ರಾಜ್ಯದಲ್ಲಿ ಒಂದೇ ದಿನ 45 ಮಂದಿಗೆ ಕೊರೊನಾ ಅಟ್ಯಾಕ್, ಅಪ್ಡೇಟ್ಸ್​ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ರಾಜ್ಯದಲ್ಲಿ ಕೊವಿಡ್ ಕಾಲಿಟ್ಟು ಎರಡು ತಿಂಗಳಾದ್ರೂ, ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕ್ರೂರಿ ಕೊರೊನಾ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಲೇ ಇದೆ. ಇಂದು ರಾಜ್ಯದಲ್ಲಿ ಒಂದೇ ದಿನ 45 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಬೆಳಗಾವಿ 11, ದಾವಣಗೆರೆ 14, ಬೆಂಗಳೂರು 7, ಉತ್ತರ ಕನ್ನಡ 12, ಬಳ್ಳಾರಿಯಲ್ಲಿ ಒಬ್ಬರಿಗೆ ಕೊರೊನಾ ಅಟ್ಯಾಕ್ ಆಗಿದೆ. 750 ಕೊರೊನಾ ಸೋಂಕಿತರ ಪೈಕಿ […]

ರಾಜ್ಯದಲ್ಲಿ ಒಂದೇ ದಿನ 45 ಮಂದಿಗೆ ಕೊರೊನಾ ಅಟ್ಯಾಕ್, ಅಪ್ಡೇಟ್ಸ್​ ಇಲ್ಲಿದೆ
ಸಾಧು ಶ್ರೀನಾಥ್​

Updated on: May 08, 2020 | 2:20 PM

ಬೆಂಗಳೂರು: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ರಾಜ್ಯದಲ್ಲಿ ಕೊವಿಡ್ ಕಾಲಿಟ್ಟು ಎರಡು ತಿಂಗಳಾದ್ರೂ, ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕ್ರೂರಿ ಕೊರೊನಾ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಲೇ ಇದೆ.

ಇಂದು ರಾಜ್ಯದಲ್ಲಿ ಒಂದೇ ದಿನ 45 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಬೆಳಗಾವಿ 11, ದಾವಣಗೆರೆ 14, ಬೆಂಗಳೂರು 7, ಉತ್ತರ ಕನ್ನಡ 12, ಬಳ್ಳಾರಿಯಲ್ಲಿ ಒಬ್ಬರಿಗೆ ಕೊರೊನಾ ಅಟ್ಯಾಕ್ ಆಗಿದೆ.

750 ಕೊರೊನಾ ಸೋಂಕಿತರ ಪೈಕಿ ಈವರೆಗೆ 371 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ ಇದುವರೆಗೆ ರಾಜ್ಯದಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 12:38 pm, Fri, 8 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us