AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯದಲ್ಲಿ 32 ಜೀವಂತ ನಾಡಬಾಂಬುಗಳು ಪತ್ತೆಯಾಗಿರುವಂತಹ ಘಟನೆ ನಡೆದಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಲ್ವರು ದುಷ್ಕರ್ಮಿಗಳು ಇವುಗಳನ್ನು ಇಟ್ಟಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೈಕ್‌ ಮತ್ತು ಬಾಂಬುಗಳು ಸಿಕ್ಕಿವೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ
ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Dec 26, 2024 | 4:31 PM

Share

ದಾವಣಗೆರೆ, ಡಿಸೆಂಬರ್​ 26: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯ ಸರ್ವೆ ನಂಬರ್ 61ರಲ್ಲಿ 32 ಜೀವಂತ ನಾಡಬಾಂಬ್​ಗಳು (Bombs) ಪತ್ತೆ ಆಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿವೆ. ನಾಡಬಾಂಬ್​ ಪತ್ತೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್, ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಡು ಪ್ರಾಣಿಗಳ ಬೇಟೆಗಾಗಿ ನಾಲ್ವರು ದುಷ್ಕರ್ಮಿಗಳು ನಾಡಬಾಂಬ್​ ಇಟ್ಟಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನ ಕಂಡು KA 68 E 5881, KA 31 J 2307 ಸಂಖ್ಯೆಯ 2 ಬೈಕ್ ಬಿಟ್ಟು ನಾಲ್ವರು ಪರಾರಿ ಆಗಿದ್ದಾರೆ. ಗಸ್ತು ತಿರುಗುತ್ತಿದ್ದಾಗ ರಸ್ತೆ ಬದಿ 2 ಬೈಕ್​ಗಳನ್ನು ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ಅನುಮಾನಗೊಂಡು ಕಾಡಿನೊಳಗೆ ಹೋದಾಗ ಬಾಂಬ್ ಇಡಲು ನಾಲ್ವರು ಸ್ಕೆಚ್ ಹಾಕಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಮೈಸೂರು: ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್​ ಸೇರಿ ಭಾರಿ ಸ್ಫೋಟಕಗಳು ಪತ್ತೆ

ಬಾಂಬ್ ಇಡಲು ಬಂದಿದ್ದ ನಾಲ್ವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಮಾದಾಪುರ ಗ್ರಾಮದ ತಿಮ್ಮಪ್ಪ ಮತ್ತು ಗುಡ್ಡಪ್ಪ ಎಂಬುದು ತಿಳಿದುಬಂದಿದೆ. ಇಬ್ಬರನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಜೈಲಿಗಟ್ಟಿದ್ದಾರೆ. ಇನ್ನು ಉಳಿದ ಇಬ್ಬರ ಮಾಹಿತಿಯನ್ನು ನ್ಯಾಮತಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಈ ಹಿಂದೆಯೂ ಆರೋಪಿಗಳು ಇದೇ ಅರಣ್ಯದಲ್ಲಿ ನಾಡಬಾಂಬ್ ಇಟ್ಟಿದ್ದರು.

ಬೇಟೆಗಾಗಿ ತಯಾರಿಸಿದ್ದ ಮದ್ದು, ಗುಂಡು ಸ್ಫೋಟ: ಮಗ ಸಾವು, ತಂದೆ ಜಸ್ಟ್​ ಮಿಸ್

ಅಂದಹಾಗೆ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದ ನಾಗೇಶ್​ ಎಂಬುವವರು ರಾತ್ರಿ ವೇಳೆ ಕಾಡು ಹಂದಿ ಸೇರಿದಂತೆ ವನ್ಯಜೀವಿಗಳ ಬೇಟೆಯನ್ನ ಕಸುಬಾಗಿಸಿಕೊಂಡಿದ್ದು, ಅದಕ್ಕಾಗಿ ತನ್ನ ಮನೆಯಲ್ಲಿ ಮದ್ದು, ಗುಂಡು ತಯಾರಿ ಮಾಡುತ್ತಿದ್ದ. ಈ ವೇಳೆ ಮನೆಯಲ್ಲಿದ್ದ 18 ವರ್ಷದ ತನ್ನ ಮಗನನ್ನ ಸಹ ಬಳಸಿಕೊಂಡಿದ್ದು, ಮದ್ದು, ಗುಂಡು ತಯಾರಿ ಮಾಡಿದ್ದಾನೆ.

ಇದನ್ನೂ ಓದಿ: ದಾವಣಗೆರೆ: ನಾಡಬಾಂಬ್ ಬಳಸಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ವ್ಯಕ್ತಿಯ ಬಂಧನ

ಈ ವೇಳೆ ತಯಾರಾಗಿದ್ದ ಮದ್ದು, ಗುಂಡು ಆಕಸ್ಮಿಕವಾಗಿ ತಂದೆ, ಮಗನ ಮುಂದೆಯೇ ಸ್ಫೋಟಗೊಂಡು ಮಗ ಪ್ರವನ್ ಮನೆಯಲ್ಲೇ ಸಾವನ್ನಪಿದ್ದರೆ, ತಂದೆ ನಾಗೇಶ್ ಕಾಲಿಗೂ ಗಂಭೀರವಾಗಿ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಸಹ ಪೀಸ್ ಪೀಸ್ ಆಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಪುಡಿ ಪುಡಿಯಾಗಿದ್ದವು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:58 pm, Thu, 26 December 24

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ