AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪೇಟೆ ನಿವಾಸಿಗಳೇ‌ ಹುಷಾರ್! ಅಕ್ಕ-ಪಕ್ಕದಲ್ಲಿಯೇ ಇದಾರೆ ಕೊರೊನಾ ಪೇಷಂಟ್ಸ್

ಬೆಂಗಳೂರು: ಚಿಕ್ಕಪೇಟೆಯಲ್ಲಿ ಈಗಾಗಲೇ ಕೊರೊನಾ ಮರಣ ಮೃದಂಗ ಬಾರಿಸಿದೆ. ಎಂ ಎಸ್ ಲೈನ್, ಕಿಲಾರಿ ಮುಖ್ಯ ರಸ್ತೆ, ಕಿಲಾರಿ ಮೂರನೇ ಕ್ರಾಸ್ ಫುಲ್ ಡೇಂಜರ್ ಜೋನ್​ನಲ್ಲಿದೆ. ಅಲ್ಲದೆ ಒಬ್ಬ ವ್ಯಕ್ತಿಯನ್ನ ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಈ ನಡುವೆ ಬೆಚ್ಚಿಬೀಳಿಸುವ ಸತ್ಯವೊಂದು ಬಹಿರಂಗವಾಗಿದೆ. ಮೂರು ಜನ ಕೊರೊನಾ ಸೋಂಕಿತರು ಒಂದೇ ಮನೆಯಲ್ಲೇ ಇದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ವಿಕ್ಟೋರಿಯಾ ಹಾಗೂ ಬೌರಿಂಗ್‌ನಲ್ಲಿ ಬೆಡ್ ಇಲ್ಲ ಅಂತ ವೈದ್ಯರು ವಾಪಸ್ ಮನೆಗೆ ಕಳಿಸಿದ್ದಾರೆ ಅನ್ನೂ ಆರೋಪ ಕೇಳಿ […]

ಚಿಕ್ಕಪೇಟೆ ನಿವಾಸಿಗಳೇ‌ ಹುಷಾರ್! ಅಕ್ಕ-ಪಕ್ಕದಲ್ಲಿಯೇ ಇದಾರೆ ಕೊರೊನಾ ಪೇಷಂಟ್ಸ್
ಆಯೇಷಾ ಬಾನು
| Edited By: |

Updated on: Jun 22, 2020 | 1:34 PM

Share

ಬೆಂಗಳೂರು: ಚಿಕ್ಕಪೇಟೆಯಲ್ಲಿ ಈಗಾಗಲೇ ಕೊರೊನಾ ಮರಣ ಮೃದಂಗ ಬಾರಿಸಿದೆ. ಎಂ ಎಸ್ ಲೈನ್, ಕಿಲಾರಿ ಮುಖ್ಯ ರಸ್ತೆ, ಕಿಲಾರಿ ಮೂರನೇ ಕ್ರಾಸ್ ಫುಲ್ ಡೇಂಜರ್ ಜೋನ್​ನಲ್ಲಿದೆ. ಅಲ್ಲದೆ ಒಬ್ಬ ವ್ಯಕ್ತಿಯನ್ನ ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಈ ನಡುವೆ ಬೆಚ್ಚಿಬೀಳಿಸುವ ಸತ್ಯವೊಂದು ಬಹಿರಂಗವಾಗಿದೆ.

ಮೂರು ಜನ ಕೊರೊನಾ ಸೋಂಕಿತರು ಒಂದೇ ಮನೆಯಲ್ಲೇ ಇದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ವಿಕ್ಟೋರಿಯಾ ಹಾಗೂ ಬೌರಿಂಗ್‌ನಲ್ಲಿ ಬೆಡ್ ಇಲ್ಲ ಅಂತ ವೈದ್ಯರು ವಾಪಸ್ ಮನೆಗೆ ಕಳಿಸಿದ್ದಾರೆ ಅನ್ನೂ ಆರೋಪ ಕೇಳಿ ಬಂದಿದೆ. ಹೀಗಾಗಿ ಮೂರು ಜನ ಕೊರೊನಾ ಸೋಂಕಿತರು ಮನೆಯಲ್ಲೇ ಇದ್ದಾರೆ ಎಂದು ಸ್ವತಃ ಚಿಕ್ಕಪೇಟೆ ಕಾರ್ಪೊರೇಟರ್ ಪತಿ ಶಿವಕುಮಾರ್ ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಈ ಬಗ್ಗೆ ನಿವಾಸಿಗಳು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ. ಕೊರೊನಾ ರೋಗಿ ನಮ್ಮ ಮನೆಯಲ್ಲೇ ಇದ್ದಾರೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಅಂತ ಅವರನ್ನ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಷನ್ ಮಾಡಿದ್ದೀವಿ. ನಮ್ಮ ಮನೆಯಲ್ಲಿ ಒಟ್ಟು 15 ಜನ‌ ಇದ್ದೀವಿ. ಭಯದಲ್ಲೇ ಬದುಕ್ತಾ ಇದ್ದೀವಿ.

ವಯಸ್ಸಾದವರು, ಮಕ್ಕಳು ಮನೆಯಲ್ಲಿ ಇದ್ದಾರೆ. ಅಧಿಕಾರಿಗಳು ಯಾರೂ ಸ್ಥಳಕ್ಕೆ ಬಂದಿಲ್ಲ. ನಾವೇ ನಮ್ಮ ರಸ್ತೆಯನ್ನ ಸೀಲ್​ಡೌನ್ ಮಾಡ್ಕೊಂಡಿದ್ದೀವಿ ಎಂದು ಮನೆಯವರು ಅಳಲು ತೋಡಿಕೊಂಡಿದ್ದಾರೆ. ಜೊತೆಗೆ ನಮಗೂ ಕೊರೊನಾ ಟೆಸ್ಟ್ ಅಗತ್ಯ ಇದೆ. ಆದ್ರೆ ಆರೋಗ್ಯಾಧಿಕಾರಿಗಳು ಇನ್ನೂ ಬಂದಿಲ್ಲ. ದಯವಿಟ್ಟು ಕೊರೊನಾ ರೋಗಿಯನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿಸಿ ಎಂದು ರೋಗಿಯ ಸಂಬಂಧಿ ಭಯ ವ್ಯಕ್ತಪಡಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ