AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟ, ಇಂದು ಬೆಂಗಳೂರಲ್ಲಿ 10 ಮಂದಿಗೆ ಸೋಂಕು!

ಬೆಂಗಳೂರು: ಮಹಾಮಾರಿ ಕೊರೊನಾ ಹೊಡೆತಕ್ಕೆ ಬೆಂಗಳೂರು ಪತರಗುಟ್ಟಿ ಹೋಗುತ್ತಿದೆ. ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟಗೊಂಡಿದ್ದು, ಬೆಂಗಳೂರಿನ 10 ಪ್ರಕರಣಗಳಲ್ಲಿ 9 ಪಾದರಾಯನಪುರದ್ದಾಗಿದೆ. ಒಂದು ಪ್ರಕರಣ ಮಾತ್ರ ದೀಪಾಂಜಲಿ ನಗರಕ್ಕೆ ಸೇರಿದ್ದು. ಈ 10 ಮಂದಿಯಲ್ಲಿ ಇಬ್ಬರಿಗೆ ಸಂಪರ್ಕ ಯಾರೆಂದೇ ಗೊತ್ತಿಲ್ಲ. ಪಾದರಾಯನಪುರದ ಪ್ರಕರಣ ಬೆಚ್ಚಿಬೀಳಿಸುವಂತಿದ್ದು, ಸೋಂಕಿತ 292 ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಈ 292 ಸೋಂಕಿತನಿಗೆ ತನ್ನ ಮಾಲೀಕನಿಂದ ಸೋಂಕು ಹಬ್ಬಿತ್ತು. ಲೆದರ್ ಜಾಕೆಟ್, ಬ್ಯಾಗ್ ತಯಾರಿ ಫ್ಯಾಕ್ಟರಿಯ ಮಾಲೀಕನಿಂದ ನೌಕರನಿಗೆ ಸೋಂಕು […]

ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟ, ಇಂದು ಬೆಂಗಳೂರಲ್ಲಿ 10 ಮಂದಿಗೆ ಸೋಂಕು!
ಸಾಧು ಶ್ರೀನಾಥ್​
|

Updated on:Apr 30, 2020 | 6:04 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಹೊಡೆತಕ್ಕೆ ಬೆಂಗಳೂರು ಪತರಗುಟ್ಟಿ ಹೋಗುತ್ತಿದೆ. ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟಗೊಂಡಿದ್ದು, ಬೆಂಗಳೂರಿನ 10 ಪ್ರಕರಣಗಳಲ್ಲಿ 9 ಪಾದರಾಯನಪುರದ್ದಾಗಿದೆ. ಒಂದು ಪ್ರಕರಣ ಮಾತ್ರ ದೀಪಾಂಜಲಿ ನಗರಕ್ಕೆ ಸೇರಿದ್ದು. ಈ 10 ಮಂದಿಯಲ್ಲಿ ಇಬ್ಬರಿಗೆ ಸಂಪರ್ಕ ಯಾರೆಂದೇ ಗೊತ್ತಿಲ್ಲ.

ಪಾದರಾಯನಪುರದ ಪ್ರಕರಣ ಬೆಚ್ಚಿಬೀಳಿಸುವಂತಿದ್ದು, ಸೋಂಕಿತ 292 ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಈ 292 ಸೋಂಕಿತನಿಗೆ ತನ್ನ ಮಾಲೀಕನಿಂದ ಸೋಂಕು ಹಬ್ಬಿತ್ತು. ಲೆದರ್ ಜಾಕೆಟ್, ಬ್ಯಾಗ್ ತಯಾರಿ ಫ್ಯಾಕ್ಟರಿಯ ಮಾಲೀಕನಿಂದ ನೌಕರನಿಗೆ ಸೋಂಕು ಅಟ್ಯಾಕ್ ಆಗಿತ್ತು.

ರಾಜ್ಯದಲ್ಲಿ ಇಂದು ಹೊಸದಾಗಿ 30ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿ 14, ವಿಜಯಪುರ 2, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

565 ಕೊರೊನಾ ಸೋಂಕಿತರ ಪೈಕಿ ಈವರೆಗೆ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿ ಇದುವರೆಗೂ ಕೊರೊನಾದಿಂದ 21 ಜನ ಮೃತಪಟ್ಟಿದ್ದು, ಸದ್ಯ 314 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:54 pm, Thu, 30 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು