AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಸಿಬ್ಬಂದಿ, ಅಗ್ನಿಶಾಮದ ದಳದ ಸಮಯಪ್ರಜ್ಞೆಯಿಂದ ಮೈಸೂರಿನಲ್ಲಿ 300ಕ್ಕೂ ಹೆಚ್ಚು ರೋಗಿಗಳು ಬಚಾವ್

Mysuru Medical Oxygen: ಆಸ್ಪತ್ರೆಯಲ್ಲಿ ದಾಖಲಾಗಿದ್ದ 300 ಕ್ಕೂ ಹೆಚ್ಚು ರೋಗಿಗಳಿಗೆ ಇದೇ ಆಕ್ಸಿಜನ್ ಶೇಖರಣಾ ಘಟಕದಿಂದ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಮಂಜುಗಡ್ಡೆಯಿಂದ ಆಕ್ಸಿಜನ್ ಸರಬರಾಜು ಯಂತ್ರದ ಪೈಪ್​ಗಳು ಬ್ಲಾಕ್ ಆಗಿರುವುದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿ ರೋಗಿಗಳ ಜೀವ ಉಳಿಸಿದರು.

ಆಸ್ಪತ್ರೆ ಸಿಬ್ಬಂದಿ, ಅಗ್ನಿಶಾಮದ ದಳದ ಸಮಯಪ್ರಜ್ಞೆಯಿಂದ ಮೈಸೂರಿನಲ್ಲಿ 300ಕ್ಕೂ ಹೆಚ್ಚು ರೋಗಿಗಳು ಬಚಾವ್
ಆಕ್ಸಿಜನ್ ಸಿಲಿಂಡರ್ (ಪ್ರಾತಿನಿಧಿಕ ಚಿತ್ರ)
guruganesh bhat
| Edited By: |

Updated on: May 04, 2021 | 10:43 PM

Share

ಮೈಸೂರು: ಎಲ್ಲೆಲ್ಲೂ ಆಕ್ಸಿಜನ್ ಕೊರತೆಯೇ ಸದ್ದು ಮಾಡುತ್ತಿದೆ. ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ ರೋಗಿಗಳು ಪ್ರಾಣ ಬಿಟ್ಟ ದುರ್ಘಟನೆ ಕರ್ನಾಟಕವನ್ನು ಬೆಚ್ಚಿಬೀಳಿಸಿದೆ. ಈ ಬೆನ್ನಲ್ಲೇ ಮೈಸೂರಿನ ಆಸ್ಪತ್ರೆಯೊಂದರ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಾಹಸದಿಂದ ಮುನ್ನೂರಕ್ಕೂ ಹೆಚ್ಚು ರೋಗಿಗಳ ಪ್ರಾಣ ಉಳಿದಿದೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಕೊವಿಡ್ ಸೋಂಕಿತರಿಗೆ ಸರಬರಾಜು ಮಾಡುವ ಆಕ್ಸಿಜನ್ ಶೇಖರಣಾ ಘಟಕದಲ್ಲಿ ಮಂಜುಗಡ್ಡೆಯಿಂದ ಆಕ್ಸಿಜನ್ ಸರಬರಾಜು ಯಂತ್ರದ ಪೈಪ್​ಗಳು ಸ್ಥಗಿತಗೊಂಡಿದ್ದವು. ಆಸ್ಪತ್ರೆಯಲ್ಲಿ ದಾಖಲಾಗಿದ್ದ 300 ಕ್ಕೂ ಹೆಚ್ಚು ರೋಗಿಗಳಿಗೆ ಇದೇ ಆಕ್ಸಿಜನ್ ಶೇಖರಣಾ ಘಟಕದಿಂದ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಮಂಜುಗಡ್ಡೆಯಿಂದ ಆಕ್ಸಿಜನ್ ಸರಬರಾಜು ಯಂತ್ರದ ಪೈಪ್​ಗಳು ಬ್ಲಾಕ್ ಆಗಿರುವುದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿ ರೋಗಿಗಳ ಜೀವ ಉಳಿಸಿದರು.

ಮಂಜುಗಡ್ಡೆಯಿಂದ ಆಕ್ಸಿಜನ್ ಸರಬರಾಜು ಯಂತ್ರದ ಪೈಪ್​ಗಳು ಬ್ಲಾಕ್ ಆಗಿರುವುದು ಆಸ್ಪತ್ರೆಯ ಸಿಬ್ಬಂದಿಯ ಗಮನಕ್ಕೆ ಬಂದಿತ್ತು. ತಕ್ಷಣವೇ ಎಚ್ಚೆತ್ತ ಆಸ್ಪತ್ರೆ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ವಿಷಯ ತಲುಪಿಸಿದರು. ಕೊಂಚವೂ ತಡ ಮಾಡದೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಅಗ್ನಿಶಾಮಕ ವಾಹನಗಳ ಸಹಾಯದಿಂದ ಕಟ್ಟಿಕೊಂಡಿರುವ ಮಂಜುಗೆಡ್ಡೆಯನ್ನು ತೆರವುಗೊಳಿಸಲು ಹರಸಾಹಸಪಟ್ಟರು. ಅಗ್ನಿಶಾಮಕದ ದಳದ ಡಿಎಫ್‌ಓ ರಾಜು ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಂತೂ ಘನೀಕರಿಸಿದ ಮಂಜುಗಡ್ಡೆಗೆ ನೀರು ಸಿಂಪಡಿಸುವ ಮೂಲಕ ಆಕ್ಸಿಜನ್ ಪೂರೈಕೆಗೆ ಉಂಟಾಗಿದ್ದ ತಡೆಯನ್ನು ನಿವಾರಿಸಿದರು. ಬಳಿಕ ಎಂದಿನಂತೆ ಕೊವಿಡ್ ರೋಗಿಗಳಿಗೆ ಸಹಜವಾಗಿ ಆಕ್ಸಿಜನ್ ಪೂರೈಕೆ ಸುಗಮವಾಗಿ ನಡೆಯಿತು.

ಇದನ್ನೂ ಓದಿ:Karnataka Covid 19 update: ರಾಜ್ಯದಲ್ಲಿ ಇಂದು 44,631 ಕೊರೊನಾ ಕೇಸ್​ಗಳು ದಾಖಲು; ಇದರಲ್ಲಿ ಅರ್ಧದಷ್ಟು ಬೆಂಗಳೂರಿನಲ್ಲೇ ! 

ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ ಇಲ್ಲವೋ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಎಚ್ಚರಿಕೆ

(300 patients life saved after fire brigade solve blocked Medical Oxygen storage pipes in Mysore )

Follow Us
guruganesh bhat
guruganesh bhat
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ