AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTPS: ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದ 3 ಘಟಕಗಳು ಬಂದ್; ಅನಧಿಕೃತ ಲೋಡ್​ ಶೆಡ್ಡಿಂಗ್ ಆರೋಪ​​

ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿಯೇ ನೀಡಿದ್ದ 5 ಗ್ಯಾರಂಟಿಗಳಲ್ಲೊಂದಾದ 200 ಯೂನಿಟ್​ವರೆಗೆ ಉಚಿತ ವಿದ್ಯುತ್​ಗೆ ಈಗಾಗಲೇ ಚಾಲನೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ (Raichur Thermal Power Station) 3 ಯೂನಿಟ್​​ಗಳು​ ಸ್ಥಗಿತ ಮಾಡಲಾಗಿದೆ.

RTPS: ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದ 3 ಘಟಕಗಳು ಬಂದ್; ಅನಧಿಕೃತ ಲೋಡ್​ ಶೆಡ್ಡಿಂಗ್ ಆರೋಪ​​
ಆರ್​ಟಿಪಿಎಸ್​
ಭೀಮೇಶ್​​ ಪೂಜಾರ್
| Edited By: |

Updated on: Jul 16, 2023 | 12:36 PM

Share

ರಾಯಚೂರು:ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿಯೇ ನೀಡಿದ್ದ 5 ಗ್ಯಾರಂಟಿಗಳಲ್ಲೊಂದಾದ 200 ಯೂನಿಟ್​ವರೆಗೆ ಉಚಿತ ವಿದ್ಯುತ್​ಗೆ ಈಗಾಗಲೇ ಚಾಲನೆ ನೀಡಿದೆ. ರಾಜ್ಯದಲ್ಲಿ ವಿದ್ಯುತ್​​ನ ಅಗತ್ಯವೂ ಸಹಜವಾಗಿಯೇ ಹೆಚ್ಚಾಗಿದೆ. ಈ ಸಂದರ್ಭದಲ್ಲೇ ರಾಯಚೂರು(Raichur )ವಿದ್ಯುತ್ ಉತ್ಪಾದನಾ ಘಟಕದಲ್ಲಿ(Raichur Thermal Power Station) 3 ಯೂನಿಟ್​​ಗಳು​ ಸ್ಥಗಿತ ಮಾಡಲಾಗಿದೆ. ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆ ಸುಮಾರು 12000 ಮೆಗಾವ್ಯಾಟ್ ಇದ್ದು, ಆ ಪೈಕಿ ಆರ್​ಟಿಪಿಎಸ್ ಬಹುಪಾಲು ವಿದ್ಯುತ್​ನ್ನು ಪೂರೈಸುತ್ತಿತ್ತು. ಹೌದು ಒಟ್ಟು 1720 ಮೆಗಾವ್ಯಾಟ್ ವಿದ್ಯುತ್ ಪೂರೈಸುತ್ತಿದ್ದು, ಸದ್ಯ ಆರ್​ಟಿಪಿಎಸ್​ನ 3 ಯೂನಿಟ್​ಗಳು ಸ್ಥಗಿತಗೊಂಡಿರುವ ಹಿನ್ನೆಲೆ ಕೇವಲ‌ 400-500 ಮೆಗಾವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆ ಮಾಡಲಾಗುತ್ತಿದೆ.

ಸ್ಥಗಿತಗೊಂಡ ಯೂನಿಟ್​ಗಳ ದುರಸ್ತಿ ಕಾರ್ಯಕ್ಕೆ ಸಿಬ್ಬಂದಿ ಹರಸಾಹಸ

ಇನ್ನು ಕಳೆದ ಜನವರಿ 24 ರಂದು ಕೂಡ ತಾಂತ್ರಿಕ ಸಮಸ್ಯೆಯಿಂದ ಆರ್​ಟಿಪಿಎಸ್​ನ 4ಘಟಕಗಳು ಬಂದ್​ ಆಗಿದ್ದವು. ಹೌದು ಇರುವ ಒಟ್ಟು 8ಘಟಕಗಳ ಪೈಕಿ 4ನ್ನು ಬಂದ್​ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಸಮಸ್ಯೆಯಿಂದ 3 ಘಟಕಗಳನ್ನು ಸ್ಥಗಿತ ಮಾಡಲಾಗಿದೆ. ಈ ರೀತಿ ಪದೇ ಪದೆ ತಾಂತ್ರಿಕ ದೋಷದಿಂದ ಯೂನಿಟ್​ ಬಂದ್ ಆಗುತ್ತಿದ್ದು, ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆಯೆಂದು ಆರೋಪಿಸಿ ಆರ್​ಟಿಪಿಎಸ್​​ನ ಅಧಿಕಾರಿಗಳ ವಿರುದ್ಧ ಸ್ಥಳೀಯರು, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​

ಸಂಪೂರ್ಣ ಬಂದ್ ಆಗಿರುವ ಒಂದನೇ ಯುನಿಟ್

ಇನ್ನು ಈಗಾಗಲೇ ಇರುವ 8 ಘಟಕಗಳಲ್ಲಿ ಕಳೆದ ಒಂದು ವರ್ಷದ ಹಿಂದೆ ಕಲ್ಲಿದ್ದಲು ಪೂರೈಸುವ ಬಂಕರ್ ಕುಸಿದ ಪರಿಣಾಮ ಒಂದನೇ ಯುನಿಟ್ ಸಂಪೂರ್ಣ ಬಂದ್​ ಆಗಿದೆ. ಇತ್ತ ಮಳೆ ಅಭಾವದಿಂದ ಜಲ ಮೂಲಗಳ ಮೂಲಕ ವಿದ್ಯುತ್ ಉತ್ಪಾದಿಸುವುದು ಕುಂಠಿತವಾಗಿದ್ದು, ಹೀಗಾಗಿ ಕಲ್ಲಿದ್ದಲು ಮೂಲಕ ವಿದ್ಯುತ್ ಉತ್ಪಾದಿಸು ಘಟಕಗಳ ಮೇಲೆ ಒತ್ತಡ ಹೆಚ್ಚಿದೆ. ಈ ಮಧ್ಯೆ ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಮೂರು ಯುನಿಟ್​ಗಳು ಬಂದ್ ಆಗಿದೆ. ಈ ಬಗ್ಗೆ ಆರ್ ಟಿಪಿಎಸ್ ಅಧಿಕಾರಿಗಳು ‘ಇತ್ತ ನಿನ್ನೆಯಷ್ಟೇ ಆರನೇ ಯುನಿಟ್ ರಿಪೇರಿಯಾಗಿದೆ. ಸದ್ಯ ತಾಂತ್ರಿಕ ದೋಷದಿಂದ ಮೂರು ಯುನಿಟ್​ಗಳು ಸ್ಥಗಿತವಾಗಿದ್ದು, ಐದು ಯುನಿಟ್​ಗಳಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ