AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​

ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಹೇಳಿದರು.

4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ನೀರಾವರಿ ಇಲಾಖೆ: ಡಿಕೆ ಶಿವಕುಮಾರ್​
ಸಚಿವ ಡಿಕೆ ಶಿವಕುಮಾರ್​
ಕಿರಣ್​ ಹನಿಯಡ್ಕ
| Edited By: |

Updated on: Jul 11, 2023 | 1:16 PM

Share

ಬೆಂಗಳೂರು: ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ (Session) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಅವರು ಹೇಳಿದರು. 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ಆರಂಭವಾಗಿದೆ. ಇಂದಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ (MT Krishnappa) ಏತ ನೀರಾವರಿ ಯೋಜನೆಗೆ ಉಚಿತ ವಿದ್ಯುತ್ ಕೊಡಿ ಎಂದು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಏತ ನೀರಾವರಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿರುವ ವಿದ್ಯುತ್​ಗೆ ಬಿಲ್ ಕಟ್ಟಿಲ್ಲ. ಕೋಟಿ ಕೋಟಿ ಹಣ ಬಾಕಿ ಇಟ್ಟುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ

ತುಮಕೂರು ಗ್ರಾಮಾಂತರ, ಚನ್ನಪಟ್ಟಣದಲ್ಲಿ ಕೆರೆ ತುಂಬಿಸಲು ಏತ ನೀರಾವರಿ ಯೋಜನೆ ಬೇಕು ಅಂತಾರೆ. ಆದರೆ ಯಾರು ಸಹ ಇಂಧನ ಇಲಾಖೆಗೆ ಹಣ ಕೊಡುತ್ತಿಲ್ಲ. ತುಮಕೂರು ಗ್ರಾಮಾಂತರದಲ್ಲಿ ಆರು ಕೋಟಿ ರೂ. ಹಣ ಬಾಕಿ ಉಳಿದಿದೆ. ಚನ್ನಪಟ್ಟಣದಲ್ಲಿ ಐದು ಕೋಟಿ ರೂ. ಹಣ ಬಾಕಿ ಇದೆ. ಪಂಚಾಯತ್ ಅವರಿಗೆ ನೀರು ಬೇಕು ಆದರೆ ಹಣ ಕೊಡಲ್ಲ. ಇಂಧನ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆಗಳ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದರು.

ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ

ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ. ಯಾರೂ ಸಹ ಇಂಧನ ಇಲಾಖೆಗೆ ಪಾವತಿಸದೇ ಬಾಕಿ ಉಳಿದಿರುವ ಹಣ ನೀಡಿಲ್ಲ. ಹೀಗಾಗಿ ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಅರ್ಥಿಕವಾಗಿ ಇದು ದುಬಾರಿ ಸಹ ಅಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ