AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ

ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗುತ್ತದೆ.

Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ
ಸಂಗ್ರಹ ಚಿತ್ರ
Follow us
TV9 Web
| Updated By: guruganesh bhat

Updated on: Jun 20, 2021 | 5:25 PM

ಬೆಂಗಳೂರು: ವ್ಯಾಸಂಗ, ಉದ್ಯೋಗಗಳ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ 28 ದಿನದಲ್ಲೇ 2ನೇ ಡೋಸ್ ಕೊವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ. ಜುಲೈ 22ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ರಾಜ್ಯ ಕೊವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ವಿವಿ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ವಿದೇಶಗಳಿಗೆ ತೆರಳುವವರಿಗೆ ಲಸಿಕೆ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಮೊದಲೇ ಸೆಂಟ್ರಲ್‌ ಕಾಲೇಜ್‌ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ/ ಉದ್ಯೋಗಿಗಳಿಗೆ ಮೊದಲ ಡೋಸ್‌ ಲಸಿಕೆ ಕೊಡಲಾಗಿದೆ. ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು ‘ಸಮರ್ಥ ಅಧಿಕಾರಿ’ಗಳನ್ನಾಗಿ (competent authority) ನೇಮಕ ಮಾಡಲಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು ‘ಸಮರ್ಥ ಅಧಿಕಾರಿ’ ಎಂದು ಗುರುತಿಸಲಾಗಿದೆ. ವಿದೇಶಗಳಿಗೆ ಪಯಣಿಸುವ ಜನರಿಗೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಎರಡನೇ ಡೋಸ್‌ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣೇ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ: ಕೊವಿಡ್ 19ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ.ಪರಿಹಾರ ಕೊಡಲು ಸಾಧ್ಯವೇ ಇಲ್ಲ: ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್​ಗೆ ಅಫಿಡವಿಟ್​

ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್

(2nd dose covid vaccine for 28 days for migrants one who travel to foreign Delivery starts from July 22nd says DCM Dr CN Ashwath Narayan)

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್