KSRTC ಬಸ್ ಡಿಕ್ಕಿ: 3 ವರ್ಷದ ಮಗು ಸ್ಥಳದಲ್ಲಿಯೇ ದುರ್ಮರಣ

ಕೊಡಗು: ಕುಶಾಲನಗರದ ಬೈಚನಹಳ್ಳಿ ಬಳಿ KSRTC ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ಗೀತಾ, ಪರಮೇಶ್ ದಂಪತಿ ಪುತ್ರ ಪೃತ್ವಿಕ್ ಮೃತ ಮಗು. ಮಡಿಕೇರಿಯಿಂದ ಮೈಸೂರು ಕಡೆ ಕೆಎಸ್ಆರ್​ಟಿಸಿ ಬಸ್ ಬರುತ್ತಿತ್ತು. ದೇವಸ್ಥಾನಕ್ಕೆ ತೆರಳಿದ್ದ ದಂಪತಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಸ್ ಬೈಕ್​ಗೆ ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ […]

KSRTC ಬಸ್ ಡಿಕ್ಕಿ: 3 ವರ್ಷದ ಮಗು ಸ್ಥಳದಲ್ಲಿಯೇ ದುರ್ಮರಣ
ಸಾಧು ಶ್ರೀನಾಥ್​

Updated on: Dec 16, 2019 | 5:40 PM

ಕೊಡಗು: ಕುಶಾಲನಗರದ ಬೈಚನಹಳ್ಳಿ ಬಳಿ KSRTC ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ಗೀತಾ, ಪರಮೇಶ್ ದಂಪತಿ ಪುತ್ರ ಪೃತ್ವಿಕ್ ಮೃತ ಮಗು.

ಮಡಿಕೇರಿಯಿಂದ ಮೈಸೂರು ಕಡೆ ಕೆಎಸ್ಆರ್​ಟಿಸಿ ಬಸ್ ಬರುತ್ತಿತ್ತು. ದೇವಸ್ಥಾನಕ್ಕೆ ತೆರಳಿದ್ದ ದಂಪತಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಸ್ ಬೈಕ್​ಗೆ ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us