AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ; 40 ಮನೆಗಳಿಗೆ ಹಾನಿ

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ತಾಲೂಕಿನ ವನ್ನಳ್ಳಿ ಗ್ರಾಮದಲ್ಲಿ ಭಾರೀ ಗಾಳಿ ಬೀಸುತ್ತಿದೆ. ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರವು ಜೋರಾಗಿದೆ. ಹೀಗಾಗಿ ಸಮುದ್ರ ತೀರದ ಜನರು ಆತಂಕದಲ್ಲಿದ್ದಾರೆ.

ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ; 40 ಮನೆಗಳಿಗೆ ಹಾನಿ
ಅಲೆ ಅಬ್ಬರ
sandhya thejappa
|

Updated on: May 16, 2021 | 11:34 AM

Share

ಉಡುಪಿ: ತೌಕ್ತೆ ಚಂಡಮಾರುತದ ಅಬ್ಬರದಿಂದ ಜಿಲ್ಲೆಯಲ್ಲಿ ಈವರಗೆ ಸುಮಾರು 40 ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಬೈಂದೂರು, ಮರವಂತೆ ಭಾಗದಲ್ಲಿ ಇರುವ ಅಂದಾಜು 75 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ರಾತ್ರಿಯಿಡೀ ಧಾರಾಕಾರ ಗಾಳಿ, ಮಳೆ ಸುರಿದಿದೆ. ಜಿಲ್ಲೆಯಲ್ಲಿ ಇಂದು ಕೂಡಾ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಂಗಳೂರಿನಲ್ಲೂ ಬಿಟ್ಟು ಬಿಟ್ಟು ಮಳೆ ಅಬ್ಬರಿಸುತ್ತಿದೆ. ಸಮುದ್ರದ ಅಲೆಗಳ ಅಬ್ಬರ ಕೂಡಾ ಇನ್ನೂ ಕಡಿಮೆಯಾಗಿಲ್ಲ. ಭಾರೀ ಗಾತ್ರದ ಅಲೆಗಳಿಂದ ತೀರ ಪ್ರದೇಶದಲ್ಲಿ ಆತಂಕ ಮುಂದುವರೆದಿದೆ.

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ತಾಲೂಕಿನ ವನ್ನಳ್ಳಿ ಗ್ರಾಮದಲ್ಲಿ ಭಾರೀ ಗಾಳಿ ಬೀಸುತ್ತಿದೆ. ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರವು ಜೋರಾಗಿದೆ. ಹೀಗಾಗಿ ಸಮುದ್ರ ತೀರದ ಜನರು ಆತಂಕದಲ್ಲಿದ್ದಾರೆ.

ಬೆಳಗಾವಿ ನಗರದಲ್ಲಿ ಬೆಳಿಗ್ಗೆಯಿಂದ ಭಾರಿ ಗಾಳಿ ಮತ್ತು ಜಿಟಿ ಜಿಟಿ ಮಳೆಯಾಗುತ್ತಿದೆ. ಲಾಕ್​ಡೌನ್​ ಹಿನ್ನೆಲೆ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಆದರೆ ನಿರಂತರವಾಗಿ ಜೋರು ಗಾಳಿ, ಮಳೆ ಹಿನ್ನೆಲೆ ಜನ ಮನೆಯಿಂದ ಹೊರ ಬಂದಿಲ್ಲ. ಇನ್ನು ರಾಮನಗರ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಕಂಡುಬಂದಿದೆ. ಜಿಲ್ಲೆಯ ಕೆಲವು ಕಡೆ ತುಂತುರು ಮಳೆಯಾಗಿದೆ.

ಇದನ್ನೂ ಓದಿ

ರೋಗಿಗಳ ನೆರವಿಗೆ ನಿಂತ ವೈದ್ಯರ ತಂಡ; ಕೊರೊನಾ ಸೋಂಕು ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ಮನೆಯಲ್ಲೇ ಸೂಕ್ತ ಚಿಕಿತ್ಸೆ

‘ಭಾರತಕ್ಕಾಗಿ ನನ್ನ ಹೃದಯ ಮಿಡಿಯುತ್ತಿದೆ’ , ಕೊವಿಡ್ ಪರಿಸ್ಥಿತಿ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾವುಕ ಬರಹ

(40 houses were damaged by rain in udupi)