Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 2,856 ಜನರಿಗೆ ಬ್ಲ್ಯಾಕ್ ಫಂಗಸ್​ ಸೋಂಕು ದೃಢ; 191 ರೋಗಿಗಳು ಗುಣಮುಖ, 225 ಸಾವು

ಕರ್ನಾಟಕದಲ್ಲಿ ಈವರೆಗೆ 2,856 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 225 ಜನರು ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್‌ನಿಂದ ಇದುವರೆಗೆ 191 ರೋಗಿಗಳು ಗುಣಮುಖರಾಗಿದ್ದು, ಇನ್ನುಳಿದ 2,316 ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕರ್ನಾಟಕದಲ್ಲಿ 2,856 ಜನರಿಗೆ ಬ್ಲ್ಯಾಕ್ ಫಂಗಸ್​ ಸೋಂಕು ದೃಢ; 191 ರೋಗಿಗಳು ಗುಣಮುಖ, 225 ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Jun 18, 2021 | 5:40 PM

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 2,856 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 225 ಜನರು ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್‌ನಿಂದ ಇದುವರೆಗೆ 191 ರೋಗಿಗಳು ಗುಣಮುಖರಾಗಿದ್ದು, ಇನ್ನುಳಿದ 2,316 ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. 

ಕೊರೊನಾದಿಂದ ಗುಣಮುಖರಾಗಿದ್ದವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿತ್ತು. ಕೊರೊನಾದಿಂದ ಗುಣಮುಖರಾಗಿ ಮತ್ತೆ ಜೀವನ ಶುರು ಮಾಡುವಷ್ಟರಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ತಲೆದೋರುತ್ತಿತ್ತು. ಆದರೆ ಈಗ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಕಡಿಮೆಯಾಗಿದೆ. ಹಾಗೂ ಕೊವಿಡ್‌ನಿಂದ ಗುಣಮುಖರಾದವರಲ್ಲಿ ಹೆಚ್ಚಳವಾಗುತ್ತಿದೆ.

ಕೊವಿಡ್ ಇಲ್ಲದೆ ಇದ್ದಾಗ ಶೇ 50 ರಷ್ಟು ಮರಣ ಪ್ರಮಾಣ ಇತ್ತು. ಕೊವಿಡ್ ಜೊತೆಗೆ ಬ್ಲ್ಯಾಕ್ ಫಂಗಸ್ ತಗುಲಿದರೆ ಶೇ 80 ರಷ್ಟು ಮರಣ ಪ್ರಮಾಣವಿದೆ. ಕೊವಿಡ್ ನಿಂದ ಬ್ಲ್ಯಾಕ್ ಫಂಗಸ್ ಬಂದ್ರೆ ಸಾವು ಜಾಸ್ತಿಯಾಗುತ್ತಿದೆ. ಸದ್ಯ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ನೀಡುವ ಔಷಧ ದೊರೆಯುತ್ತಿದೆ.

ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ ಕೊರೊನಾ ವಿರುದ್ಧ ಹೋರಾಡಲು ಬಳಕೆಯಾಗುವ ಕೆಲವು ಔಷಧಗಳು, ಆಸ್ಪತ್ರೆ ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ತೆರಿಗೆ ಪ್ರಮಾಣವನ್ನು ಇಳಿಕೆ ಮಾಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮಂಡಳಿ (ಜಿಎಸ್​ಟಿ ಕೌನ್ಸಿಲ್) ಜೂನ್ 12 ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ತೆರಿಗೆ ವಿನಾಯಿತಿಯನ್ನು ಕೆಲವು ಮಂತ್ರಿಗಳ ಸಲಹೆ, ಶಿಫಾರಸಿನಂತೆ ಕೈಗೊಳ್ಳಲಾಗಿದೆ ಎಮದು ಜಿಎಸ್​ಟಿ ಮಂಡಳಿ ತಿಳಿಸಿದೆ.

ಟೋಸಿಲಿಜುಮಾಬ್, ಅಂಫೋಟೆರಿಸಿನ್ ಬಿ ಇಂಜೆಕ್ಷನ್ ಮೇಲಿನ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ. ರೆಮಿಡಿಸಿವರ್ ಇಂಜೆಕ್ಷನ್ ಮೇಲಿನ ಜಿಎಸ್‌ಟಿ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಅಲ್ಲದೆ, ಅಂಬ್ಯುಲೆನ್ಸ್ ಮೇಲಿನ ಜಿಎಸ್‌ಟಿ ದರ ಕೂಡ ಇಳಿಕೆಯಾಗಿದೆ.

ಬ್ಲ್ಯಾಕ್ ಫಂಗಸ್​ಗೆ​ ಸಂಬಂಧಿಸಿದ ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಕೊವಿಡ್​ಗೆ ಸಂಬಂಧಿಸಿದ 3 ವಸ್ತುಗಳಿಗೆ ಜಿಎಸ್​ಟಿ ಇಲ್ಲ ಎಂದು ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ವಿತ್ತ ಸಚಿವಾಲಯದಲ್ಲಿ ಜಿಎಸ್​ಟಿ ಮಂಡಳಿ ಸಭೆ ನಡೆದ ನಂತರ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನಲ್ಲಿ ಪೂಜೆ: ವಿಜಯೇಂದ್ರ ನಡೆಯ ಬಗ್ಗೆ ಹೈಕೋರ್ಟ್​ ಸಿಟ್ಟು

ಭಾರತದಲ್ಲಿನ ಕೊವಿಡ್ ಏರಿಕೆ ನಿಯಂತ್ರಿಸಲು ತುರ್ತು ಕ್ರಮ ಅಗತ್ಯ: ದಿ ಲ್ಯಾನ್ಸೆಟ್ ವರದಿಯಲ್ಲಿ 21 ತಜ್ಞರ ಅಭಿಪ್ರಾಯ

(2856 black fungus cases in Karnataka till today, 225 death 191 healed in state)

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ