RTPS: ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದ 3 ಘಟಕಗಳು ಬಂದ್; ಅನಧಿಕೃತ ಲೋಡ್​ ಶೆಡ್ಡಿಂಗ್ ಆರೋಪ​​

ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿಯೇ ನೀಡಿದ್ದ 5 ಗ್ಯಾರಂಟಿಗಳಲ್ಲೊಂದಾದ 200 ಯೂನಿಟ್​ವರೆಗೆ ಉಚಿತ ವಿದ್ಯುತ್​ಗೆ ಈಗಾಗಲೇ ಚಾಲನೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ (Raichur Thermal Power Station) 3 ಯೂನಿಟ್​​ಗಳು​ ಸ್ಥಗಿತ ಮಾಡಲಾಗಿದೆ.

RTPS: ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದ 3 ಘಟಕಗಳು ಬಂದ್; ಅನಧಿಕೃತ ಲೋಡ್​ ಶೆಡ್ಡಿಂಗ್ ಆರೋಪ​​
ಆರ್​ಟಿಪಿಎಸ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2023 | 12:36 PM

ರಾಯಚೂರು:ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿಯೇ ನೀಡಿದ್ದ 5 ಗ್ಯಾರಂಟಿಗಳಲ್ಲೊಂದಾದ 200 ಯೂನಿಟ್​ವರೆಗೆ ಉಚಿತ ವಿದ್ಯುತ್​ಗೆ ಈಗಾಗಲೇ ಚಾಲನೆ ನೀಡಿದೆ. ರಾಜ್ಯದಲ್ಲಿ ವಿದ್ಯುತ್​​ನ ಅಗತ್ಯವೂ ಸಹಜವಾಗಿಯೇ ಹೆಚ್ಚಾಗಿದೆ. ಈ ಸಂದರ್ಭದಲ್ಲೇ ರಾಯಚೂರು(Raichur )ವಿದ್ಯುತ್ ಉತ್ಪಾದನಾ ಘಟಕದಲ್ಲಿ(Raichur Thermal Power Station) 3 ಯೂನಿಟ್​​ಗಳು​ ಸ್ಥಗಿತ ಮಾಡಲಾಗಿದೆ. ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆ ಸುಮಾರು 12000 ಮೆಗಾವ್ಯಾಟ್ ಇದ್ದು, ಆ ಪೈಕಿ ಆರ್​ಟಿಪಿಎಸ್ ಬಹುಪಾಲು ವಿದ್ಯುತ್​ನ್ನು ಪೂರೈಸುತ್ತಿತ್ತು. ಹೌದು ಒಟ್ಟು 1720 ಮೆಗಾವ್ಯಾಟ್ ವಿದ್ಯುತ್ ಪೂರೈಸುತ್ತಿದ್ದು, ಸದ್ಯ ಆರ್​ಟಿಪಿಎಸ್​ನ 3 ಯೂನಿಟ್​ಗಳು ಸ್ಥಗಿತಗೊಂಡಿರುವ ಹಿನ್ನೆಲೆ ಕೇವಲ‌ 400-500 ಮೆಗಾವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆ ಮಾಡಲಾಗುತ್ತಿದೆ.

ಸ್ಥಗಿತಗೊಂಡ ಯೂನಿಟ್​ಗಳ ದುರಸ್ತಿ ಕಾರ್ಯಕ್ಕೆ ಸಿಬ್ಬಂದಿ ಹರಸಾಹಸ

ಇನ್ನು ಕಳೆದ ಜನವರಿ 24 ರಂದು ಕೂಡ ತಾಂತ್ರಿಕ ಸಮಸ್ಯೆಯಿಂದ ಆರ್​ಟಿಪಿಎಸ್​ನ 4ಘಟಕಗಳು ಬಂದ್​ ಆಗಿದ್ದವು. ಹೌದು ಇರುವ ಒಟ್ಟು 8ಘಟಕಗಳ ಪೈಕಿ 4ನ್ನು ಬಂದ್​ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಸಮಸ್ಯೆಯಿಂದ 3 ಘಟಕಗಳನ್ನು ಸ್ಥಗಿತ ಮಾಡಲಾಗಿದೆ. ಈ ರೀತಿ ಪದೇ ಪದೆ ತಾಂತ್ರಿಕ ದೋಷದಿಂದ ಯೂನಿಟ್​ ಬಂದ್ ಆಗುತ್ತಿದ್ದು, ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆಯೆಂದು ಆರೋಪಿಸಿ ಆರ್​ಟಿಪಿಎಸ್​​ನ ಅಧಿಕಾರಿಗಳ ವಿರುದ್ಧ ಸ್ಥಳೀಯರು, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​

ಸಂಪೂರ್ಣ ಬಂದ್ ಆಗಿರುವ ಒಂದನೇ ಯುನಿಟ್

ಇನ್ನು ಈಗಾಗಲೇ ಇರುವ 8 ಘಟಕಗಳಲ್ಲಿ ಕಳೆದ ಒಂದು ವರ್ಷದ ಹಿಂದೆ ಕಲ್ಲಿದ್ದಲು ಪೂರೈಸುವ ಬಂಕರ್ ಕುಸಿದ ಪರಿಣಾಮ ಒಂದನೇ ಯುನಿಟ್ ಸಂಪೂರ್ಣ ಬಂದ್​ ಆಗಿದೆ. ಇತ್ತ ಮಳೆ ಅಭಾವದಿಂದ ಜಲ ಮೂಲಗಳ ಮೂಲಕ ವಿದ್ಯುತ್ ಉತ್ಪಾದಿಸುವುದು ಕುಂಠಿತವಾಗಿದ್ದು, ಹೀಗಾಗಿ ಕಲ್ಲಿದ್ದಲು ಮೂಲಕ ವಿದ್ಯುತ್ ಉತ್ಪಾದಿಸು ಘಟಕಗಳ ಮೇಲೆ ಒತ್ತಡ ಹೆಚ್ಚಿದೆ. ಈ ಮಧ್ಯೆ ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಮೂರು ಯುನಿಟ್​ಗಳು ಬಂದ್ ಆಗಿದೆ. ಈ ಬಗ್ಗೆ ಆರ್ ಟಿಪಿಎಸ್ ಅಧಿಕಾರಿಗಳು ‘ಇತ್ತ ನಿನ್ನೆಯಷ್ಟೇ ಆರನೇ ಯುನಿಟ್ ರಿಪೇರಿಯಾಗಿದೆ. ಸದ್ಯ ತಾಂತ್ರಿಕ ದೋಷದಿಂದ ಮೂರು ಯುನಿಟ್​ಗಳು ಸ್ಥಗಿತವಾಗಿದ್ದು, ಐದು ಯುನಿಟ್​ಗಳಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!