AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು

ಜಿಲ್ಲೆಯಲ್ಲಿ ಇವತ್ತು ಒಟ್ಟು ಮೂರು ಕಡೆ ದಾಳಿ ಮಾಡಿ ಮೂರು ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ನಮ್ಮ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಪೊಲೀಸರ ಸಮೇತ ದಾಳಿ ನಡೆಸಿ ಮೂರು ಮದುವೆ ತಡೆಯಲಾಗಿದೆ.

ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು
ದಾಳಿ ನಡೆಸಿದ ಅಧಿಕಾರಿಗಳು
Follow us
guruganesh bhat
|

Updated on: May 30, 2021 | 5:26 PM

ಬಾಗಲಕೋಟೆ: ಲಾಕ್​ಡೌನ್​ ಮಧ್ಯೆಯೇ ನಡೆಯುತ್ತಿದ್ದ ಮೂರು ಬಾಲ್ಯವಿವಾಹಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಡೆಗಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಬೂದಿನಗಡದಲ್ಲಿ 12 ವರ್ಷದ ಬಾಲಕಿಗೆ ವಿವಾಹ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ದಾಳಿ ನಡೆಸಿದ ಅಧಿಕಾರಿಗಳು ಮದುವೆಯನ್ನು ತಡೆದು ಬಾಲಕಿಯನ್ನು ರಕ್ಷಿಸಿದ್ದಾರೆ. ಜತೆಗೆ ಬಾದಾಮಿ ತಾಲೂಕಿನ ಚಿಕ್ಕಹಸನಬಿಯಲ್ಲಿ 16 ವರ್ಷದ ಬಾಲಕಿಗೆ ವಿವಾಹಕ್ಕೆ ಯತ್ನಿಸುತ್ತಿದ್ದ ಮಾಹಿತಿ ತಿಳಿದು ದಾಳಿ ನಡೆಸಿದ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.

ಇವೆರಡೇ ಅಲ್ಲದೇ ಜಿಲ್ಲೆಯಲ್ಲಿ ಇನ್ನೂ ಒಂದು ಬಾಲ್ಯ ವಿವಾಹ ನಡೆಯುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಬಾಗಲಕೋಟೆ ತಾಲೂಕಿನ ತಿಮ್ಮಾಪುರದಲ್ಲಿ 22 ವರ್ಷದ ಯುವಕನ ಜತೆ 17 ವರ್ಷದ ಬಾಲಕಿಗೆ ವಿವಾಹ ನಡೆಸಲು ಸಿದ್ಧತೆ ನಡೆಸಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಮದುವೆ ನಡೆಯುತ್ತಿದ್ದ ವೇಳ ದಾಳಿ ನಡೆಸಿದ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.

ಬಾಲ್ಯ ವಿವಾಹದಿಂದ ರಕ್ಷಿಸಿದ ಮೂವರು ಬಾಲಕಿಯರಿಗೆ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದ್ದು, ಬಾಲಕಿಯರ ಪೋಷಕರಿಂದ ಅಧಿಕಾರಿಗಳು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

‘ಜಿಲ್ಲೆಯಲ್ಲಿ ಇವತ್ತು ಒಟ್ಟು ಮೂರು ಕಡೆ ದಾಳಿ ಮಾಡಿ ಮೂರು ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ನಮ್ಮ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಪೊಲೀಸರ ಸಮೇತ ದಾಳಿ ನಡೆಸಿ ಮೂರು ಮದುವೆ ತಡೆಯಲಾಗಿದೆ. ಮೂವರು ಬಾಲಕಿಯರನ್ನು ಸದ್ಯ ಬಾಗಲಕೋಟೆ ಬಾಲಕಿಯರ ಬಾಲಮಂದಿರದಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ.ಇನ್ನು ಬಾಲಕಿಯರ ಪೋಷಕರಿಂದ ಕಾನೂನು ಪ್ರಕಾರ ಮದುವೆ ವಯಸ್ಸಿಗೆ ಬರುವವರೆಗೂ ಮದುವೆ ಮಾಡೋದಿಲ್ಲ ಎಂಬಂತೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳಿಸಲಾಗಿದೆ’ ಎಂದು ಬಾಗಲಕೋಟೆಯ ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಅಶೋಕ ಬಸಣ್ಣವರ ಟಿವಿ9ಗೆ ತಿಳಿಸಿದ್ದಾರೆ.

Bagalakote Child and Women Officer

ಅಶೋಕ ಬಸಣ್ಣವರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಬಾಗಲಕೋಟೆ

ಇದನ್ನೂ ಓದಿ: ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

24ಗಂಟೆಯಲ್ಲಿ 1.65 ಲಕ್ಷ ಹೊಸ ಕೊವಿಡ್​ 19 ಪ್ರಕರಣಗಳು; ಸೋಂಕಿನ ಪ್ರಮಾಣದಲ್ಲಿ ಶೇ. 50ರಷ್ಟು ಇಳಿಕೆ (93 child marriages are stopped by govt officers in Bagalakote)

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು