AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೂಡಿಕೆಗೆ ಮಾಡಲು 241 ಕಂಪನಿಗಳಿಗೆ ಅನುಮತಿ: ಎಂಬಿ ಪಾಟೀಲ್

ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಹೂಡಿಕೆಗೆ ಮಾಡಲು 241 ಕಂಪನಿಗಳಿಗೆ ಅನುಮತಿ ನೀಡಲಾಗಿದೆ. 241 ಯೋಜನೆಗಳಲ್ಲಿ 24 ಯೋಜನೆಗಳು ಬೆಂಗಳೂರಿನಲ್ಲಿವೆ ಎಂದು ವಿಧಾನ ಪರಿಷತ್​ ಪ್ರಶ್ನೋತ್ತರ ಕಾಲಾಪದ ವೇಳೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್​ ಸದನಕ್ಕೆ ತಿಳಿಸಿದರು.

ರಾಜ್ಯದಲ್ಲಿ ಹೂಡಿಕೆಗೆ ಮಾಡಲು 241 ಕಂಪನಿಗಳಿಗೆ ಅನುಮತಿ: ಎಂಬಿ ಪಾಟೀಲ್
ಸಚಿವ ಎಂಬಿ ಪಾಟೀಲ್​
ವಿವೇಕ ಬಿರಾದಾರ
|

Updated on: Feb 13, 2024 | 1:12 PM

Share

ಬೆಂಗಳೂರು, ಫೆಬ್ರವರಿ 13: ಬೆಂಗಳೂರು (Bengaluru) ಹೊರತುಪಡಿಸಿ ರಾಜ್ಯದಲ್ಲಿ ಹೂಡಿಕೆಗೆ ಮಾಡಲು 241 ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯ ಮಟ್ಟದ ಏಕ ಗವಾಕ್ಷಿ ಅನುಮೋದನೆ ಸಮಿತಿಯು ಒಟ್ಟು 6,407.82 ಕೋಟಿ ರೂಪಾಯಿ ಮೌಲ್ಯದ 128 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ರಾಜ್ಯಾದ್ಯಂತ 33,771 ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಾಮರ್ಥ್ಯ ಹೊಂದಿದೆ. 128 ಯೋಜನೆಗಳಲ್ಲಿ 24 ಯೋಜನೆಗಳು ಬೆಂಗಳೂರಿನಲ್ಲಿವೆ ಎಂದು ವಿಧಾನ ಪರಿಷತ್​ (Vidhan Parishad) ಪ್ರಶ್ನೋತ್ತರ ಕಾಲಾಪದ ವೇಳೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (MB Patil)​ ಸದನಕ್ಕೆ ತಿಳಿಸಿದರು. ಬಜೆಟ್​ (Budget) ಅಧಿವೇಶನದಲ್ಲಿ ಪರಿಷತ್​ ಸದಸ್ಯ ಕೇಶವ ಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉದ್ದಿಮೆ ಸ್ಥಾಪನೆಯಾಗಿದೆ. ಉದ್ಯೋಗ ಸೃಷ್ಟಿಸಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದರು.

ರಾಜ್ಯಕ್ಕೆ ಹರಿದುಬರಲಿದೆ 5.4 ಲಕ್ಷ ಕೋಟಿ ರೂ ಹೂಡಿಕೆ

ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಮೂಲಕ 57 ಕಂಪನಿಗಳೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ ಈ ಎಲ್ಲಾ 57 ಒಡಂಬಡಿಕೆಗಳ ಮೊತ್ತ 5,51,369 ಕೋಟಿ ರೂ ಆಗುತ್ತದೆ. ಈ ಎಲ್ಲಾ ಯೋಜನೆಗಳು ಜಾರಿಯಾಗಲು 3ರಿಂದ 4 ವರ್ಷ ಆಗಬಹುದು ಎಂದು ಸಚಿವ ಎಂಬಿ ಪಾಟೀಲ್ ಚಳಿಗಾಲದ ಅಧಿವೇಶನದಲ್ಲಿ​ ಹೇಳಿದ್ದರು.

ಹುಬ್ಬಳ್ಳಿಯಲ್ಲಿ ನಡೆದಿದ್ದ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳ ಜೊತೆ 1,275 ಕೋಟಿ ರೂ ಮೊತ್ತದ ಹೂಡಿಕೆಗೆ ಒಪ್ಪಂದಾಗಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದರು. ಇನ್ವೆಸ್ಟ್ ಕರ್ನಾಟಕ ಬೆಂಗಳೂರಿನಲ್ಲಿ 2022ರ ನವೆಂಬರ್​ನಲ್ಲಿ ನಡೆದಿತ್ತು. ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆದಿತ್ತು.

ಇದನ್ನೂ ಓದಿ: ರಾಜ್ಯದಲ್ಲಿ 6,407 ಕೋಟಿ ರೂ. ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ: 24,846 ಜನರಿಗೆ ಉದ್ಯೋಗ

ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ 57 ಒಡಂಬಡಿಕೆ (ಎಂಒಯು) ಪೈಕಿ 7 ಯೋಜನೆಗಳಿಗೆ ಎಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭಕ್ಕೆ 3-4 ವರ್ಷ ಆಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದರು.

ಇನ್ನು, ಹುಬ್ಬಳ್ಳಿಯ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ 16 ಒಪ್ಪಂದಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅನುಮೋದನೆ ನೀಡಲಾಗಿದೆ ಎಂದೂ ಸಚಿವರು ಸ್ಪಷ್ಟಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ