ಪ್ರತ್ಯೇಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

|

Updated on: Jun 23, 2023 | 11:00 AM

ಎಲ್ಲಾವುದಕ್ಕೂ ಆತ್ಮಹತ್ಯೆ ಪರಿಹಾರವಲ್ಲ ಎನ್ನುವುದು ತಿಳಿದೇ ಜನರು ಆತ್ಮಹತ್ಯೆಗೆ ಶಾರಣಾಗುತ್ತಿದ್ದಾರೆ. ಅದರಂತೆ ಇಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟಿದ್ದಾಳೆ.

ಪ್ರತ್ಯೇಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು
ಸಾಂದರ್ಭಿಕ ಚಿತ್ರ
Follow us on

ಚಾಮರಾಜನಗರ: ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ(suicide) ಶರಣಾಗಿರುವ ಘಟನೆ ಚಾಮರಾಜನಗರ(Chamarajanagar) ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ(48), ಸವಿತಾ, (40), ಸಿಂಚನಾ(13) ಆತ್ಮಹತ್ಯೆಗೆ ಶರಣಾದವರು. ಇಂದು (ಜೂನ್ 23) ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ‌ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಪಕ್ಕದ ಮನೆಯವರು ಹೋಗಿದ್ದಾಗ ಬೆಳಕಿಗೆ ಬಂದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ. ಅಮೃತಾ ಶರ್ಮ 27 ಮೃತಪಟ್ಟ ಯುವತಿ. ಈಕೆ ಲಖನೌ ಮೂಲದ ಮಹಿಳೆ ಕುಟುಂಬದ ಜೊತೆ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದಳು. ಆದ್ರೆ, ನಿನ್ನೆ (ಜೂನ್ 22) ರಾತ್ರಿ ಹತ್ತು ಗಂಟೆ ಸುಮಾರಿಗೆ ಏಕಾಏಕಿ ಅಪಾರ್ಟ್‌ಮೆಂಟ್ ಹತ್ತನೇ ಮಹಡಿಯಿಂದ ಜಿಗಿದಿದ್ದಾಳೆ.

ಸ್ಥಳೀಯರು ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಅಮೃತಾ ಶರ್ಮ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಅಂಬೇಡ್ಕರ್ ಅಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಈಕೆ ಎರಡು ವರ್ಷದ ಹಿಂದೆ ವಿವಾಹವಾಗಿದ್ದಳು. ಅಲ್ಲದೇ ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದರು. ಸದ್ಯ ಮೃತಳ ತಾಯಿ ಲಖನೌನಿಂದ ಬೆಂಗಳೂರಿಗೆ ಆಗಮಿಸುತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ