AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಇದೇ ಅಧಿವೇಶನದಲ್ಲಿ ಬಿಲ್​​ ಮಂಡಿಸಲು ತೀರ್ಮಾನ

ಕರ್ನಾಟಕ ಸರ್ಕಾರವು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಿಗೆ ಈ ಮೀಸಲಾತಿ ಅನ್ವಯಿಸಲಿದೆ. ಹಿಂದುಳಿದ ವರ್ಗಗಳಿಗೆ ಇದ್ದ ಮೀಸಲಾತಿಯನ್ನು ವಿಸ್ತರಿಸಿ ಮುಸ್ಲಿಂ ಸಮುದಾಯಕ್ಕೂ ಒಳಗೊಂಡಿದೆ. ಈ ವಿಧೇಯಕವನ್ನು ಶೀಘ್ರದಲ್ಲೇ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಇದೇ ಅಧಿವೇಶನದಲ್ಲಿ ಬಿಲ್​​ ಮಂಡಿಸಲು ತೀರ್ಮಾನ
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಇದೇ ಅಧಿವೇಶನದಲ್ಲಿ ಬಿಲ್​​ ಮಂಡಿಸಲು ತೀರ್ಮಾನ
ಪ್ರಸನ್ನ ಗಾಂವ್ಕರ್​
| Edited By: |

Updated on:Mar 14, 2025 | 11:02 PM

Share

ಬೆಂಗಳೂರು, ಮಾರ್ಚ್​ 14: ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ (Muslim reservation) ನೀಡುವ ವಿಧೇಯಕ ತರಲು ಸಂಪುಟ (Cabinet) ಸಭೆ ಒಪ್ಪಿಗೆ ನೀಡಿದೆ. ಇದೇ ಅಧಿವೇಶನದಲ್ಲಿ ಬಿಲ್​​ ಮಂಡಿಸಲು ತೀರ್ಮಾನಿಸಲಾಗಿದೆ. ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗಷ್ಟೇ ಇತ್ತು. ಇದೀಗ ಮುಸ್ಲಿಂ​​ ಸಮಾಜಕ್ಕೆ ಮೀಸಲಾತಿಯನ್ನು ಸರ್ಕಾರ ವಿಸ್ತರಿಸಿದೆ. ವಿಧೇಯಕ ಪ್ರಕಾರ ರಾಜ್ಯ ಸರ್ಕಾರದ 1 ಕೋಟಿವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ  4% ಮುಸ್ಲಿಂರಿಗೆ ಮೀಸಲಾತಿ ಒದಗಿಸಲಾಗುತ್ತಿದೆ.

2025ನೇ ಸಾಲಿನ ತಮ್ಮ ಬಜೆಟ್​ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಕೊಡುಗೆ ನೀಡಿತ್ತು. ಅದರಲ್ಲೂ ವಿರೋಧದ ನಡುವೆಯೂ ಸರ್ಕಾರಿಗೆ ಗುತ್ತಿಗೆಯಲ್ಲಿ ಸಿಎಂ ಮೀಸಲಾತಿ ಘೋಷಿಸಿದ್ದರು. ಎಸ್​​ಸಿ ಮತ್ತು ಎಸ್​​ಟಿ ಸಮುದಾಯಕ್ಕೆ ಈ ಹಿಂದೆ ಇದ್ದ ಒಂದು ಕೋಟಿಯವರೆಗಿನ ಮೊತ್ತವನ್ನು 2 ಕೋಟಿಯವರೆಗೆ ಮೀಸಲಾತಿ ವಿಸ್ತರಣೆ ಮಾಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಂಪುಟ ಅನುಮೋದನೆ ನೀಡಿದೆ.

ಇದನ್ನೂ ಓದಿ: ಸದ್ದಿಲ್ಲದೇ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ!

ಇದನ್ನೂ ಓದಿ
Image
ಮುಸ್ಲಿಂ ಮೀಸಲಾತಿ ಶೇ 10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ
Image
ಸದ್ದಿಲ್ಲದೇ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ!

ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದವರಿಗೆ ನೀಡಿದಂತೆಯೇ ಮುಸ್ಲಿಮರಿಗೆ ಅಂದರೆ ಪ್ರವರ್ಗ 2 ಬಿ ಅಡಿ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿತ್ತು. ಗುತ್ತಿಗೆ ಕಾಮಗಾರಿಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಜನಾಂಗಕ್ಕೆ ಹಾಗೂ ಹಿಂದುಳಿದ ಸಮುದಾಯವರಿಗೆ ಮೀಸಲಾತಿ ನೀಡಿದ ಮಾದರಿಯಲ್ಲಿ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೂ ಶೇ 4ರಷ್ಟು ಮೀಸಲಾತಿ ನೀಡಬೇಕೆಂದು ಅಲ್ಪಸಂಖ್ಯಾತ ನಾಯಕರು ಮನವಿ ಸಲ್ಲಿಸಿದ್ದರು. ಮನವಿಯನ್ನ ಪರಿಗಣಿಸಿ, ಮೀಸಲಾತಿ ಕಲ್ಪಿಸುವುದು ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯೂ ನಡೀತು. ವಿಧೇಯಕ ಮಂಡನೆ ಬಗ್ಗೆ ಚರ್ಚೆ ಮಾಡಲಾಗಿತ್ತು.

ಇದನ್ನೂ ಓದಿ: ಮುಸ್ಲಿಮರಿಗೆ ಸಿದ್ದರಾಮಯ್ಯ ಭರ್ಜರಿ ಕೊಡುಗೆ? ಮೀಸಲಾತಿ ಶೇ 10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕಲ್ಪಿಸುವ ಸರ್ಕಾರ ನಿರ್ಧಾರಕ್ಕೆ ಆರಂಭದಲ್ಲೇ ವಿರೋಧವ್ಯಕ್ತವಾಗಿತ್ತು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ವಿರೋಧ ಮಧ್ಯೆಯೇ ಇದೀಗ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಒಪ್ಪಿಗೆ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Fri, 14 March 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ