AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಜ್ ಕಾರ್ಯಕ್ರಮಕ್ಕೆ ಬಂದಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವು, ಮದ್ವೆ ಮನೆಯಲ್ಲಿ ನೀರವ ಮೌನ

ಕ್ರೈಸ್ತರ ರೋಜ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡಿದ್ದು, ಮನುಷ್ಯನ ಜೀವನದಲ್ಲಿ ಸಾವು ಹೇಗೆಲ್ಲಾ ಬರುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ.

ರೋಜ್ ಕಾರ್ಯಕ್ರಮಕ್ಕೆ ಬಂದಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವು, ಮದ್ವೆ ಮನೆಯಲ್ಲಿ ನೀರವ ಮೌನ
ಮದ್ವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು
TV9 Web
| Edited By: |

Updated on:Nov 25, 2022 | 12:26 AM

Share

ಉಡುಪಿ:  ಮದುವೆಗೆ  ಇನ್ನೇನು ಒಂದು ದಿನ ಇರುವ ಮುನ್ನ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು(ನವೆಂಬರ್ 24) ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ. ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮದುವೆಗೆ ಒಂದು ದಿನ ಮುಂಚೆ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮದಲ್ಲಿ ಎಲ್ಲರೂ ಖುಷಿಯಿಂದ ಇರುವಾಗ, ಇತ್ತ ಜೋಸ್ನಾ ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಸಂಬಂಧಿಕರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಇದರಿಂದ ಮದುವೆ ಮನೆಯಲ್ಲಿ ದುಃಖ ಮಡುಗಟ್ಟಿದೆ.

ಜೋಸ್ನಾ ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣ ಸಂಬಂಧಿಕರು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಜೋಸ್ನಾ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.

ಜೋಸ್ನಾಗೆ ಯಾವುದೇ ಅನಾರೋಗ್ಯ ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬಸ್ಥರು ಪ್ರಕಾರ ಆರೋಗ್ಯವಾಗಿದ್ದ ಯುವತಿ ಕುಳಿತಲ್ಲಿಯೇ ಕುಸಿದುಬಿದ್ದು ದುರಂತ ಅಂತ್ಯ ಕಂಡಿದ್ದಾಳೆ. ಅಂದ್ರೆ ಮನುಷ್ಯನ ಜೀವನದಲ್ಲಿ ಸಾವು ಹೇಗೆಲ್ಲಾ ಬರುತ್ತದೆ ಎನ್ನುವುದನ್ನು ಊಹಿಸಲು ಅಸಾಧ್ಯ. ಹಾಗೇ ಸಾವು ಯಾವ ರೂಪದಲ್ಲಾದರೂ ಬರಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:23 am, Fri, 25 November 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?