AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಹುಲಿಗಳ ಸಂರಕ್ಷಣೆಗೆ ಮುಂದಾದ ಕರ್ನಾಟಕದ 4 ಆನೆಗಳು, ಸಾರಥ್ಯ ವಹಿಸಿದ ಮಣಿಕಂಠ ಆನೆ

ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಕರ್ನಾಟಕದ ಅರಣ್ಯ ಇಲಾಖೆಯಿಂದ 4 ಆನೆಗಳನ್ನು ತರಲಾಗಿದೆ. ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅನೇಕ ಹುಲಿಗಳು ಕಾಡಿನಿಂದ ನಾಡಿಗೆ ಬರುತ್ತಿದೆ. ಇದನ್ನು ತಡೆಯಲು ಕರ್ನಾಟಕದ

ಉತ್ತರ ಪ್ರದೇಶದ ಹುಲಿಗಳ ಸಂರಕ್ಷಣೆಗೆ ಮುಂದಾದ ಕರ್ನಾಟಕದ 4 ಆನೆಗಳು, ಸಾರಥ್ಯ ವಹಿಸಿದ ಮಣಿಕಂಠ ಆನೆ
ಆನೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 10, 2022 | 3:50 PM

Share

ಉತ್ತರ ಪ್ರದೇಶ : ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಕರ್ನಾಟಕದ ಅರಣ್ಯ ಇಲಾಖೆಯಿಂದ 4 ಆನೆಗಳನ್ನು ತರಲಾಗಿದೆ. ಅರಣ್ಯದ ಪಕ್ಕದ ಗ್ರಾಮೀಣ ಪ್ರದೇಶಗಳಲ್ಲಿ ಮನುಷ್ಯರು ಮತ್ತು ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಮತ್ತು ಅವುಗಳನ್ನು ರಕ್ಷಣೆಗಾಗಿ ಈ ನಾಲ್ಕು ಆನೆಗಳನ್ನು ಕರೆತರಲಾಗಿದ್ದು, ಇದರ ಜೊತೆಗೆ ಗಸ್ತು ಮೂಲಕ ನಿಗಾ ವಹಿಸಲಾಗುವುದು ಎಂದು ಪಿಟಿಆರ್ ಉಪ ನಿರ್ದೇಶಕ ನವೀನ್ ಖಂಡೇಲ್ವಾಲ್ ಹೇಳಿದ್ದಾರೆ.

ಖಂಡೇಲ್ವಾಲ್ ಪ್ರಕಾರ, ಮೀಸಲು ಪ್ರದೇಶದಿಂದ ಹೊರಬರುವ ಹುಲಿಗಳನ್ನು ರಕ್ಷಿಸಲು ಮತ್ತು ಕಾಡಿನೊಳಗೆ ಮತ್ತೆ ಅವುಗಳನ್ನು ಸಾಗಿಸಲು ಈ ಆನೆಗಳು ವಿಶೇಷ ಸಹಾಯವನ್ನು ನೀಡುತ್ತವೆ. ಈ ಆನೆಗಳ ಪಾಲನೆ, ಆಜ್ಞೆ ಮತ್ತು ಆಹಾರ, ಪಾನೀಯ ಮತ್ತು ನಿರ್ವಹಣೆಯಂತಹ ಇತರ ಅಗತ್ಯತೆಗಳನ್ನು ಒಳಗೊಂಡಂತೆ ನೋಡಿಕೊಳ್ಳಲು ಎಂಟು ಮಾವುತರನ್ನು ಕರೆತರಲಾಗಿದೆ ಎಂದು ಹೇಳಿದ್ದಾರೆ.

12 ವರ್ಷದ ನಿಸರ್ಗ, 12 ವರ್ಷದ ಮಣಿಕಂಠ, 7 ಮತ್ತು 14 ವರ್ಷ ವಯಸ್ಸಿನ ಇತರ ಎರಡು ಆನೆಗಳನ್ನು ತರಲಾಗಿದೆ. ಇವುಗಳ ಜೊತೆಗೆ 8 ಮಾವುತರನ್ನು ತರಲಾಗಿದೆ. ಅರಣ್ಯ ಸಚಿವ ಅರುಣ್ ಸಕ್ಸೇನಾ ಅವರು ಈ ಆನೆಗಳಿಗೆ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಆನೆಗಳು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಲಿವೆ ಎಂದು ಸಕ್ಸೇನಾ ಹೇಳಿದರು.

ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳಿಗೆ ಇಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವಲ್ಲಿ ಕೆಲಸ ಮಾಡುತ್ತಾರೆ ಎಂದು ಖಂಡೇಲ್ವಾಲ್ ಹೇಳಿದರು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್