AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 2,856 ಜನರಿಗೆ ಬ್ಲ್ಯಾಕ್ ಫಂಗಸ್​ ಸೋಂಕು ದೃಢ; 191 ರೋಗಿಗಳು ಗುಣಮುಖ, 225 ಸಾವು

ಕರ್ನಾಟಕದಲ್ಲಿ ಈವರೆಗೆ 2,856 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 225 ಜನರು ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್‌ನಿಂದ ಇದುವರೆಗೆ 191 ರೋಗಿಗಳು ಗುಣಮುಖರಾಗಿದ್ದು, ಇನ್ನುಳಿದ 2,316 ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕರ್ನಾಟಕದಲ್ಲಿ 2,856 ಜನರಿಗೆ ಬ್ಲ್ಯಾಕ್ ಫಂಗಸ್​ ಸೋಂಕು ದೃಢ; 191 ರೋಗಿಗಳು ಗುಣಮುಖ, 225 ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 18, 2021 | 5:40 PM

Share

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 2,856 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 225 ಜನರು ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್‌ನಿಂದ ಇದುವರೆಗೆ 191 ರೋಗಿಗಳು ಗುಣಮುಖರಾಗಿದ್ದು, ಇನ್ನುಳಿದ 2,316 ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. 

ಕೊರೊನಾದಿಂದ ಗುಣಮುಖರಾಗಿದ್ದವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿತ್ತು. ಕೊರೊನಾದಿಂದ ಗುಣಮುಖರಾಗಿ ಮತ್ತೆ ಜೀವನ ಶುರು ಮಾಡುವಷ್ಟರಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ತಲೆದೋರುತ್ತಿತ್ತು. ಆದರೆ ಈಗ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಕಡಿಮೆಯಾಗಿದೆ. ಹಾಗೂ ಕೊವಿಡ್‌ನಿಂದ ಗುಣಮುಖರಾದವರಲ್ಲಿ ಹೆಚ್ಚಳವಾಗುತ್ತಿದೆ.

ಕೊವಿಡ್ ಇಲ್ಲದೆ ಇದ್ದಾಗ ಶೇ 50 ರಷ್ಟು ಮರಣ ಪ್ರಮಾಣ ಇತ್ತು. ಕೊವಿಡ್ ಜೊತೆಗೆ ಬ್ಲ್ಯಾಕ್ ಫಂಗಸ್ ತಗುಲಿದರೆ ಶೇ 80 ರಷ್ಟು ಮರಣ ಪ್ರಮಾಣವಿದೆ. ಕೊವಿಡ್ ನಿಂದ ಬ್ಲ್ಯಾಕ್ ಫಂಗಸ್ ಬಂದ್ರೆ ಸಾವು ಜಾಸ್ತಿಯಾಗುತ್ತಿದೆ. ಸದ್ಯ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ನೀಡುವ ಔಷಧ ದೊರೆಯುತ್ತಿದೆ.

ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ ಕೊರೊನಾ ವಿರುದ್ಧ ಹೋರಾಡಲು ಬಳಕೆಯಾಗುವ ಕೆಲವು ಔಷಧಗಳು, ಆಸ್ಪತ್ರೆ ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ತೆರಿಗೆ ಪ್ರಮಾಣವನ್ನು ಇಳಿಕೆ ಮಾಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮಂಡಳಿ (ಜಿಎಸ್​ಟಿ ಕೌನ್ಸಿಲ್) ಜೂನ್ 12 ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ತೆರಿಗೆ ವಿನಾಯಿತಿಯನ್ನು ಕೆಲವು ಮಂತ್ರಿಗಳ ಸಲಹೆ, ಶಿಫಾರಸಿನಂತೆ ಕೈಗೊಳ್ಳಲಾಗಿದೆ ಎಮದು ಜಿಎಸ್​ಟಿ ಮಂಡಳಿ ತಿಳಿಸಿದೆ.

ಟೋಸಿಲಿಜುಮಾಬ್, ಅಂಫೋಟೆರಿಸಿನ್ ಬಿ ಇಂಜೆಕ್ಷನ್ ಮೇಲಿನ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ. ರೆಮಿಡಿಸಿವರ್ ಇಂಜೆಕ್ಷನ್ ಮೇಲಿನ ಜಿಎಸ್‌ಟಿ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಅಲ್ಲದೆ, ಅಂಬ್ಯುಲೆನ್ಸ್ ಮೇಲಿನ ಜಿಎಸ್‌ಟಿ ದರ ಕೂಡ ಇಳಿಕೆಯಾಗಿದೆ.

ಬ್ಲ್ಯಾಕ್ ಫಂಗಸ್​ಗೆ​ ಸಂಬಂಧಿಸಿದ ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಕೊವಿಡ್​ಗೆ ಸಂಬಂಧಿಸಿದ 3 ವಸ್ತುಗಳಿಗೆ ಜಿಎಸ್​ಟಿ ಇಲ್ಲ ಎಂದು ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ವಿತ್ತ ಸಚಿವಾಲಯದಲ್ಲಿ ಜಿಎಸ್​ಟಿ ಮಂಡಳಿ ಸಭೆ ನಡೆದ ನಂತರ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನಲ್ಲಿ ಪೂಜೆ: ವಿಜಯೇಂದ್ರ ನಡೆಯ ಬಗ್ಗೆ ಹೈಕೋರ್ಟ್​ ಸಿಟ್ಟು

ಭಾರತದಲ್ಲಿನ ಕೊವಿಡ್ ಏರಿಕೆ ನಿಯಂತ್ರಿಸಲು ತುರ್ತು ಕ್ರಮ ಅಗತ್ಯ: ದಿ ಲ್ಯಾನ್ಸೆಟ್ ವರದಿಯಲ್ಲಿ 21 ತಜ್ಞರ ಅಭಿಪ್ರಾಯ

(2856 black fungus cases in Karnataka till today, 225 death 191 healed in state)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು