AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಾಕ್ಸಿನ್ ಲಸಿಕೆ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಬೆಂಗಳೂರು ಆಸ್ಪತ್ರೆಯಲ್ಲೇ ನಡೆಯಲಿದೆ: ಇದು ನಮ್ಮ ಹೆಮ್ಮೆ ಎಂದ ಡಾ. ಸುಧಾಕರ್

ದಿನಕ್ಕೆ 1 ಲಕ್ಷ 25 ಸಾವಿರ ಜನರಿಗೆ ಕೊರೊನಾ ಟೆಸ್ಟ್​ ಮಾಡಲಾಗುತ್ತಿದೆ. ಇಲ್ಲಿಯವರೆಗೆ 1 ಕೋಟಿ 20 ಲಕ್ಷ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಹಾಗೇ ಕೊವಾಕ್ಸಿನ್​ ಕ್ಲಿನಿಕಲ್ ಟ್ರಯಲ್​ ಯಶಸ್ವಿಯಾಗುತ್ತದೆ ಎಂಬ ಭರವಸೆ ಇದೆ ಎಂದು ಸುಧಾಕರ್​ ಹೇಳಿದರು.

ಕೊವಾಕ್ಸಿನ್ ಲಸಿಕೆ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಬೆಂಗಳೂರು ಆಸ್ಪತ್ರೆಯಲ್ಲೇ ನಡೆಯಲಿದೆ: ಇದು ನಮ್ಮ ಹೆಮ್ಮೆ ಎಂದ ಡಾ. ಸುಧಾಕರ್
ಡಾ.ಕೆ.ಸುಧಾಕರ್​
Lakshmi Hegde
|

Updated on:Dec 02, 2020 | 2:57 PM

Share

ಬೆಂಗಳೂರು: ಭಾರತ್ ಬಯೋಟೆಕ್​ ಕಂಪನಿ ಅಭಿವೃದ್ಧಿ ಪಡಿಸಿರುವ ಕೊವಾಕ್ಸಿನ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ಗೆ ಕರ್ನಾಟಕದ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (Vydehi Institute of Medical Sciences & Research Centre)ಗೆ ಅವಕಾಶ ಸಿಕ್ಕಿದ್ದು, ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ತಿಳಿಸಿದರು.

ಕೊವಾಕ್ಸಿನ್​ ಲಸಿಕೆಯ ಮೂರನೇ ಹಂತದ ಪ್ರಯೋಗ 19 ರಾಜ್ಯಗಳಲ್ಲಿ ನಡೆಯುತ್ತಿದೆ. ದೇಶದಲ್ಲಿ ಒಟ್ಟು 26 ಸಾವಿರ ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುವುದು. ಅದರಲ್ಲಿ 1,600-1,800 ಮಂದಿಗೆ ಪ್ರಾಯೋಗಿಕ ಲಸಿಕೆ ನೀಡಲಾಗುವುದು. ಲಸಿಕೆ ಅಂತಿಮ ಆದ ನಂತರ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ಮೊದಲು ನೀಡಲಾಗುತ್ತದೆ. ಹೆಚ್ಚೆಚ್ಚು ಜನರಿಗೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

20 ಸಂಸ್ಥೆಗಳು ಅಂತಿಮ ಹಂತ ತಲುಪಿವೆ..! ಈಗಾಗಲೇ ಒಟ್ಟು 50 ಕಂಪನಿಗಳು ಲಸಿಕೆ ಪ್ರಯೋಗ ಶುರು ಮಾಡಿಕೊಂಡಿವೆ. ಅದರಲ್ಲಿ 20 ಸಂಸ್ಥೆಗಳು ಅಂತಿಮ ಹಂತ ತಲುಪಿವೆ. ನಮ್ಮ ದೇಶ ವಿಶ್ವದ ಎಲ್ಲ ದೇಶಗಳಿಗೆ ಲಸಿಕೆ ಒದಗಿಸುವ ಹಂತಕ್ಕೆ ಬೆಳೆದಿದೆ. ಆದರೆ ಕೊವಿಡ್​ ಲಸಿಕೆಯಿಂದ ಕೆಲವು ಅಡ್ಡಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅದನ್ನೆಲ್ಲ ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಮ್ಮಲ್ಲಿ ಬೆಂಗಳೂರು, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ಹೇಳಿದರು.

900 ಕೋಟಿ ರೂ. ಮೀಸಲು ಕೊವಿಡ್​-19 ಸೋಂಕು ಹರಡದಂತೆ ತಡೆಯಲು ಸರ್ಕಾರ ಬದ್ಧವಾಗಿದೆ. ಲಸಿಕೆ ಮತ್ತು ಸಂಶೋಧನೆಗಾಗಿ 900 ಕೋಟಿ ರೂ. ಮೀಸಲು ಇಡಲಾಗಿದೆ. ಹಾಗೇ ಮುಖ್ಯಮಂತ್ರಿ ಯಡಿಯೂರಪ್ಪನವರು 300 ಕೋಟಿ ರೂ.ಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದು, ಇದೀಗ ದಿನಕ್ಕೆ 1 ಲಕ್ಷ 25 ಸಾವಿರ ಜನರಿಗೆ ಕೊರೊನಾ ಟೆಸ್ಟ್​ ಮಾಡಲಾಗುತ್ತಿದೆ. ಇಲ್ಲಿಯವರೆಗೆ 1 ಕೋಟಿ 20 ಲಕ್ಷ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಹಾಗೇ ಕೊವಾಕ್ಸಿನ್​ ಕ್ಲಿನಿಕಲ್ ಟ್ರಯಲ್​ ಯಶಸ್ವಿಯಾಗುತ್ತದೆ ಎಂಬ ಭರವಸೆ ಇದೆ ಎಂದರು.

ಕೊರೊನಾ ಲಸಿಕೆ ಎಲ್ಲರಿಗೂ ಸಿಗಲ್ವಂತೆ.. ಅಗತ್ಯವಿರೋರಿಗೆ ಮಾತ್ರ ಕೊಡ್ತಾರಂತೆ

Published On - 12:40 pm, Wed, 2 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು