AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ 27 ವರ್ಷದ ಯುವಕ ಬಲಿ

ಕಳೆದ ವಾರ ಕೊವಿಡ್​ನಿಂದ ಆಸ್ಪತ್ರೆ ಸೇರಿದ್ದ ಯುವಕ ನಿನ್ನೆ ರಾತ್ರಿ ತೀವ್ರ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದಾನೆ. ಕೋರಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದು, ಯುವಕನ ತಂಗಿ ಸಹ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ. 50 ಸಾವಿರ ಖರ್ಚು ಮಾಡಿದರು ಬದುಕಲಿಲ್ಲ ಎಂದು ಕಣ್ಣೀರಿಡುತ್ತಿರುವ ಪೋಷಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ 27 ವರ್ಷದ ಯುವಕ ಬಲಿ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa|

Updated on:Apr 20, 2021 | 3:17 PM

Share

ಬೆಂಗಳೂರು: ಕೊರೊನಾ ಸೋಂಕಿನ ಅಟ್ಟಹಾಸ ಕಳೆದ ಬಾರಿಗಿಂತ ಈ ಬಾರಿ ಜೋರಾಗಿದೆ. ರಾಜ್ಯದಲ್ಲಿ ಸಾವಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಚಿತಾಗಾರದಲ್ಲಿ ಮೃತ ದೇಹಗಳನ್ನು ಹೊತ್ತು ತರುವ ಆ್ಯಂಬುಲೆನ್ಸ್ಗಳು ಸಾಲಾಗಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನೋವಿನ ಸಂಗತಿ ಒಂದೆಡೆಯಾದರೆ, ಇನ್ನೊಂದೆಡೆ ಕೊರೊನಾ ಎರಡನೆ ಅಲೆಗೆ ಹೆಚ್ಚಾಗಿ ಯುವ ಜನತೆ ಬಲಿಯಾಗುತ್ತಿದೆ. ಇಂದು (ಏಪ್ರಿಲ್ 20) 27 ವರ್ಷದ ಯುವಕ ಬಲಿಯಾಗಿದ್ದಾನೆ.

ಕಳೆದ ವಾರ ಕೊವಿಡ್​ನಿಂದ ಆಸ್ಪತ್ರೆ ಸೇರಿದ್ದ ಯುವಕ ತೀವ್ರ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದಾನೆ. ಕೋರಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದು, ಯುವಕನ ತಂಗಿ ಸಹ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ. 50 ಸಾವಿರ ಖರ್ಚು ಮಾಡಿದರು ಬದುಕಲಿಲ್ಲ ಎಂದು ಕಣ್ಣೀರಿಡುತ್ತಿರುವ ಪೋಷಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

31 ವರ್ಷದ ಯುವಕ ಕೊರೊನಾಗೆ ಬಲಿ ಕಲಬುರಗಿ: ಜಿಲ್ಲೆಯಲ್ಲಿ ಇಂದು 31 ವರ್ಷದ ಯುವಕ ಕೊರೊನಾಗೆ ತುತ್ತಾಗು ಸಾವನ್ನಪ್ಪಿದ್ದಾರೆ. ಮೇ 13ರಂದು ನಿಶ್ಚಿತಾರ್ಥ, ಮದುವೆ ನಿಗದಿಯಾಗಿತ್ತು. ಆದರೆ ಏಪ್ರಿಲ್ 16 ರಂದೇ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೆಮ್ಮು, ಜ್ವರ ಹಿನ್ನೆಲೆಯಲ್ಲಿ ಏಪ್ರಿಲ್ 15 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕಲಬುರಗಿ ನಗರದಲ್ಲಿ ಪೆಟ್ರೋಲ್ ಬಂಕ್ ನಡೆಸುತ್ತಿದ್ದ ಯುವಕನ ಸಾವನ್ನು ಕಂಡು ಪೋಷಕರು ಕಂಗಾಲಾಗಿದ್ದಾರೆ.

ಇದನ್ನೂ ಓದಿ

ಬಿಜೆಪಿ ಮುಖಂಡರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಬೆದರಿಕೆ: ರಾಮಾಂಜನೇಯ ಆರೋಪ

ಸಂಸದ ವಿ. ಶ್ರೀನಿವಾಸ ಪ್ರಸಾದ್ ಆಪ್ತ ಕಾರ್ಯದರ್ಶಿ ಶಂಕರ್ ಕೊರೊನಾಗೆ ಬಲಿ

(27 years young man died due to covid at bengaluru)

Published On - 3:09 pm, Tue, 20 April 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?