದ್ದ ದಂಪತಿಗೆ ಕೊರೊನಾ ದೃಢಪಟ್ಟಿದ್ದು, ಪತಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಸಿಂಧನೂರು ತಾಲೂಕಿನ ಕೋಳಬಾಳ ಗ್ರಾಮದ ಮಂಜುನಾಥ್(29) ಕೊರೊನಾಗೆ ಬಲಿಯಾದ ವ್ಯಕ್ತಿ. ನವ ದಂಪತಿ ಹನಿಮೂನಗೆ ಊಟಿ ಮತ್ತೀತರೆಡೆ ತೆರಳಿದ್ದರು. ದಂಪತಿಗೆ ಕೊರೊನಾ ಕಾಣಿಸಿಕೊಂಡಿತ್ತು. ಪತ್ನಿ ಗುಣಮುಖಳಾಗಿದ್ದು, ಪತಿ ಮಂಜುನಾಥ ಚಿಕಿತ್ಸೆ ಫಲಿಸದೆ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೊರೊನಾ ಸಂಕಷ್ಟಕ್ಕೆ ನಲುಗಿದ ಮಂಗಳಮುಖಿಯರು ದಾವಣಗೆರೆ: ಕೊರೊನಾದಿಂದ ಮಂಗಳಮುಖಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಾವಣಗೆರೆ ತಹಶೀಲ್ದಾರ್ ಗಿರೀಶ್ ಮಂಗಳಮುಖಿಯರಿಗೆ ಆಹಾರದ ಕಿಟ್ ವಿತರಣೆ ಮಾಡಿದ್ದಾರೆ. ದಾವಣಗೆರೆ ನಗರದ ಕೆಆರ್ ಮಾರುಕಟ್ಟೆ ಬಳಿ ನೂರು ಜನ ಮಂಗಳಮುಖಿಯರಿಗೆ ಆಹಾರದ ಕಿಟ್ ವಿತರಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ 670 ಜನ ಮಂಗಳಮುಖಿಯರಿದ್ದು, 360 ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ ಎಂದು ಮಂಗಳಮುಖಿಯರ ಸಂಘದ ಕಾರ್ಯದರ್ಶಿ ಚೈತ್ರಾ ಎಸ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರ ಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ನಾಯಿಯ ಸಹಾಯದಿಂದ ಪತ್ತೆ

ಅಪಘಾತದಲ್ಲಿ ಆರೋಗ್ಯಾಧಿಕಾರಿ ಸಾವು, ಕಣ್ಣ ಮುಂದೆ ಪ್ರಾಣ ಹೋಗುತ್ತಿದ್ದರೂ ಸಹಾಯಕ್ಕೆ ಮುಂದಾಗದ ಶಾಸಕ ಡಿ.ಎಸ್ ಸುರೇಶ್

Three brothers from same family have died from corona within a 15 day period belgaum

ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ