AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಹುಲಿಗಳ ಸಂರಕ್ಷಣೆಗೆ ಮುಂದಾದ ಕರ್ನಾಟಕದ 4 ಆನೆಗಳು, ಸಾರಥ್ಯ ವಹಿಸಿದ ಮಣಿಕಂಠ ಆನೆ

ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಕರ್ನಾಟಕದ ಅರಣ್ಯ ಇಲಾಖೆಯಿಂದ 4 ಆನೆಗಳನ್ನು ತರಲಾಗಿದೆ. ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅನೇಕ ಹುಲಿಗಳು ಕಾಡಿನಿಂದ ನಾಡಿಗೆ ಬರುತ್ತಿದೆ. ಇದನ್ನು ತಡೆಯಲು ಕರ್ನಾಟಕದ

ಉತ್ತರ ಪ್ರದೇಶದ ಹುಲಿಗಳ ಸಂರಕ್ಷಣೆಗೆ ಮುಂದಾದ ಕರ್ನಾಟಕದ 4 ಆನೆಗಳು, ಸಾರಥ್ಯ ವಹಿಸಿದ ಮಣಿಕಂಠ ಆನೆ
ಆನೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 10, 2022 | 3:50 PM

Share

ಉತ್ತರ ಪ್ರದೇಶ : ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಕರ್ನಾಟಕದ ಅರಣ್ಯ ಇಲಾಖೆಯಿಂದ 4 ಆನೆಗಳನ್ನು ತರಲಾಗಿದೆ. ಅರಣ್ಯದ ಪಕ್ಕದ ಗ್ರಾಮೀಣ ಪ್ರದೇಶಗಳಲ್ಲಿ ಮನುಷ್ಯರು ಮತ್ತು ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಮತ್ತು ಅವುಗಳನ್ನು ರಕ್ಷಣೆಗಾಗಿ ಈ ನಾಲ್ಕು ಆನೆಗಳನ್ನು ಕರೆತರಲಾಗಿದ್ದು, ಇದರ ಜೊತೆಗೆ ಗಸ್ತು ಮೂಲಕ ನಿಗಾ ವಹಿಸಲಾಗುವುದು ಎಂದು ಪಿಟಿಆರ್ ಉಪ ನಿರ್ದೇಶಕ ನವೀನ್ ಖಂಡೇಲ್ವಾಲ್ ಹೇಳಿದ್ದಾರೆ.

ಖಂಡೇಲ್ವಾಲ್ ಪ್ರಕಾರ, ಮೀಸಲು ಪ್ರದೇಶದಿಂದ ಹೊರಬರುವ ಹುಲಿಗಳನ್ನು ರಕ್ಷಿಸಲು ಮತ್ತು ಕಾಡಿನೊಳಗೆ ಮತ್ತೆ ಅವುಗಳನ್ನು ಸಾಗಿಸಲು ಈ ಆನೆಗಳು ವಿಶೇಷ ಸಹಾಯವನ್ನು ನೀಡುತ್ತವೆ. ಈ ಆನೆಗಳ ಪಾಲನೆ, ಆಜ್ಞೆ ಮತ್ತು ಆಹಾರ, ಪಾನೀಯ ಮತ್ತು ನಿರ್ವಹಣೆಯಂತಹ ಇತರ ಅಗತ್ಯತೆಗಳನ್ನು ಒಳಗೊಂಡಂತೆ ನೋಡಿಕೊಳ್ಳಲು ಎಂಟು ಮಾವುತರನ್ನು ಕರೆತರಲಾಗಿದೆ ಎಂದು ಹೇಳಿದ್ದಾರೆ.

12 ವರ್ಷದ ನಿಸರ್ಗ, 12 ವರ್ಷದ ಮಣಿಕಂಠ, 7 ಮತ್ತು 14 ವರ್ಷ ವಯಸ್ಸಿನ ಇತರ ಎರಡು ಆನೆಗಳನ್ನು ತರಲಾಗಿದೆ. ಇವುಗಳ ಜೊತೆಗೆ 8 ಮಾವುತರನ್ನು ತರಲಾಗಿದೆ. ಅರಣ್ಯ ಸಚಿವ ಅರುಣ್ ಸಕ್ಸೇನಾ ಅವರು ಈ ಆನೆಗಳಿಗೆ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಆನೆಗಳು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಲಿವೆ ಎಂದು ಸಕ್ಸೇನಾ ಹೇಳಿದರು.

ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳಿಗೆ ಇಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವಲ್ಲಿ ಕೆಲಸ ಮಾಡುತ್ತಾರೆ ಎಂದು ಖಂಡೇಲ್ವಾಲ್ ಹೇಳಿದರು.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ