AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2 ಸೋಂಕು ಪತ್ತೆ: ಮಾಸ್ಕ್​ ಕಡ್ಡಾಯ, ಎಚ್ಚರಿಕೆ ಸೂಚನೆಗಳನ್ನು ನೀಡಿದ: ಸುಧಾಕರ್​​

ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2 ಸೋಂಕು ಪತ್ತೆಯಾಗಿದೆ. ಹೆಚ್​3ಎನ್2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯವಿದೆ. 60 ವರ್ಷ ಮೆಲ್ಪಟ್ಟವರಿಗೂ ಇದು ಸುಲಭವಾಗಿ ಹರಡುತ್ತೆ. ಗರ್ಭಿಣಿಯರು ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಹೇಳಿದ್ದಾರೆ.

ವಿವೇಕ ಬಿರಾದಾರ
|

Updated on:Mar 06, 2023 | 3:14 PM

Share

ಬೆಂಗಳೂರು: ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2(H3N2) ಸೋಂಕು ಪತ್ತೆಯಾಗಿದೆ. ಹೆಚ್​3ಎನ್2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯವಿದೆ. 60 ವರ್ಷ ಮೆಲ್ಪಟ್ಟವರಿಗೂ ಇದು ಸುಲಭವಾಗಿ ಹರಡುತ್ತೆ. ಗರ್ಭಿಣಿಯರು ಹೆಚ್ಚು ಎಚ್ಚರಿಕೆ ವಹಿಸಬೇಕು. ರಾಜ್ಯದ ಜನರು ಹೆಚ್ಚು ಜಾಗೃತವಾಗಿರಬೇಕು. ಸೀನುವಾಗ ಕೆಮ್ಮುವಾಗ ಮುನ್ನೇಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್(K. Sudhakar)​ ಹೇಳಿದ್ದಾರೆ.

ರಾಜ್ಯದಲ್ಲಿ ಹೆಚ್​3ಎನ್2 ಆತಂಕ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಹೆಚ್​3ಎನ್2 ಸೋಂಕು ನಿಯಂತ್ರಣ ಹಾಗೂ ಮುನ್ನೇಚ್ಚರಿಕೆ ಕ್ರಮಗಳ ಕುರಿತು ತಜ್ಞರು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಒಟ್ಟು 60 ಅಡೆನಾಯ್ಡ್ ವೈರಸ್ ಪತ್ತೆಯಾಗಿದೆ ಎಂದು ಹೇಳಿದರು.

ಕಳೆದ 6 ತಿಂಗಳಿನಿಂದ ಆರೋಗ್ಯ ಸಿಬ್ಬಂದಿಗಳು ಮಾಸ್ಕ್ ಧರಿಸುತ್ತಿಲ್ಲ. ಹೀಗಾಗಿ ಇವತ್ತಿನಿಂದಲೇ ರಾಜ್ಯದ ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಮಾಸ್ಕ್ ಹಾಕಿಕೊಳ್ಳಬೇಕು. ಬೆಂಗಳೂರಿನಲ್ಲಿ ಹೆಚ್​3ಎನ್2 ಎರಡು ​ಪ್ರಕರಣಗಳು ಪತ್ತೆಯಾಗಿವೆ. ಜನವರಿ ಯಿಂದ ಮಾರ್ಚ್​ವರೆಗೆ 20 H1N1 ಪ್ರಕರಣಗಳು ಪತ್ತೆಯಾಗಿವೆ. ಅಡಿನಾಯ್ಡ್ ವೈರಸ್ ಕೊಂಚ ಜಾಸ್ತಿ ಆಗಿದೆ. ಜನ ಗಾಬರಿ ಪಡಬೇಕಾದ ಅವಶ್ಯಕತೆ ಇಲ್ಲ. ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದಲ್ಲಿ ಔಷಧಿಯ ಕೊರತೆ ಇಲ್ಲ. ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗಿರುತ್ತೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದ್ದಾರೆ.

ಜನರು ವೈಯಕ್ತಿಕವಾಗಿ ಚಿಕಿತ್ಸೆ ತೆಗೆದುಕೊಳ್ಳುವುದು ಸೂಕ್ತವಲ್ಲ. ಅತಿಯಾಗಿ ರೋಗನಿರೋಧಕ ಔಷಧಿಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. ಬೇಸಿಗೆಗೆ ನಾವು ಕಾಲಿಟ್ಟಿದ್ದೇವೆ. ಬಿಸಿಗಾಳಿ ಇದ್ದು, ಬಿಸಿಲಿನಲ್ಲಿ ಅನಗತ್ಯವಾಗಿ ಓಡಾಟ ಮಾಡುವುದು ಜನರು ನಿಲ್ಲಿಸಬೇಕು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಬಿಸಿಲಿಗೆ ಹೋಗೋದು ಕಡಿಮೆ ಮಾಡಬೇಕು. ಇಲ್ಲದಿದ್ದರೇ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದರು.

ಈ ಸಂಬಂಧ ಆರೋಗ್ಯ ಇಲಾಖೆ ಇಂದು ಪ್ರತ್ಯೇಕ ಮಾರ್ಗಸೂಚಿ ನೀಡುತ್ತೆ. ಹೆಚ್​3ಎನ್2 ಕೂಡಾ ಕೊವಿಡ್ ಟೆಸ್ಟ್ ರೀತಿಯಲ್ಲಿಯೇ ಮಾಡಲಾಗುವುದು. ಸ್ವ್ಯಾಬ್​ ಟೆಸ್ಟ್ ಮೂಲಕ ಹೆಚ್​3ಎನ್2 ವೈರಸ್ ಪತ್ತೆ ಹಚ್ಚಬಹುದು. ಎಚ್3ಎನ್2 ಸೋಂಕು ಪತ್ತೆಯಾದರೂ ಗುಣಮುಖರಾಗಬಹುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Mon, 6 March 23

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ