AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆಗೆ 269 ವೈದ್ಯರು ಬಲಿ, ಬಿಹಾರದಲ್ಲೇ ಅತಿ ಹೆಚ್ಚು

ಭಾರತದಲ್ಲಿ ಅತಿ ಹೆಚ್ಚು ವೈದ್ಯರು ಮೃತಪಟ್ಟಿರುವ ರಾಜ್ಯವಾಗಿ ಬಿಹಾರವನ್ನು ಗುರುತಿಸಲಾಗಿದ್ದು ಬಿಹಾರದಲ್ಲಿ 78 ವೈದ್ಯರು ಕೊರೊನಾದ ಎರಡನೆ ಅಲೆಗೆ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ ಉತ್ತರ ಪ್ರದೇಶದಲ್ಲಿ 37 ವೈದ್ಯರು ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 28 ವೈದ್ಯರು ಮೃತಪಟ್ಟಿದ್ದು ದೆಹಲಿ ಮೂರನೇ ಸ್ಥಾನದಲ್ಲಿದೆ.

ಕೊರೊನಾ ಎರಡನೇ ಅಲೆಗೆ 269 ವೈದ್ಯರು ಬಲಿ, ಬಿಹಾರದಲ್ಲೇ ಅತಿ ಹೆಚ್ಚು
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on:May 18, 2021 | 2:33 PM

ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 269 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದಲ್ಲಿ 78 ವೈದ್ಯರು ಸೇರಿ ಒಟ್ಟು 269 ವೈದ್ಯರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ರಾಜ್ಯವಾರು ವಿಘಟನೆಯನ್ನು ವೈದ್ಯರ ರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಿಡುಗಡೆ ಮಾಡಿದೆ.

ಭಾರತದಲ್ಲಿ ಅತಿ ಹೆಚ್ಚು ವೈದ್ಯರು ಮೃತಪಟ್ಟಿರುವ ರಾಜ್ಯವಾಗಿ ಬಿಹಾರವನ್ನು ಗುರುತಿಸಲಾಗಿದ್ದು ಬಿಹಾರದಲ್ಲಿ 78 ವೈದ್ಯರು ಕೊರೊನಾದ ಎರಡನೆ ಅಲೆಗೆ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ ಉತ್ತರ ಪ್ರದೇಶದಲ್ಲಿ 37 ವೈದ್ಯರು ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 28 ವೈದ್ಯರು ಮೃತಪಟ್ಟಿದ್ದು ದೆಹಲಿ ಮೂರನೇ ಸ್ಥಾನದಲ್ಲಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 22 ಮತ್ತು 19 ವೈದ್ಯರನ್ನು ಕಳೆದುಕೊಂಡಿದೆ. ಮಹಾರಾಷ್ಟ್ರ, ತಮಿಳುನಾಡು, ಒಡಿಶಾ ಮತ್ತು ಪಶ್ಚಿಮ ಬಂಗಾಳ ಇತರ ರಾಜ್ಯಗಳಲ್ಲಿ ಎರಡಂಕಿಯ ಸಂಖ್ಯೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ. ಗೋವಾ ಮತ್ತು ಪುದುಚೇರಿ ತಲಾ ಒಂದು ಸಾವು, ಹರಿಯಾಣ, ಕೇರಳ, ತ್ರಿಪುರ ಮತ್ತು ಉತ್ತರಾಖಂಡ ತಲಾ ಎರಡು ಸಾವುಗಳು ಸಂಭವಿಸಿರುವುದು ವರದಿಯಾಗಿದೆ.

ಫೆಬ್ರವರಿಯಲ್ಲಿ, ಕೇಂದ್ರ ಸರ್ಕಾರವು ಕೊರೊನಾ ಸೋಂಕಿನಿಂದಾಗಿ ಮೃತಪಟ್ಟ ಒಟ್ಟು ವೈದ್ಯರ ಸಾವಿನ ಪ್ರಮಾಣವನ್ನು ಕಡಿಮೆ ವರದಿ ಮಾಡಿರುವುದರ ಬಗ್ಗೆ ಐಎಂಎ ಆಘಾತ ವ್ಯಕ್ತಪಡಿಸಿತ್ತು. ಕೊರೊನಾ ಮೊದಲ ಅಲೆಯಲ್ಲಿ 162 ವೈದ್ಯರು, 107 ದಾದಿಯರು ಮತ್ತು 44 ಆಶಾ ಕಾರ್ಯಕರ್ತರು ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ರಾಜ್ಯ ಸಚಿವೆ ಅಶ್ವಿನಿ ಕುಮಾರ್ ಚೌಬೆ ಆ ಸಮಯದಲ್ಲಿ ಘೋಷಿಸಿದ್ದರು. ಆದರೆ ಐಎಂಎ ಅಂಕಿಅಂಶಗಳು ಸಂಪೂರ್ಣವಾಗಿ ಭಿನ್ನವಾಗಿದ್ದವು. ಫೆಬ್ರವರಿ 3 ರವರೆಗೆ 744 ವೈದ್ಯರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ಐಎಂಎ ಅಧ್ಯಕ್ಷ ಡಾ.ಜೆ.ಜಯಲಾಲ್ ಅವರು ಚೌಬೆಗೆ ಬರೆದ ಪತ್ರದಲ್ಲಿ ತಿಳಿಸಿದ್ರು.

ಏಪ್ರಿಲ್ 2021 ರಲ್ಲಿ, ಎರಡನೇ ಅಲೆ ಪ್ರಾರಂಭವಾಗುವ ಮೊದಲು, ಒಂದು ವರ್ಷದಲ್ಲಿ 756 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಐಎಂಎ ವರದಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರವು ಕೇವಲ 168 ವೈದ್ಯರ ಕುಟುಂಬಗಳಿಗೆ ಮಾತ್ರ ಪರಿಹಾರವನ್ನು ನೀಡಿದೆ. ಉಳಿದ 600 ಕ್ಕೂ ಹೆಚ್ಚು ವೈದ್ಯರು ಸರ್ಕಾರದ ಭರವಸೆಯಂತೆ ಅರ್ಧದಷ್ಟು ಮೊತ್ತವನ್ನು ಸಹ ಪಡೆದಿಲ್ಲ ಎಂದು ಆರೋಪಿಸಲಾಗಿದೆ. ಹಾಗೂ ಕೊರೊನಾದಿಂದಲೇ ಸಾವು ಸಂಭವಿಸಿದೆ ಎಂಬ ಬಗ್ಗೆ ಸಾಬೀತುಪಡಿಸಲು ಕುಟುಂಬಗಳು ಹಲವಾರು ವರದಿಗಳನ್ನು ಸಲ್ಲಿಸಲು ಸರ್ಕಾರ ಒತ್ತಾಯಿಸಿದೆ.

ಇದನ್ನೂ ಓದಿ: ಕೋವಿಡ್-19 ಎರಡನೇ ಅಲೆ ಸೃಷ್ಟಿಸಿರುವ ಸ್ಥಿತಿ ಎದುರು ವೈದ್ಯರು ನಡೆಸುತ್ತಿರುವ ಹೋರಾಟ ಎಣಿಕೆಗೆ ನಿಲುಕದಂಥದ್ದು: ಪ್ರಧಾನಿ ಮೋದಿ

Published On - 2:30 pm, Tue, 18 May 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?