AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTPS: ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದ 3 ಘಟಕಗಳು ಬಂದ್; ಅನಧಿಕೃತ ಲೋಡ್​ ಶೆಡ್ಡಿಂಗ್ ಆರೋಪ​​

ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿಯೇ ನೀಡಿದ್ದ 5 ಗ್ಯಾರಂಟಿಗಳಲ್ಲೊಂದಾದ 200 ಯೂನಿಟ್​ವರೆಗೆ ಉಚಿತ ವಿದ್ಯುತ್​ಗೆ ಈಗಾಗಲೇ ಚಾಲನೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ (Raichur Thermal Power Station) 3 ಯೂನಿಟ್​​ಗಳು​ ಸ್ಥಗಿತ ಮಾಡಲಾಗಿದೆ.

RTPS: ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದ 3 ಘಟಕಗಳು ಬಂದ್; ಅನಧಿಕೃತ ಲೋಡ್​ ಶೆಡ್ಡಿಂಗ್ ಆರೋಪ​​
ಆರ್​ಟಿಪಿಎಸ್​
Follow us
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2023 | 12:36 PM

ರಾಯಚೂರು:ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿಯೇ ನೀಡಿದ್ದ 5 ಗ್ಯಾರಂಟಿಗಳಲ್ಲೊಂದಾದ 200 ಯೂನಿಟ್​ವರೆಗೆ ಉಚಿತ ವಿದ್ಯುತ್​ಗೆ ಈಗಾಗಲೇ ಚಾಲನೆ ನೀಡಿದೆ. ರಾಜ್ಯದಲ್ಲಿ ವಿದ್ಯುತ್​​ನ ಅಗತ್ಯವೂ ಸಹಜವಾಗಿಯೇ ಹೆಚ್ಚಾಗಿದೆ. ಈ ಸಂದರ್ಭದಲ್ಲೇ ರಾಯಚೂರು(Raichur )ವಿದ್ಯುತ್ ಉತ್ಪಾದನಾ ಘಟಕದಲ್ಲಿ(Raichur Thermal Power Station) 3 ಯೂನಿಟ್​​ಗಳು​ ಸ್ಥಗಿತ ಮಾಡಲಾಗಿದೆ. ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆ ಸುಮಾರು 12000 ಮೆಗಾವ್ಯಾಟ್ ಇದ್ದು, ಆ ಪೈಕಿ ಆರ್​ಟಿಪಿಎಸ್ ಬಹುಪಾಲು ವಿದ್ಯುತ್​ನ್ನು ಪೂರೈಸುತ್ತಿತ್ತು. ಹೌದು ಒಟ್ಟು 1720 ಮೆಗಾವ್ಯಾಟ್ ವಿದ್ಯುತ್ ಪೂರೈಸುತ್ತಿದ್ದು, ಸದ್ಯ ಆರ್​ಟಿಪಿಎಸ್​ನ 3 ಯೂನಿಟ್​ಗಳು ಸ್ಥಗಿತಗೊಂಡಿರುವ ಹಿನ್ನೆಲೆ ಕೇವಲ‌ 400-500 ಮೆಗಾವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆ ಮಾಡಲಾಗುತ್ತಿದೆ.

ಸ್ಥಗಿತಗೊಂಡ ಯೂನಿಟ್​ಗಳ ದುರಸ್ತಿ ಕಾರ್ಯಕ್ಕೆ ಸಿಬ್ಬಂದಿ ಹರಸಾಹಸ

ಇನ್ನು ಕಳೆದ ಜನವರಿ 24 ರಂದು ಕೂಡ ತಾಂತ್ರಿಕ ಸಮಸ್ಯೆಯಿಂದ ಆರ್​ಟಿಪಿಎಸ್​ನ 4ಘಟಕಗಳು ಬಂದ್​ ಆಗಿದ್ದವು. ಹೌದು ಇರುವ ಒಟ್ಟು 8ಘಟಕಗಳ ಪೈಕಿ 4ನ್ನು ಬಂದ್​ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಸಮಸ್ಯೆಯಿಂದ 3 ಘಟಕಗಳನ್ನು ಸ್ಥಗಿತ ಮಾಡಲಾಗಿದೆ. ಈ ರೀತಿ ಪದೇ ಪದೆ ತಾಂತ್ರಿಕ ದೋಷದಿಂದ ಯೂನಿಟ್​ ಬಂದ್ ಆಗುತ್ತಿದ್ದು, ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆಯೆಂದು ಆರೋಪಿಸಿ ಆರ್​ಟಿಪಿಎಸ್​​ನ ಅಧಿಕಾರಿಗಳ ವಿರುದ್ಧ ಸ್ಥಳೀಯರು, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​

ಸಂಪೂರ್ಣ ಬಂದ್ ಆಗಿರುವ ಒಂದನೇ ಯುನಿಟ್

ಇನ್ನು ಈಗಾಗಲೇ ಇರುವ 8 ಘಟಕಗಳಲ್ಲಿ ಕಳೆದ ಒಂದು ವರ್ಷದ ಹಿಂದೆ ಕಲ್ಲಿದ್ದಲು ಪೂರೈಸುವ ಬಂಕರ್ ಕುಸಿದ ಪರಿಣಾಮ ಒಂದನೇ ಯುನಿಟ್ ಸಂಪೂರ್ಣ ಬಂದ್​ ಆಗಿದೆ. ಇತ್ತ ಮಳೆ ಅಭಾವದಿಂದ ಜಲ ಮೂಲಗಳ ಮೂಲಕ ವಿದ್ಯುತ್ ಉತ್ಪಾದಿಸುವುದು ಕುಂಠಿತವಾಗಿದ್ದು, ಹೀಗಾಗಿ ಕಲ್ಲಿದ್ದಲು ಮೂಲಕ ವಿದ್ಯುತ್ ಉತ್ಪಾದಿಸು ಘಟಕಗಳ ಮೇಲೆ ಒತ್ತಡ ಹೆಚ್ಚಿದೆ. ಈ ಮಧ್ಯೆ ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಮೂರು ಯುನಿಟ್​ಗಳು ಬಂದ್ ಆಗಿದೆ. ಈ ಬಗ್ಗೆ ಆರ್ ಟಿಪಿಎಸ್ ಅಧಿಕಾರಿಗಳು ‘ಇತ್ತ ನಿನ್ನೆಯಷ್ಟೇ ಆರನೇ ಯುನಿಟ್ ರಿಪೇರಿಯಾಗಿದೆ. ಸದ್ಯ ತಾಂತ್ರಿಕ ದೋಷದಿಂದ ಮೂರು ಯುನಿಟ್​ಗಳು ಸ್ಥಗಿತವಾಗಿದ್ದು, ಐದು ಯುನಿಟ್​ಗಳಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ