AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಜ್ ಕಾರ್ಯಕ್ರಮಕ್ಕೆ ಬಂದಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವು, ಮದ್ವೆ ಮನೆಯಲ್ಲಿ ನೀರವ ಮೌನ

ಕ್ರೈಸ್ತರ ರೋಜ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡಿದ್ದು, ಮನುಷ್ಯನ ಜೀವನದಲ್ಲಿ ಸಾವು ಹೇಗೆಲ್ಲಾ ಬರುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ.

ರೋಜ್ ಕಾರ್ಯಕ್ರಮಕ್ಕೆ ಬಂದಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವು, ಮದ್ವೆ ಮನೆಯಲ್ಲಿ ನೀರವ ಮೌನ
ಮದ್ವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು
TV9 Web
| Edited By: |

Updated on:Nov 25, 2022 | 12:26 AM

Share

ಉಡುಪಿ:  ಮದುವೆಗೆ  ಇನ್ನೇನು ಒಂದು ದಿನ ಇರುವ ಮುನ್ನ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು(ನವೆಂಬರ್ 24) ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ. ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮದುವೆಗೆ ಒಂದು ದಿನ ಮುಂಚೆ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮದಲ್ಲಿ ಎಲ್ಲರೂ ಖುಷಿಯಿಂದ ಇರುವಾಗ, ಇತ್ತ ಜೋಸ್ನಾ ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಸಂಬಂಧಿಕರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಇದರಿಂದ ಮದುವೆ ಮನೆಯಲ್ಲಿ ದುಃಖ ಮಡುಗಟ್ಟಿದೆ.

ಜೋಸ್ನಾ ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣ ಸಂಬಂಧಿಕರು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಜೋಸ್ನಾ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.

ಜೋಸ್ನಾಗೆ ಯಾವುದೇ ಅನಾರೋಗ್ಯ ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬಸ್ಥರು ಪ್ರಕಾರ ಆರೋಗ್ಯವಾಗಿದ್ದ ಯುವತಿ ಕುಳಿತಲ್ಲಿಯೇ ಕುಸಿದುಬಿದ್ದು ದುರಂತ ಅಂತ್ಯ ಕಂಡಿದ್ದಾಳೆ. ಅಂದ್ರೆ ಮನುಷ್ಯನ ಜೀವನದಲ್ಲಿ ಸಾವು ಹೇಗೆಲ್ಲಾ ಬರುತ್ತದೆ ಎನ್ನುವುದನ್ನು ಊಹಿಸಲು ಅಸಾಧ್ಯ. ಹಾಗೇ ಸಾವು ಯಾವ ರೂಪದಲ್ಲಾದರೂ ಬರಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:23 am, Fri, 25 November 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ