AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​

ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಹೇಳಿದರು.

4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​
ಸಚಿವ ಡಿಕೆ ಶಿವಕುಮಾರ್​
ಕಿರಣ್​ ಹನಿಯಡ್ಕ
| Edited By: ವಿವೇಕ ಬಿರಾದಾರ|

Updated on: Jul 11, 2023 | 1:16 PM

Share

ಬೆಂಗಳೂರು: ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ (Session) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಅವರು ಹೇಳಿದರು. 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ಆರಂಭವಾಗಿದೆ. ಇಂದಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ (MT Krishnappa) ಏತ ನೀರಾವರಿ ಯೋಜನೆಗೆ ಉಚಿತ ವಿದ್ಯುತ್ ಕೊಡಿ ಎಂದು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಏತ ನೀರಾವರಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿರುವ ವಿದ್ಯುತ್​ಗೆ ಬಿಲ್ ಕಟ್ಟಿಲ್ಲ. ಕೋಟಿ ಕೋಟಿ ಹಣ ಬಾಕಿ ಇಟ್ಟುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ

ತುಮಕೂರು ಗ್ರಾಮಾಂತರ, ಚನ್ನಪಟ್ಟಣದಲ್ಲಿ ಕೆರೆ ತುಂಬಿಸಲು ಏತ ನೀರಾವರಿ ಯೋಜನೆ ಬೇಕು ಅಂತಾರೆ. ಆದರೆ ಯಾರು ಸಹ ಇಂಧನ ಇಲಾಖೆಗೆ ಹಣ ಕೊಡುತ್ತಿಲ್ಲ. ತುಮಕೂರು ಗ್ರಾಮಾಂತರದಲ್ಲಿ ಆರು ಕೋಟಿ ರೂ. ಹಣ ಬಾಕಿ ಉಳಿದಿದೆ. ಚನ್ನಪಟ್ಟಣದಲ್ಲಿ ಐದು ಕೋಟಿ ರೂ. ಹಣ ಬಾಕಿ ಇದೆ. ಪಂಚಾಯತ್ ಅವರಿಗೆ ನೀರು ಬೇಕು ಆದರೆ ಹಣ ಕೊಡಲ್ಲ. ಇಂಧನ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆಗಳ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದರು.

ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ

ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ. ಯಾರೂ ಸಹ ಇಂಧನ ಇಲಾಖೆಗೆ ಪಾವತಿಸದೇ ಬಾಕಿ ಉಳಿದಿರುವ ಹಣ ನೀಡಿಲ್ಲ. ಹೀಗಾಗಿ ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಅರ್ಥಿಕವಾಗಿ ಇದು ದುಬಾರಿ ಸಹ ಅಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!