ನಿಲ್ಲದ ಕೊರೊನಾ ಅಟ್ಟಹಾಸ: ಇಂದು 442 ಪಾಸಿಟಿವ್ ಕೇಸ್, 6 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 442 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 113, ಕಲಬುರಗಿ 35, ರಾಮನಗರ 33, ದಕ್ಷಿಣ ಕನ್ನಡ 29, ಬಳ್ಳಾರಿ 26, ಧಾರವಾಡ 26, ಮೈಸೂರು 22, ಬಾಗಲಕೋಟೆ 18, ಕೊಡಗು 18​, ಉಡುಪಿ 14, ಹಾಸನ 12, ಬೆಂಗಳೂರು ಗ್ರಾಮಾಂತರ 12, ಉತ್ತರ ಕನ್ನಡ 11, ವಿಜಯಪುರ 10, ಗದಗ 10, ಹಾವೇರಿ 10, ಮಂಡ್ಯ 9, ಬೀದರ್ 8, […]

ನಿಲ್ಲದ ಕೊರೊನಾ ಅಟ್ಟಹಾಸ: ಇಂದು 442 ಪಾಸಿಟಿವ್ ಕೇಸ್, 6 ಮಂದಿ ಬಲಿ
Guru

Updated on: Jun 25, 2020 | 7:19 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 442 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರ 113, ಕಲಬುರಗಿ 35, ರಾಮನಗರ 33, ದಕ್ಷಿಣ ಕನ್ನಡ 29, ಬಳ್ಳಾರಿ 26, ಧಾರವಾಡ 26, ಮೈಸೂರು 22, ಬಾಗಲಕೋಟೆ 18, ಕೊಡಗು 18​, ಉಡುಪಿ 14, ಹಾಸನ 12, ಬೆಂಗಳೂರು ಗ್ರಾಮಾಂತರ 12, ಉತ್ತರ ಕನ್ನಡ 11, ವಿಜಯಪುರ 10, ಗದಗ 10, ಹಾವೇರಿ 10, ಮಂಡ್ಯ 9, ಬೀದರ್ 8, ದಾವಣಗೆರೆ 7​, ಬೆಳಗಾವಿ, ಶಿವಮೊಗ್ಗ, ಕೋಲಾರ ಜಿಲ್ಲೆಯಲ್ಲಿ ತಲಾ 4​, ಯಾದಗಿರಿ 2, ಚಿಕ್ಕಬಳ್ಳಾಪುರ 2, ತುಮಕೂರು 1, ಚಿಕ್ಕಮಗಳೂರು, ಚಾಮರಾಜನಗರದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.

10,560 ಕೊರೊನಾ ಸೋಂಕಿತರ ಪೈಕಿ 6,670 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3716 ಕೊರೊನಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಿಲ್ಲರ್ ಕೊರೊನಾಗೆ ಇಂದು 6 ಮಂದಿ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ ಕೊರೊನಾದಿಂದ 78 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯಾದ್ಯಂತ 170 ಕೊರೊನಾದಿಂದ ಮೃತಪಟ್ಟಿದ್ದಾರೆ.

Published On - 7:10 pm, Thu, 25 June 20

Guru
Follow Us