AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು

ಜಿಲ್ಲೆಯಲ್ಲಿ ಇವತ್ತು ಒಟ್ಟು ಮೂರು ಕಡೆ ದಾಳಿ ಮಾಡಿ ಮೂರು ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ನಮ್ಮ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಪೊಲೀಸರ ಸಮೇತ ದಾಳಿ ನಡೆಸಿ ಮೂರು ಮದುವೆ ತಡೆಯಲಾಗಿದೆ.

ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು
ದಾಳಿ ನಡೆಸಿದ ಅಧಿಕಾರಿಗಳು
guruganesh bhat
|

Updated on: May 30, 2021 | 5:26 PM

Share

ಬಾಗಲಕೋಟೆ: ಲಾಕ್​ಡೌನ್​ ಮಧ್ಯೆಯೇ ನಡೆಯುತ್ತಿದ್ದ ಮೂರು ಬಾಲ್ಯವಿವಾಹಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಡೆಗಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಬೂದಿನಗಡದಲ್ಲಿ 12 ವರ್ಷದ ಬಾಲಕಿಗೆ ವಿವಾಹ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ದಾಳಿ ನಡೆಸಿದ ಅಧಿಕಾರಿಗಳು ಮದುವೆಯನ್ನು ತಡೆದು ಬಾಲಕಿಯನ್ನು ರಕ್ಷಿಸಿದ್ದಾರೆ. ಜತೆಗೆ ಬಾದಾಮಿ ತಾಲೂಕಿನ ಚಿಕ್ಕಹಸನಬಿಯಲ್ಲಿ 16 ವರ್ಷದ ಬಾಲಕಿಗೆ ವಿವಾಹಕ್ಕೆ ಯತ್ನಿಸುತ್ತಿದ್ದ ಮಾಹಿತಿ ತಿಳಿದು ದಾಳಿ ನಡೆಸಿದ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.

ಇವೆರಡೇ ಅಲ್ಲದೇ ಜಿಲ್ಲೆಯಲ್ಲಿ ಇನ್ನೂ ಒಂದು ಬಾಲ್ಯ ವಿವಾಹ ನಡೆಯುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಬಾಗಲಕೋಟೆ ತಾಲೂಕಿನ ತಿಮ್ಮಾಪುರದಲ್ಲಿ 22 ವರ್ಷದ ಯುವಕನ ಜತೆ 17 ವರ್ಷದ ಬಾಲಕಿಗೆ ವಿವಾಹ ನಡೆಸಲು ಸಿದ್ಧತೆ ನಡೆಸಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಮದುವೆ ನಡೆಯುತ್ತಿದ್ದ ವೇಳ ದಾಳಿ ನಡೆಸಿದ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.

ಬಾಲ್ಯ ವಿವಾಹದಿಂದ ರಕ್ಷಿಸಿದ ಮೂವರು ಬಾಲಕಿಯರಿಗೆ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದ್ದು, ಬಾಲಕಿಯರ ಪೋಷಕರಿಂದ ಅಧಿಕಾರಿಗಳು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

‘ಜಿಲ್ಲೆಯಲ್ಲಿ ಇವತ್ತು ಒಟ್ಟು ಮೂರು ಕಡೆ ದಾಳಿ ಮಾಡಿ ಮೂರು ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ನಮ್ಮ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಪೊಲೀಸರ ಸಮೇತ ದಾಳಿ ನಡೆಸಿ ಮೂರು ಮದುವೆ ತಡೆಯಲಾಗಿದೆ. ಮೂವರು ಬಾಲಕಿಯರನ್ನು ಸದ್ಯ ಬಾಗಲಕೋಟೆ ಬಾಲಕಿಯರ ಬಾಲಮಂದಿರದಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ.ಇನ್ನು ಬಾಲಕಿಯರ ಪೋಷಕರಿಂದ ಕಾನೂನು ಪ್ರಕಾರ ಮದುವೆ ವಯಸ್ಸಿಗೆ ಬರುವವರೆಗೂ ಮದುವೆ ಮಾಡೋದಿಲ್ಲ ಎಂಬಂತೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳಿಸಲಾಗಿದೆ’ ಎಂದು ಬಾಗಲಕೋಟೆಯ ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಅಶೋಕ ಬಸಣ್ಣವರ ಟಿವಿ9ಗೆ ತಿಳಿಸಿದ್ದಾರೆ.

Bagalakote Child and Women Officer

ಅಶೋಕ ಬಸಣ್ಣವರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಬಾಗಲಕೋಟೆ

ಇದನ್ನೂ ಓದಿ: ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

24ಗಂಟೆಯಲ್ಲಿ 1.65 ಲಕ್ಷ ಹೊಸ ಕೊವಿಡ್​ 19 ಪ್ರಕರಣಗಳು; ಸೋಂಕಿನ ಪ್ರಮಾಣದಲ್ಲಿ ಶೇ. 50ರಷ್ಟು ಇಳಿಕೆ (93 child marriages are stopped by govt officers in Bagalakote)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?