AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಾಕ್ಸಿನ್ ಲಸಿಕೆ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಬೆಂಗಳೂರು ಆಸ್ಪತ್ರೆಯಲ್ಲೇ ನಡೆಯಲಿದೆ: ಇದು ನಮ್ಮ ಹೆಮ್ಮೆ ಎಂದ ಡಾ. ಸುಧಾಕರ್

ದಿನಕ್ಕೆ 1 ಲಕ್ಷ 25 ಸಾವಿರ ಜನರಿಗೆ ಕೊರೊನಾ ಟೆಸ್ಟ್​ ಮಾಡಲಾಗುತ್ತಿದೆ. ಇಲ್ಲಿಯವರೆಗೆ 1 ಕೋಟಿ 20 ಲಕ್ಷ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಹಾಗೇ ಕೊವಾಕ್ಸಿನ್​ ಕ್ಲಿನಿಕಲ್ ಟ್ರಯಲ್​ ಯಶಸ್ವಿಯಾಗುತ್ತದೆ ಎಂಬ ಭರವಸೆ ಇದೆ ಎಂದು ಸುಧಾಕರ್​ ಹೇಳಿದರು.

ಕೊವಾಕ್ಸಿನ್ ಲಸಿಕೆ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಬೆಂಗಳೂರು ಆಸ್ಪತ್ರೆಯಲ್ಲೇ ನಡೆಯಲಿದೆ: ಇದು ನಮ್ಮ ಹೆಮ್ಮೆ ಎಂದ ಡಾ. ಸುಧಾಕರ್
ಡಾ.ಕೆ.ಸುಧಾಕರ್​
Lakshmi Hegde
|

Updated on:Dec 02, 2020 | 2:57 PM

Share

ಬೆಂಗಳೂರು: ಭಾರತ್ ಬಯೋಟೆಕ್​ ಕಂಪನಿ ಅಭಿವೃದ್ಧಿ ಪಡಿಸಿರುವ ಕೊವಾಕ್ಸಿನ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ಗೆ ಕರ್ನಾಟಕದ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (Vydehi Institute of Medical Sciences & Research Centre)ಗೆ ಅವಕಾಶ ಸಿಕ್ಕಿದ್ದು, ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ತಿಳಿಸಿದರು.

ಕೊವಾಕ್ಸಿನ್​ ಲಸಿಕೆಯ ಮೂರನೇ ಹಂತದ ಪ್ರಯೋಗ 19 ರಾಜ್ಯಗಳಲ್ಲಿ ನಡೆಯುತ್ತಿದೆ. ದೇಶದಲ್ಲಿ ಒಟ್ಟು 26 ಸಾವಿರ ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುವುದು. ಅದರಲ್ಲಿ 1,600-1,800 ಮಂದಿಗೆ ಪ್ರಾಯೋಗಿಕ ಲಸಿಕೆ ನೀಡಲಾಗುವುದು. ಲಸಿಕೆ ಅಂತಿಮ ಆದ ನಂತರ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ಮೊದಲು ನೀಡಲಾಗುತ್ತದೆ. ಹೆಚ್ಚೆಚ್ಚು ಜನರಿಗೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

20 ಸಂಸ್ಥೆಗಳು ಅಂತಿಮ ಹಂತ ತಲುಪಿವೆ..! ಈಗಾಗಲೇ ಒಟ್ಟು 50 ಕಂಪನಿಗಳು ಲಸಿಕೆ ಪ್ರಯೋಗ ಶುರು ಮಾಡಿಕೊಂಡಿವೆ. ಅದರಲ್ಲಿ 20 ಸಂಸ್ಥೆಗಳು ಅಂತಿಮ ಹಂತ ತಲುಪಿವೆ. ನಮ್ಮ ದೇಶ ವಿಶ್ವದ ಎಲ್ಲ ದೇಶಗಳಿಗೆ ಲಸಿಕೆ ಒದಗಿಸುವ ಹಂತಕ್ಕೆ ಬೆಳೆದಿದೆ. ಆದರೆ ಕೊವಿಡ್​ ಲಸಿಕೆಯಿಂದ ಕೆಲವು ಅಡ್ಡಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅದನ್ನೆಲ್ಲ ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಮ್ಮಲ್ಲಿ ಬೆಂಗಳೂರು, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ಹೇಳಿದರು.

900 ಕೋಟಿ ರೂ. ಮೀಸಲು ಕೊವಿಡ್​-19 ಸೋಂಕು ಹರಡದಂತೆ ತಡೆಯಲು ಸರ್ಕಾರ ಬದ್ಧವಾಗಿದೆ. ಲಸಿಕೆ ಮತ್ತು ಸಂಶೋಧನೆಗಾಗಿ 900 ಕೋಟಿ ರೂ. ಮೀಸಲು ಇಡಲಾಗಿದೆ. ಹಾಗೇ ಮುಖ್ಯಮಂತ್ರಿ ಯಡಿಯೂರಪ್ಪನವರು 300 ಕೋಟಿ ರೂ.ಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದು, ಇದೀಗ ದಿನಕ್ಕೆ 1 ಲಕ್ಷ 25 ಸಾವಿರ ಜನರಿಗೆ ಕೊರೊನಾ ಟೆಸ್ಟ್​ ಮಾಡಲಾಗುತ್ತಿದೆ. ಇಲ್ಲಿಯವರೆಗೆ 1 ಕೋಟಿ 20 ಲಕ್ಷ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಹಾಗೇ ಕೊವಾಕ್ಸಿನ್​ ಕ್ಲಿನಿಕಲ್ ಟ್ರಯಲ್​ ಯಶಸ್ವಿಯಾಗುತ್ತದೆ ಎಂಬ ಭರವಸೆ ಇದೆ ಎಂದರು.

ಕೊರೊನಾ ಲಸಿಕೆ ಎಲ್ಲರಿಗೂ ಸಿಗಲ್ವಂತೆ.. ಅಗತ್ಯವಿರೋರಿಗೆ ಮಾತ್ರ ಕೊಡ್ತಾರಂತೆ

Published On - 12:40 pm, Wed, 2 December 20

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು