AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

37 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಈ ವರ್ಷ ಅಡ್ಮಿಷನೇ ಆಗಿಲ್ಲ! 57 ಕಾಲೇಜುಗಳಲ್ಲಿ ಒಂದಂಕಿ ದಾಖಲಾತಿ

ಕರ್ನಾಟಕದ 37 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಯಾವುದೇ ದಾಖಲಾತಿ ಆಗಿಲ್ಲ. 57 ಕಾಲೇಜುಗಳಲ್ಲಿ ಒಂದಂಕಿ ದಾಖಲಾತಿ ಮಾತ್ರ ನಡೆದಿದೆ. ಪ್ರವೇಶ ಹೆಚ್ಚಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದ್ದರೂ ಹೆಚ್ಚಿನ ಪರಿಣಾಮ ಬೀರಿದಂತಿಲ್ಲ. ಶೂನ್ಯ ದಾಖಲಾತಿಯಲ್ಲಿ ಯಾವ ಜಿಲ್ಲೆಗಳು ಮುಂಚೂಣಿಯಲ್ಲಿವೆ ಎಂಬುದೂ ಸೇರಿದಂತೆ ವಿವರಗಳು ಇಲ್ಲಿವೆ.

37 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಈ ವರ್ಷ ಅಡ್ಮಿಷನೇ ಆಗಿಲ್ಲ! 57 ಕಾಲೇಜುಗಳಲ್ಲಿ ಒಂದಂಕಿ ದಾಖಲಾತಿ
ಸರ್ಕಾರಿ ಕಾಲೇಜು (ಸಾಂದರ್ಭಿಕ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on:Jul 31, 2026 | 2:27 PM

Share

ಮುಖ್ಯಾಂಶಗಳು

  • 37 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಶೂನ್ಯ ಪ್ರವೇಶ
  • 57 ಕಾಲೇಜುಗಳಲ್ಲಿ ಒಂದಂಕಿ ವಿದ್ಯಾರ್ಥಿಗಳ ದಾಖಲಾತಿ
  • ಸರ್ಕಾರದ ಅನೇಕ ಕ್ರಮಗಳ ಹೊರತಾಗಿಯೂ ಶೂನ್ಯ ದಾಖಲಾತಿ

ಬೆಂಗಳೂರು, ಜುಲೈ 31: ಕರ್ನಾಟಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ (PU College) ಬಗ್ಗೆ ವಿದ್ಯಾರ್ಥಿಗಳ ಆಸಕ್ತಿ ಕಡಿಮೆಯಾಗುತ್ತಿರುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 37 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಒಬ್ಬ ವಿದ್ಯಾರ್ಥಿಯೂ ಪ್ರವೇಶ ಪಡೆದಿಲ್ಲ. ಮತ್ತೊಂದೆಡೆ, 57 ಕಾಲೇಜುಗಳಲ್ಲಿ 1ರಿಂದ 10ರೊಳಗೆ, ಅಂದರೆ ಒಂದಂಕಿ ದಾಖಲಾತಿ ಮಾತ್ರ ವರದಿಯಾಗಿದೆ. ವಿದ್ಯಾರ್ಥಿಗಳನ್ನು ಸರ್ಕಾರಿ ಪಿಯು ಕಾಲೇಜುಗಳತ್ತ ಸೆಳೆಯುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಬಾರಿ ‘ಲೇಟ್ ಅಡ್ಮಿಷನ್ ಫೀಸ್’ ರದ್ದುಪಡಿಸಿದ್ದು, ಪ್ರವೇಶದ ಗಡುವನ್ನು ಜುಲೈ 31ರವರೆಗೆ ವಿಸ್ತರಿಸಿದೆ.

ಮಂಡ್ಯ, ತುಮಕೂರಿನಲ್ಲಿ ತಲಾ 5 ಕಾಲೇಜು

ಶೂನ್ಯ ಪ್ರವೇಶ ದಾಖಲಿಸಿರುವ 37 ಕಾಲೇಜುಗಳ ಪೈಕಿ ಮಂಡ್ಯ ಮತ್ತು ತುಮಕೂರು ಜಿಲ್ಲೆಗಳು ತಲಾ ಐದು ಕಾಲೇಜುಗಳೊಂದಿಗೆ ಅಗ್ರಸ್ಥಾನದಲ್ಲಿವೆ. ಶಿವಮೊಗ್ಗ ಮತ್ತು ಬೆಂಗಳೂರು ದಕ್ಷಿಣದಲ್ಲಿ ತಲಾ ನಾಲ್ಕು ಕಾಲೇಜುಗಳಿವೆ. ಬೆಳಗಾವಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ತಲಾ ಮೂರು ಕಾಲೇಜುಗಳು ಶೂನ್ಯ ಪ್ರವೇಶ ದಾಖಲಿಸಿವೆ. ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ ಹಾಗೂ ಹಾಸನದಲ್ಲಿ ತಲಾ ಎರಡು ಕಾಲೇಜುಗಳಿವೆ.

ಉಡುಪಿ, ಮೈಸೂರು, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆಗಳಲ್ಲೂ ತಲಾ ಒಂದು ಸರ್ಕಾರಿ ಪಿಯು ಕಾಲೇಜಿನಲ್ಲಿ ಯಾವುದೇ ಅಡ್ಮಿಷನ್ ಆಗಿಲ್ಲ. ಫಲಿತಾಂಶಗಳಲ್ಲಿ ರಾಜ್ಯದಲ್ಲೇ ಉತ್ತಮ ಸಾಧನೆ ಮಾಡುವ ಉಡುಪಿ ಜಿಲ್ಲೆಯಲ್ಲೂ ಇಂತಹ ಕಾಲೇಜು ಇರುವುದು ಗಮನಾರ್ಹವಾಗಿದೆ.

57 ಕಾಲೇಜುಗಳಲ್ಲಿ ಒಂದಂಕಿ ಪ್ರವೇಶ

ಶೂನ್ಯ ಪ್ರವೇಶದ ಜೊತೆಗೆ ರಾಜ್ಯದ 57 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕೇವಲ 1ರಿಂದ 10 ವಿದ್ಯಾರ್ಥಿಗಳಷ್ಟೇ ದಾಖಲಾಗಿದ್ದಾರೆ. ಈ ಪಟ್ಟಿಯಲ್ಲಿ ಹಾಸನ ಜಿಲ್ಲೆ ಏಳು ಕಾಲೇಜುಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಉಡುಪಿ ಮತ್ತು ಬೀದರ್‌ನಲ್ಲಿ ತಲಾ ಆರು, ಕಲಬುರಗಿಯಲ್ಲಿ ಐದು ಕಾಲೇಜುಗಳು ಒಂದಂಕಿ ಪ್ರವೇಶ ದಾಖಲಿಸಿವೆ.

ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೂನ್ಯ ಪ್ರವೇಶ ಹೊಂದಿರುವ ಕಾಲೇಜುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್ ಎಸ್. ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಕೆಲವು ಪ್ರದೇಶಗಳಲ್ಲಿ ಎರಡು-ಮೂರು ಸರ್ಕಾರಿ ಪಿಯು ಕಾಲೇಜುಗಳು ಸುತ್ತಮುತ್ತಲಿನಲ್ಲಿರುವುದರಿಂದ ವಿದ್ಯಾರ್ಥಿಗಳ ಪ್ರವೇಶ ಒಂದು ಕಾಲೇಜಿನತ್ತ ಹೆಚ್ಚು ಕೇಂದ್ರೀಕೃತವಾಗುತ್ತಿದೆ. ಇದರಿಂದ ಕೆಲವು ಕಾಲೇಜುಗಳಲ್ಲಿ ಪ್ರವೇಶ ಶೂನ್ಯವಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಶೂನ್ಯ ಪ್ರವೇಶ ಹೊಂದಿರುವ 37 ಕಾಲೇಜುಗಳ ಪೈಕಿ 15 ಕಾಲೇಜುಗಳು ಪ್ರಸಕ್ತ ವರ್ಷವೇ ಮಂಜೂರಾಗಿರುವ ಹೊಸ ಕಾಲೇಜುಗಳು. ಹೊಸದಾಗಿ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳನ್ನು ಆಕರ್ಷಿಸಲು ಸ್ವಲ್ಪ ಸಮಯ ಬೇಕಾಗಬಹುದು ಎಂದು ಇಲಾಖೆ ತಿಳಿಸಿದೆ.

ಖಾಸಗಿ ಕಾಲೇಜುಗಳ ಹೆಚ್ಚಳವೂ ಕಾರಣ?

ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಕಡಿಮೆಯಾಗಲು ಖಾಸಗಿ ಪಿಯು ಕಾಲೇಜುಗಳ ಹೆಚ್ಚಳವೂ ಒಂದು ಕಾರಣ ಎಂದು ಇಲಾಖೆಯ ಮೂಲಗಳು ಅಭಿಪ್ರಾಯಪಟ್ಟಿವೆ. ಖಾಸಗಿ ಕಾಲೇಜುಗಳಲ್ಲಿ ಉತ್ತಮ ಮೂಲಸೌಕರ್ಯ ಇರುವುದರಿಂದ ವಿದ್ಯಾರ್ಥಿಗಳು ಅತ್ತ ಆಕರ್ಷಿತರಾಗುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಉದ್ಯೋಗವಕಾಶ; ಪರೀಕ್ಷೆಯಿಲ್ಲದೆ ನೇರ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು

ಸರ್ಕಾರಿ ಪಿಯು ಕಾಲೇಜುಗಳ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಸರ್ಕಾರಿ ಕಾಲೇಜುಗಳು ಇರುವ ಪ್ರದೇಶಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವುದನ್ನು ನಿಯಂತ್ರಿಸಬೇಕು ಎಂಬ ಅಭಿಪ್ರಾಯವೂ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Fri, 31 July 26

Follow Us
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ