ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ! ಮಹಿಳಾ ಪೇದೆ ಸೇರಿ ನಾಲ್ವರಿಗೆ ಸೋಂಕು

ಬೆಂಗಳೂರು: ಈಗ ಎಲ್ಲಿ ಕೇಳಿದ್ರೂ ಕೊರೊನಾ ಜಪ, ಕೊರೊನಾ ಸೋಂಕಿನದ್ದೇ ಆತಂಕ. ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಈ ಮಹಾಮಾರಿ, ಈಗಾಗಲೇ ಲಕ್ಷಾಂತರ ಜನರಿಗೆ ಹಬ್ಬಿದೆ. ರಾಜಧಾನಿಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಸಿಎಂ ಗೃಹ ಕಚೇರಿ ಕೃಷ್ಣಾದ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಟೇಬಲ್‌, ARSI, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಲೆಕ್ಟ್ರಿಷಿಯನ್‌ಗೆ ಕೊರೊನಾ ಸೋಂಕು ಪಾಸಿಟಿವ್‌ ಬಂದಿದೆ. ಒಬ್ಬರನ್ನ ಈಗಾಗಲೇ ಕೋವಿಡ್ ಆಸ್ಪತ್ರೆಗೆ ಶಿಫ್ಟ್ […]

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ! ಮಹಿಳಾ ಪೇದೆ ಸೇರಿ ನಾಲ್ವರಿಗೆ ಸೋಂಕು
ಸಾಧು ಶ್ರೀನಾಥ್​

Updated on: Jun 25, 2020 | 4:09 PM

ಬೆಂಗಳೂರು: ಈಗ ಎಲ್ಲಿ ಕೇಳಿದ್ರೂ ಕೊರೊನಾ ಜಪ, ಕೊರೊನಾ ಸೋಂಕಿನದ್ದೇ ಆತಂಕ. ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಈ ಮಹಾಮಾರಿ, ಈಗಾಗಲೇ ಲಕ್ಷಾಂತರ ಜನರಿಗೆ ಹಬ್ಬಿದೆ. ರಾಜಧಾನಿಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಈ ಮಧ್ಯೆ ಸಿಎಂ ಗೃಹ ಕಚೇರಿ ಕೃಷ್ಣಾದ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಟೇಬಲ್‌, ARSI, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಲೆಕ್ಟ್ರಿಷಿಯನ್‌ಗೆ ಕೊರೊನಾ ಸೋಂಕು ಪಾಸಿಟಿವ್‌ ಬಂದಿದೆ. ಒಬ್ಬರನ್ನ ಈಗಾಗಲೇ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟಿವಿ9ಗೆ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇವರು ಪ್ರತಿದಿನ ಕೃಷ್ಣಾದಲ್ಲಿ ಕೆಲಸ ಮಾಡುವವರಲ್ಲ
ಕೊರೊನಾ ಪಾಸಿಟಿವ್ ಬಂದಿರುವವರು ಪ್ರತಿದಿನ ಕೃಷ್ಣಾದಲ್ಲಿ ಕೆಲಸ ಮಾಡುವವರಲ್ಲ. ಪೊಲೀಸ್ ಸಿಬ್ಬಂದಿ 15 ದಿನಗಳಿಗೊಮ್ಮೆ ಬದಲಾಗುತ್ತಾರೆ. ಇಂದು ಪಾಸಿಟಿವ್ ಬಂದಿರುವ ಇಬ್ಬರು ಜೂನ್ ತಿಂಗಳಿನಲ್ಲಿ ಕೃಷ್ಣಾದಲ್ಲಿ ಕೆಲಸ ಮಾಡಿಲ್ಲ. ಮೇ ತಿಂಗಳಿನಲ್ಲಿ ಕೆಲಸ ನಿರ್ವಹಿಸಿದ್ದರು.

ಈ ಹಿಂದೆ ಕೆಲಸ ನಿರ್ವಹಿಸಿದ್ದ ಎಲ್ಲಾ ಸಿಬ್ಬಂದಿಯನ್ನು ಕರೆಸಿ ಮಂಗಳವಾರ ಟೆಸ್ಟ್ ಮಾಡಲಾಗಿತ್ತು. ಪಾಸಿಟಿವ್ ಬಂದಿರುವ ಇಬ್ಬರು ಈಗ ಕೃಷ್ಣಾದಲ್ಲಿ ಕೆಲಸ ಮಾಡ್ತಿಲ್ಲ, ಬೇರೆ ಕಡೆ ಕೆಲಸ ಮಾಡ್ತಿದ್ದಾರೆ. ಅಲ್ಲದೆ, ಎಲೆಕ್ಟ್ರಿಷಿಯನ್ ಕೆಲಸ ಮಾಡಿ ಒಂದು ತಿಂಗಳಾಗಿದೆ.‌ ನಾಳೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮತ್ತೊಮ್ಮೆ ಸ್ಯಾನಿಟೈಸ್​ ಮಾಡಲಾಗುತ್ತೆ.

Published On - 3:04 pm, Thu, 25 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us