AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ

ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗುತ್ತದೆ.

Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ
ಸಂಗ್ರಹ ಚಿತ್ರ
TV9 Web
| Edited By: |

Updated on: Jun 20, 2021 | 5:25 PM

Share

ಬೆಂಗಳೂರು: ವ್ಯಾಸಂಗ, ಉದ್ಯೋಗಗಳ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ 28 ದಿನದಲ್ಲೇ 2ನೇ ಡೋಸ್ ಕೊವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ. ಜುಲೈ 22ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ರಾಜ್ಯ ಕೊವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ವಿವಿ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ವಿದೇಶಗಳಿಗೆ ತೆರಳುವವರಿಗೆ ಲಸಿಕೆ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಮೊದಲೇ ಸೆಂಟ್ರಲ್‌ ಕಾಲೇಜ್‌ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ/ ಉದ್ಯೋಗಿಗಳಿಗೆ ಮೊದಲ ಡೋಸ್‌ ಲಸಿಕೆ ಕೊಡಲಾಗಿದೆ. ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು ‘ಸಮರ್ಥ ಅಧಿಕಾರಿ’ಗಳನ್ನಾಗಿ (competent authority) ನೇಮಕ ಮಾಡಲಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು ‘ಸಮರ್ಥ ಅಧಿಕಾರಿ’ ಎಂದು ಗುರುತಿಸಲಾಗಿದೆ. ವಿದೇಶಗಳಿಗೆ ಪಯಣಿಸುವ ಜನರಿಗೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಎರಡನೇ ಡೋಸ್‌ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣೇ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ: ಕೊವಿಡ್ 19ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ.ಪರಿಹಾರ ಕೊಡಲು ಸಾಧ್ಯವೇ ಇಲ್ಲ: ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್​ಗೆ ಅಫಿಡವಿಟ್​

ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್

(2nd dose covid vaccine for 28 days for migrants one who travel to foreign Delivery starts from July 22nd says DCM Dr CN Ashwath Narayan)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?