AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವಾರದಲ್ಲಿ 3 ಆನೆಗಳ ಕಳೇಬರ ಪತ್ತೆ: 20 ದಿನದೊಳಗೆ ಸೂಕ್ತ ಕಾರಣ ನೀಡುವಂತೆ ಆರ್​​ಎಫ್​ಓಗೆ ನೋಟಿಸ್

ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ರಂಗನಾಥ ದೇವಾಲಯ ಹುಲಿಸಂರಕ್ಷಿತ ಪ್ರದೇಶ ಜೀವವೈವಿಧ್ಯತೆಗಳ ತಾಣ. ಹುಲಿ, ಆನೆ, ಕರಡಿ, ಕಾಡೆಮ್ಮೆ, ಚಿರತೆ ಜಿಂಕೆ ಮೊದಲಾದ ವನ್ಯಜೀವಿಗಳ ಆವಾಸಸ್ಥಾನವೂ ಆಗಿರುವ ಈ ಅರಣ್ಯದಲ್ಲಿ ಇತ್ತೀಚೆಗೆ ನಡೆದ ಆನೆಗಣತಿ ಪ್ರಕಾರ 619 ಆನೆಗಳಿವೆ. ಈ ದಟ್ಟಾರಣ್ಯದಲ್ಲಿ ಕೇವಲ ಮೂರ್ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಕಳೇಬರಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಒಂದೇ ವಾರದಲ್ಲಿ 3 ಆನೆಗಳ ಕಳೇಬರ ಪತ್ತೆ: 20 ದಿನದೊಳಗೆ ಸೂಕ್ತ ಕಾರಣ ನೀಡುವಂತೆ ಆರ್​​ಎಫ್​ಓಗೆ ನೋಟಿಸ್
ಒಂದೇ ವಾರದಲ್ಲಿ 3 ಆನೆಗಳ ಕಳೇಬರಹ ಪತ್ತೆ: 20 ದಿನಗಳ ಒಳಗೆ ಸೂಕ್ತ ಕಾರಣ ನೀಡುವಂತೆ ಆರ್​​ಎಫ್​ಓಗೆ ನೋಟಿಸ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 04, 2024 | 5:29 PM

Share

ಚಾಮರಾಜನಗರ, ಸೆಪ್ಟೆಂಬರ್​​ 04: ಬಿಳಿಗಿರಿ ರಂಗನಾಥ ದೇವಾಲಯ ಹುಲಿ (ಬಿ.ಆರ್‌.ಟಿ) ಸಂರಕ್ಷಿತ ಪ್ರದೇಶದಲ್ಲಿ ಕೇವಲ ಮೂರ್ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ (elephants) ಕಳೇಬರ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಒಂದು ಆನೆಯಂತು ಸತ್ತು ಏಳೆಂಟು ತಿಂಗಳ ನಂತರ ಪತ್ತೆಯಾಗಿರುವುದು ಅರಣ್ಯ ಇಲಾಖೆಯ ಕಾರ್ಯವೈಖರಿಯನ್ನೇ ಪ್ರಶ್ನಿಸುವಂತಿದೆ‌. ಹಾಗಿದ್ದರೆ ಅರಣ್ಯದೊಳಗೆ ಸಮರ್ಪಕ ಗಸ್ತು ನಡೆಯುತ್ತಿಲ್ಲವೇ? ವನ್ಯಜೀವಿಗಳ ಬೇಟೆ ಕಾಡುಗಳ್ಳತನ ನಡೆಯುತ್ತಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ.

ಮೂರ್ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಕಳೇಬರಗಳು ಪತ್ತೆ

ಜಿಲ್ಲೆಯ ಬಿ.ಆರ್‌.ಟಿ ಹುಲಿಸಂರಕ್ಷಿತ ಪ್ರದೇಶ ಜೀವವೈವಿಧ್ಯತೆಗಳ ತಾಣ. ಹುಲಿ, ಆನೆ, ಕರಡಿ, ಕಾಡೆಮ್ಮೆ, ಚಿರತೆ ಜಿಂಕೆ ಮೊದಲಾದ ವನ್ಯಜೀವಿಗಳ ಆವಾಸಸ್ಥಾನವೂ ಆಗಿರುವ ಈ ಅರಣ್ಯದಲ್ಲಿ ಇತ್ತೀಚೆಗೆ ನಡೆದ ಆನೆಗಣತಿ ಪ್ರಕಾರ 619 ಆನೆಗಳಿವೆ. ಈ ದಟ್ಟಾರಣ್ಯದಲ್ಲಿ ಕೇವಲ ಮೂರ್ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಕಳೇಬರಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ಬೈಲೂರು ವಲಯದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಎರಡು ಹಾಗೂ ಯಳಂದೂರು ವಲಯದಲ್ಲಿ ಒಂದು ಆನೆಯ ಕಳೇಬರಹ ಪತ್ತೆಯಾಗಿದ್ದು ಈ ಪೈಕಿ ಬೈಲೂರು ವಲಯದಲ್ಲಿ ಒಂದು ಆನೆ ಸತ್ತು ಏಳೆಂಟು ತಿಂಗಳೇ ಆಗಿದೆ. ಮತ್ತೊಂದು ಆನೆ ಸತ್ತು ಇಪ್ಪತ್ತು ದಿನಗಳ ಮೇಲಾಗಿದೆ. ಹಾಗಯೇ ಯಳಂದೂರು ವಲಯದಲ್ಲಿ ಪತ್ತೆಯಾಗಿರುವ ಆನೆ ಮೃತಪಟ್ಟು ಹಲವು ಒಂದುವಾರ ಕಳೆದಿದೆ. ಎರಡು ಆನೆಗಳ ದಂತ ಹಾಗೂ ಅಸ್ತಿಪಂಜರಗಳು ಕಂಡುಬಂದಿವೆ.

ಮೇಲ್ನೋಟಕ್ಕೆ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯಲೋಪ 

ಒಂದು ಆನೆಯ ದೇಹ ಸಂಪೂರ್ಣ ಕೊಳೆತು ಹೋಗಿದ್ದು 8 ತಿಂಗಳು ಕಳೆದಿದೆ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಇಷ್ಟು ದಿನಗಳಾದರೂ ಅರಣ್ಯ ಇಲಾಖೆಯ ಗಮನಕ್ಕೆ ಬಾರದೆ ಇರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ. ಅರಣ್ಯ ಇಲಾಖಾ ಸಿಬ್ಬಂದಿಯ ಗಸ್ತಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಅರಣ್ಯ ಸಿಬ್ಬಂದಿ ಸಮರ್ಪಕವಾಗಿ ಗಸ್ತು ನಡೆಸಿದ್ದರೆ, ಆನೆಗಳು ಮೃತಪಟ್ಟಿರುವುದು ಕಂಡುಬರುತ್ತಿತ್ತು. ಆದರೆ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇಲ್ಲಿ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಈ ಆನೆಗಳು ಮೇಲ್ನೋಟಕ್ಕೆ ಸ್ವಾಭಾವಿಕವಾಗಿ ಮೃತಪಟ್ಟಿವೆ ಎಂದು ಹೇಳಲಾಗುತ್ತಿದ್ದರು ಮರಣೋತ್ತರ ಪರೀಕ್ಷಾ ವರದಿ ಬಂದ ನಂತರವಷ್ಟೇ ನಿಖರ ಕಾರಣ ಗೊತ್ತಾಗಲಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇದೀಗ ತಾನೆ ವರ್ಗಾವಣೆ ಆಗಿ ಬಂದಿರುವ ಡಿಸಿಎಫ್ ಶ್ರೀಪತಿ ತನಿಖೆ ನಡೆಸಲು ಮುಂದಾಗಿದ್ದಾರೆ. ಬೈಲೂರು ವಲಯದ ಆರ್.ಓ.ಎಫ್ ಹಾಗೂ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿದ್ದು ಗಸ್ತಿನ ಕುರಿತು 20 ದಿನಗಳ ಒಳಗಡೆ ಸೂಕ್ತ ವರದಿ ನೀಡುವಂತೆ ಸೂಚಿಸಿದ್ದಾರೆ. ಈಗಾಗಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆನೆಗಳ ಕಳೇಬರಹದ ಸ್ಯಾಂಪಲ್​ನ ಎಫ್.ಎಸ್.ಎಲ್​ಗೆ ಕಳುಹಿಸಲಾಗಿದ್ದು ವರದಿ ಬಂದ ಬಳಿಕ ಆನೆಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಇದನ್ನೂ ಓದಿ: ಮೈಸೂರು ದಸರಾ ಗಜಪಡೆಯಲ್ಲಿ ಗಮನ ಸೆಳೆಯುತ್ತಿವೆ ಬಂಡೀಪುರದ ಮೂರು ಆನೆಗಳು! ಏನಿವುಗಳ ವಿಶೇಷ?

ಅರಣ್ಯ ಇಲಾಖೆಯಲ್ಲಿ ಶೇಕಡಾ 30 ರಷ್ಟು ಸಿಬ್ಬಂದಿ ಕೊರತೆ ಇದ್ದು ಈ ಕಾರಣದಿಂದಲೇ ಸಮರ್ಪಕ ಗಸ್ತು ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿಯೇ ಅರಣ್ಯದೊಳಗೆ ನಡೆಯುವ ಯಾವುದೇ ಬೆಳವಣಿಗೆ ಇಲಾಖೆಯ ಗಮನಕ್ಕೆ ಬಾರದೆ ಹೋಗುವ ಸಾಧ್ಯತೆಗಳು ಇವೆ‌. ಹಾಗಾಗಿ ಸಾಕಷ್ಟು ಸಿಬ್ಬಂದಿ ನೇಮಕ ಮಾಡುವ ಮೂಲಕ ಅರಣ್ಯ ಸಂರಕ್ಷಣೆಗೆ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವ ಅಗತ್ಯ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:22 pm, Wed, 4 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ