AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ, ಬೆಳಗಾವಿ ಬೆನ್ನಲ್ಲೇ ಹುಬ್ಬಳ್ಳಿ ಕಿಮ್ಸ್​ನಲ್ಲೂ ಗರ್ಭಿಣಿಯರು, ಶಿಶುಗಳ ಮರಣ ಬೆಳಕಿಗೆ!

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಜನವರಿಯಿಂದ ಈವರೆಗೆ 33 ಗರ್ಭಿಣಿಯರು ಮತ್ತು 148 ಶಿಶುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ವಿವಿಧ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆಯ ನಿರ್ದೇಶಕರು ಹೇಳಿದ್ದಾರೆ. ಆದರೆ, ಡ್ರಗ್ ಡಿಯಾಕ್ಟ್​ನಿಂದ ಯಾರೂ ಮೃತಪಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಳ್ಳಾರಿ, ಬೆಳಗಾವಿ ಬೆನ್ನಲ್ಲೇ ಹುಬ್ಬಳ್ಳಿ ಕಿಮ್ಸ್​ನಲ್ಲೂ ಗರ್ಭಿಣಿಯರು, ಶಿಶುಗಳ ಮರಣ ಬೆಳಕಿಗೆ!
ಬಳ್ಳಾರಿ, ಬೆಳಗಾವಿ ಆಯ್ತು ಇದೀಗ ಹುಬ್ಬಳ್ಳಿ ಕಿಮ್ಸ್​ನಲ್ಲೂ ಗರ್ಭಿಣಿಯರು, ಶಿಶುಗಳ ಮರಣ!
ಶಿವಕುಮಾರ್ ಪತ್ತಾರ್
| Edited By: |

Updated on:Dec 09, 2024 | 2:55 PM

Share

ಹುಬ್ಬಳ್ಳಿ, ಡಿಸೆಂಬರ್​ 09: ಬಳ್ಳಾರಿಯಲ್ಲಿ (ballari) ಬಾಣಂತಿಯರ ಸರಣಿ ಸಾವು ಪ್ರಕರಣ ಕರ್ನಾಟಕದಾದ್ಯಂತ ಸದ್ದು ಮಾಡಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಆರು ತಿಂಗಳಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು ಮೃತಪಟ್ಟಿರುವ ಸಂಗತಿ ಬಯಲಾಗಿತ್ತು. ಇದೀಗ ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆನಲ್ಲೂ ಗರ್ಭಿಣಿ ಮತ್ತು ಶಿಶುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಜನವರಿಯಿಂದ ಈವರೆಗೆ 33 ಗರ್ಭಿಣಿಯರು ಹಾಗೂ 148 ಶಿಶುಗಳ ಸಾವಾಗಿದೆ ಎಂದು ಕಿಮ್ಸ್​​​​ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್ ಹೇಳಿದ್ದಾರೆ.

ನಗರದಲ್ಲಿ ಟಿವಿ9 ಜೊತೆಗೆ ಮಾತನಾಡಿದ ಅವರು, ಜನವರಿಯಿಂದ ಈವರೆಗೆ 33 ಗರ್ಭಿಣಿಯರು, 148 ಶಿಶುಗಳ ಸಾವಾಗಿದೆ. ಬೇರೆ ಬೇರೆ ಕಾರಣಗಳಿಂದ ಗರ್ಭಿಣಿಯರು, ನವಜಾತ ಶಿಶುಗಳ ಸಾವಾಗಿದೆ, ಆದರೆ ಡ್ರಗ್ ಡಿಯಾಕ್ಟ್​ನಿಂದ ಯಾರೂ ಮೃತಪಟ್ಟಿಲ್ಲ. ನ್ಯಾಷನಲ್ ಲೇವಲ್ ಡೆತ್​ ರೇಟ್ ಹೇಗಿದೆ, ಹಾಗೆ ಹುಬ್ಬಳ್ಳಿ ಕಿಮ್ಸ್​ನಲ್ಲಿ ಡೆತ್​ ರೇಟ್​ ಶೇಕಡ 3 ರಿಂದ 4 ರಷ್ಟಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಬಾಣಂತಿಯರ ಸಾವು ಕೇಸ್​: ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ

ಸೆಪ್ಟೆಂಬರ್​ನಲ್ಲೂ ಅದೇ ಬ್ರ್ಯಾಂಡ್​ನ ಸಲಾಯಿನ್ ಬಳಸಲಾಗಿದೆ. ಎಲ್ಲಾ ವಾರ್ಡ್​ಗಳಲ್ಲಿರುವ ರೋಗಿಗಳಿಗೆ ಸಲಾಯಿನ್ ನೀಡಲಾಗಿತ್ತು. ಸಲಾಯಿನ್ ಬಳಕೆಯಿಂದ ಯಾವ ರೋಗಿಯೂ ಮೃತಪಟ್ಟಿಲ್ಲ. ಕಿಮ್ಸ್​ನಲ್ಲಿ ಡ್ರಗ್​ ರಿಯಾಕ್ಟ್​ನಿಂದ ಮೃತಪಟ್ಟಿರುವ ವರದಿಯಾಗಿಲ್ಲ, ಆದರೂ ಮುಂಜಾಗ್ರತಾ ಕ್ರಮವಾಗಿ ಸಮಿತಿ ರಚನೆ ಮಾಡಿದ್ದೇವೆ. ಯಾರಿಗಾದರೂ ಸಮಸ್ಯೆ ಆಗಿದ್ಯಾ ಎಂಬ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಸಮಿತಿ ರಚಿಸಲಾಗಿದೆ ಎಂದಿದ್ದಾರೆ.

ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಮರಣ ಮೃದಂಗ!

ಬೆಳಗಾವಿಯಲ್ಲೂ ಬಾಣಂತಿಯರ ಮರಣ ಮೃದಂಗ ನಡೆದಿದೆ. 6 ತಿಂಗಳಲ್ಲಿ 29 ಬಾಣಂತಿಯರ ಸಾವಾಗಿರುವುದು ಬೆಳಕಿಗೆ ಬಂದಿದೆ. ಸೂಕ್ತ ಚಿಕಿತ್ಸೆ ಸಿಗದೇ, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿ 10 ಹಲವು ಕಾರಣಗಳಿಂದ ಆಸ್ಪತ್ರೆಯಲ್ಲಿ ಬಾಣಂತಿಯರು ಬಲಿಯಾಗಿದ್ದಾರೆ. ಏಪ್ರಿಲ್ ತಿಂಗಳಿಂದಲ್ಲೇ ಆಸ್ಪತ್ರೆಗಳಿಗೆ ಐವಿ ಗ್ಲುಕೋಸ್ ಸಪ್ಲೈ ಮಾಡಲಾಗಿತ್ತು.

ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಿನೇಶ್‌ ಗುಂಡೂರಾವ್ ಭೇಟಿ: IV ಫ್ಲ್ಯೂಯೆಡ್‌ ಕಂಪನಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೋಗ್ತಿದ್ದೇವೆ ಎಂದ ಸಚಿವ

ಬಾಣಂತಿಯರಷ್ಟೇ ಅಲ್ಲ ಸಾಲು ಸಾಲು ಶಿಶುಗಳ ಮರಣ ಮೃದಂಗವೇ ನಡೆದಿದೆ. ಕಳೆದ 6 ತಿಂಗಳಲ್ಲಿ ಬರೋಬ್ಬರಿ 322 ಶಿಶುಗಳು ಸಾವನ್ನಪ್ಪಿವೆ. ಪ್ರತಿ ತಿಂಗಳು 45 ರಿಂದ 52 ಸರಾಸರಿಯಲ್ಲಿ ಶಿಶುಗಳ ಸಾವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Mon, 9 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್