AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ನಡುವೆಯೇ 300 ಹೊಸ ಖಾಸಗಿ ಲೇಔಟ್​ಗಳಿಗೆ ಅನುಮತಿ: ಶಾಸಕ ಶ್ರೀವತ್ಸ ಹೇಳಿದ್ದಿಷ್ಟು

ಲೋಕಾಯುಕ್ತ ಅಧಿಕಾರಿಗಳ ತನಿಖೆ ನಡುವೆ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಮಾಡಲಾಗಿದೆ. 300 ಹೊಸ ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡಲಾಗಿದೆ. ಹೊಸ ಲೇಔಟ್​​ಗಳ ಅನುಮತಿ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಲಾಗಿದೆ. 50:50 ಅನುಪಾತದ ಬಗ್ಗೆ ಮಹತ್ವದ ಚರ್ಚೆಯಾಗಿಲ್ಲ.

ಮುಡಾ ಹಗರಣ ನಡುವೆಯೇ 300 ಹೊಸ ಖಾಸಗಿ ಲೇಔಟ್​ಗಳಿಗೆ ಅನುಮತಿ: ಶಾಸಕ ಶ್ರೀವತ್ಸ ಹೇಳಿದ್ದಿಷ್ಟು
ಮುಡಾ ಹಗರಣ ನಡುವೆಯೇ 300 ಹೊಸ ಖಾಸಗಿ ಲೇಔಟ್​ಗಳಿಗೆ ಅನುಮತಿ: ಶಾಸಕ ಶ್ರೀವತ್ಸ ಹೇಳಿದ್ದಿಷ್ಟು
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 30, 2024 | 4:02 PM

Share

ಮೈಸೂರು, ನವೆಂಬರ್​​ 30: ಮುಡಾ ಹಗರಣದ (muda scam) ತನಿಖೆ ಚುರುಕೊಂಡಿದೆ. ಒಂದ್ಕಡೆ ಲೋಕಾಯುಕ್ತ ಪೊಲೀಸರು ಬಹುತೇಕ ತನಿಖೆ ಪೂರ್ಣಗೊಳಿಸಿದ್ದಾರೆ. ಮತ್ತೊಂದು ಕಡೆ ಇಡಿ ಅಧಿಕಾರಿಗಳು ಹಗರಣ ಜಾಲವನ್ನ ಬೇಧಿಸುತ್ತಿದ್ದಾರೆ. ಈ ಮಧ್ಯೆ 300 ಹೊಸ ಖಾಸಗಿ ಲೇಔಟ್​ಗಳಿಗೆ ಮುಡಾ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಹೇಳಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ತನಿಖೆ ನಡುವೆ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಮಾಡಲಾಗಿದೆ. ಮುಡಾ ಪ್ರಭಾರ ಅಧ್ಯಕ್ಷ ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ ಮಾಡಲಾಗಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್​ ಕೇಸ್​

ಮುಡಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಶ್ರೀವತ್ಸ, ಸಭೆಯಲ್ಲಿ 50:50 ಅನುಪಾತದ ಬಗ್ಗೆ ಮಹತ್ವದ ಚರ್ಚೆಯಾಗಿಲ್ಲ. ಹೊಸ ಲೇಔಟ್​​ಗಳ ಅನುಮತಿ ಬಗ್ಗೆ ಚರ್ಚಿಸಿ ಒಪ್ಪಿಗೆ ನೀಡಿದ್ದೇವೆ. ದೇಸಾಯಿ ಆಯೋಗದ ವರದಿ ಆಧಾರದ ಮೇಲೆ 50-50 ವಿಚಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಸೈಟ್​​ಗಳ ಲೆಕ್ಕ ಸಿಕ್ಕಿಲ್ಲ: ಶಾಸಕ ಹರೀಶ್ ಗೌಡ

ಚಾಮರಾಜ ಕಾಂಗ್ರೆಸ್​ ಶಾಸಕ ಹರೀಶ್ ಗೌಡ ಪ್ರತಿಕ್ರಿಯಿಸಿದ್ದು, 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಸೈಟ್​​ಗಳ ಲೆಕ್ಕ ಸಿಕ್ಕಿಲ್ಲ. ಅಕ್ರಮ ಸೈಟ್, ಸಕ್ರಮ ಸೈಟ್ ಬೇರ್ಪಡಿಸುವುದೇ ಕಷ್ಟವಾಗಿದೆ. ಕಳೆದ ಸಭೆಯಲ್ಲಿ 4 ಸಾವಿರ ಸೈಟ್ ಬಗ್ಗೆ ಮಾಹಿತಿ ಕಲೆಹಾಕಿದ್ದೆ. ಈಗ ಆ ಸಂಖ್ಯೆಯು ಇನ್ನೂ ಹೆಚ್ಚಳವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ

ಮುಂದಿನ ಪ್ರಾಧಿಕಾರದ ಸಭೆಯಲ್ಲಿ 50:50 ಅನುಪಾತದ ಬಗ್ಗೆಯೇ ಪ್ರತ್ಯೇಕವಾದ ಚರ್ಚೆ ಮಾಡಲು ತೀರ್ಮಾನಿಸಲಾಗಿದೆ. 50:50 ಅನುಪಾತದಲ್ಲಿ ಹಗರಣವಾಗಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದರಲ್ಲಿ ಮುಚ್ಚಿಡುವುದು ಏನು ಇಲ್ಲ ಎಂದು ಹೇಳಿದ್ದಾರೆ.

240 ಬಡಾವಣೆ ಹಸ್ತಾಂತರ

ಇನ್ನು ಮುಡಾದಿಂದ ಬಡಾವಣೆಗಳ ಹಸ್ತಾಂತರ ಪ್ರಕ್ರಿಯೆ ವಿಚಾರವಾಗಿ ಮೊದಲ ಹಂತದ ಹಸ್ತಾಂತರ ಪ್ರಕ್ರಿಯೆ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ 240 ಬಡಾವಣೆ ಹಸ್ತಾಂತರ ಮಾಡಲಾಗಿದೆ. ಮೈಸೂರು ಪಾಲಿಕೆ ಹೂಟಗಳ್ಳಿ ನಗರಸಭೆ ಬೋಗಾದಿ ಶ್ರೀರಾಂಪುರ ರಮ್ಮನಹಳ್ಳಿ ಪಟ್ಟಣ ಪಂಚಾಯತಿಗಳಿಗೆ ಹಸ್ತಾಂತರ ಮಾಡಲಾಗಿದೆ. ಉಳಿದ 700 ಬಡಾವಣೆಗಳು ಡಿಸೆಂಬರ್ ಅಂತ್ಯದೊಳಗೆ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ