ರಾಜಧಾನಿ ಬೆಂಗಳೂರಿನಲ್ಲಿ 13 ಕೊರೊನಾ ಕೇಸ್ ಪತ್ತೆ, ಬೇರೆ ಕಡೆ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟ ಕಮ್ಮಿಯಾಗುತ್ತಲೇ ಇಲ್ಲ. ಕ್ರೂರಿಯ ರುದ್ರ ನರ್ತನಕ್ಕೆ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 45 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1032ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 13 ಕೇಸ್ ಪತ್ತೆಯಾಗಿದ್ದು, ದಕ್ಷಿಣ ಕನ್ನಡ 16, ಉಡುಪಿ 5, ಹಾಸನ 3, ಬೀದರ್ 3, ಚಿತ್ರದುರ್ಗ 2, ಶಿವಮೊಗ್ಗ, ಕೋಲಾರ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ 1 ಕೇಸ್ ದೃಢಪಟ್ಟಿದೆ. ಇದುವರೆಗೂ ಕರ್ನಾಟಕದಲ್ಲಿ […]

ರಾಜಧಾನಿ ಬೆಂಗಳೂರಿನಲ್ಲಿ 13 ಕೊರೊನಾ ಕೇಸ್ ಪತ್ತೆ, ಬೇರೆ ಕಡೆ ಎಷ್ಟು?
ಸಾಧು ಶ್ರೀನಾಥ್​

Updated on: May 15, 2020 | 12:38 PM

ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟ ಕಮ್ಮಿಯಾಗುತ್ತಲೇ ಇಲ್ಲ. ಕ್ರೂರಿಯ ರುದ್ರ ನರ್ತನಕ್ಕೆ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 45 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1032ಕ್ಕೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 13 ಕೇಸ್ ಪತ್ತೆಯಾಗಿದ್ದು, ದಕ್ಷಿಣ ಕನ್ನಡ 16, ಉಡುಪಿ 5, ಹಾಸನ 3, ಬೀದರ್ 3, ಚಿತ್ರದುರ್ಗ 2, ಶಿವಮೊಗ್ಗ, ಕೋಲಾರ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ 1 ಕೇಸ್ ದೃಢಪಟ್ಟಿದೆ. ಇದುವರೆಗೂ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 35 ಜನರು ಬಲಿಯಾಗಿದ್ದು, 476 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ

ಶಿವಾಜಿನಗರಕ್ಕೆ ಹೌಸ್ ಕೀಪರ್ ಕಂಟಕವಾಗಿದ್ದು, ಸೋಂಕಿತ 653ರ ಸಂಪರ್ಕದಲಿದ್ದ 11 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 1017, 1018, 1019, 1020, 1021, 1022, 1023, 1024, 1025, 1026, 1027ನೇ ಸೋಂಕಿತರಿಗೆ ವೈರಸ್ ಅಟ್ಯಾಕ್ ಆಗಿದೆ. ಸೋಂಕಿತ 653ರ ಪ್ರಾಥಮಿಕ ಸಂಪರ್ಕದಲ್ಲಿದ್ದ 72 ಜನರನ್ನ ಕ್ವಾರಂಟೈನ್ ಮಾಡಲಾಗಿತ್ತು.

Published On - 12:37 pm, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us