AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ: ಜೂ.7ರಂದು ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಸೂಚನೆ

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಹಿನ್ನೆಲೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ ವಿಚಾರಣೆ ಮಾಡಿದ್ದು, ಜೂ.7ರಂದು ತಪ್ಪದೇ ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಸೂಚನೆ ನೀಡಿದೆ.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ: ಜೂ.7ರಂದು ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಸೂಚನೆ
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ: ಜೂ.7ರಂದು ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಸೂಚನೆ
Ramesha M
| Edited By: |

Updated on:Jun 01, 2024 | 7:54 PM

Share

ಬೆಂಗಳೂರು, ಜೂನ್​ 01: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ (BJP) ವಿರುದ್ಧ ಅಪಪ್ರಚಾರ ಕೇಸ್​ ವಿಚಾರಣೆ ಮಾಡಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌, ಹಾಜರಾತಿಯಿಂದ ಕಾಂಗ್ರೆಸ್​ ನಾಯಕ ರಾಹುಲ್‌ ಗಾಂಧಿಗೆ (Rahul Gandhi) ವಿನಾಯಿತಿ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಗಾಂಧಿಗೆ ಇಂದು ಕೋರ್ಟ್‌ಗೆ ಹಾಜರಾಗುವಂತೆ ಆದೇಶಿಸಲಾಗಿತ್ತು. ಆದರೆ ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ರಾಹುಲ್​ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ವಾದ ಪ್ರತಿವಾದದ ಬಳಿಕ ಜೂ.7ರಂದು ತಪ್ಪದೇ ಕೋರ್ಟ್‌ಗೆ ಹಾಜರಾಗಲು ಸೂಚನೆ ನೀಡಿದೆ.

ರಾಹುಲ್ ಗಾಂಧಿ ವಕೀಲರ ಅರ್ಜಿಗೆ ಹಾಜರಾತಿಗೆ ವಿನಾಯಿತಿ ನೀಡದಂತೆ ಬಿಜೆಪಿ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಒಮ್ಮೆ ಹಾಜರಾದ ನಂತರ ವಿನಾಯಿತಿ ನೀಡಬಹುದು ಆದರೆ ಹಾಜರಾತಿಗೆ ಮೊದಲೇ ಪದೇಪದೆ ವಿನಾಯಿತಿ ನೀಡುವಂತಿಲ್ಲ ಎಂದು ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ವಾದ ಮಂಡನೆ ಮಾಡಿದ್ದಾರೆ. ಒಮ್ಮೆ ಹಾಜರಾಗುತ್ತಾರೆಂದು ಭರವಸೆ ನೀಡಿದ ನಂತರ ಉಲ್ಲಂಘಿಸುವಂತಿಲ್ಲ. ಹೀಗಾಗಿ ವಾರಂಟ್ ಹೊರಡಿಸಲು ಬಿಜೆಪಿ ಪರ ವಕೀಲರ ಮನವಿ ಮಾಡಿದ್ದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ​, ಸೋನಿಯಾ ಗಾಂಧಿಗೂ ಪಾಲು ಸಿಕ್ಕಿದೆ: ಅಶೋಕ್ ಗಂಭೀರ ಆರೋಪ​

ರಾಹುಲ್ ಗಾಂಧಿ ಪಕ್ಷದ ಯಾವುದೇ ಹುದ್ದೆಯಲ್ಲಿಲ್ಲ. ಜಾಹೀರಾತಿನಲ್ಲಿ ಫೋಟೋ ಹಾಕಿರುವುದಕ್ಕೆ ಆರೋಪಿ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಪರ ವಕೀಲ ಎಸ್.ಎ.ಅಹ್ಮದ್‌ ವಾದ ಮಂಡಿಸಿದ್ದಾರೆ. ಸಮನ್ಸ್ ಜಾರಿ ನಂತರ ಇದನ್ನು ಚರ್ಚಿಸಿ ಉಪಯೋಗವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಿಕೆ ಸಹೋದರರ ದೈತ್ಯಶಕ್ತಿ ಎದುರು ಸೆಣಸುವುದು ಕಷ್ಟ: ಸಿಪಿ ಯೋಗೇಶ್ವರ, ಬಿಜೆಪಿ ನಾಯಕ

2ನೇ ಬಾರಿಗೆ ಕೋರ್ಟ್‌ಗೆ ಗೈರಾದರೆ ವಿನಾಯಿತಿ ನೀಡಬಹುದೇ? ಈ ಬಗ್ಗೆ ಸ್ಷಷ್ಟ ಕಾನೂನು ಇಲ್ಲದಿರುವುದೇ ಸಮಸ್ಯೆ ಎಂದು ಜಡ್ಜ್ ಹೇಳಿದ್ದಾರೆ. ಬಳಿಕ ಕೆಲ ಸಮಯದ ನಂತರ ವಿನಾಯಿತಿ ನೀಡುವ ಮೂಲಕ ಜೂ.7ರಂದು ತಪ್ಪದೇ ಕೋರ್ಟ್‌ಗೆ ಹಾಜರಾಗಲು ಸೂಚಿಸಿದೆ.

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:43 pm, Sat, 1 June 24

Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು