Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 5 ಲಕ್ಷ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ: ಓರ್ವ ಬಂಧನ

ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ 5 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ದಾಸ್ತಾನು ಮಾಡಿದ್ದ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಪುರುಷೋತ್ತಮ್ ಎಂಬ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿ 144 ಬಾಟಲಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ 5 ಲಕ್ಷ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ: ಓರ್ವ ಬಂಧನ
ಬೆಂಗಳೂರಿನಲ್ಲಿ 5 ಲಕ್ಷ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ: ಓರ್ವ ಬಂಧನ
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on: Oct 30, 2024 | 8:08 AM

ಬೆಂಗಳೂರು, ಅಕ್ಟೋಬರ್​ 30: ನಗರದಲ್ಲಿ 5 ಲಕ್ಷ ರೂ. ಮೌಲ್ಯದ ಅಕ್ರಮ‌ ಗೋವಾ ಮದ್ಯ (Goa Liquor) ದಾಸ್ತಾನು ಮಾಡಿಟ್ಟಿದ್ದ ಆರೋಪಿ‌ಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿರುವಂತಹ ಘಟನೆ ಕತ್ರಿಗುಪ್ಪೆಯಲ್ಲಿ ನಡೆದಿದೆ. ದಕ್ಷಿಣ ವಿಭಾಗದ ಅಬಕಾರಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಆರೋಪಿ ಪುರುಷೋತ್ತಮ್ ಮನೆ ಮೇಲೆ ರೇಡ್ ಮಾಡಿ ಬಂಧಿಸಲಾಗಿದೆ. ಮನೆಯಲ್ಲಿದ್ದ ಮದ್ಯದ ಬಾಟಲಿ ನೋಡಿ ಒಂದು ಕ್ಷಣ ಅಬಕಾರಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಸದ್ಯ ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ) ಹಾಗೂ 43(ಎ) ಅಡಿ ಕೇಸ್ ದಾಖಲಿಸಲಾಗಿದ್ದು, 144 ಬಾಟಲ್​ಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಉಡುಪಿ ಬಾಲಕೃಷ್ಣ ಹತ್ಯೆ: ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

ಬಂಧಿತ ಆರೋಪಿ ಪುರುಷೋತ್ತಮ್​​​ ಗೋವಾದಲ್ಲಿರುವ ಅಂಗಡಿಯವರ ಜತೆ ಸಂಪರ್ಕ ಹೊಂದಿದ್ದು, ಕಡಿಮೆ ಬೆಲೆಗೆ ಮದ್ಯ ತರಿಸಿಕೊಳ್ಳುತ್ತಿದ್ದ. ಗೋವಾದಿಂದ ಬಸ್​​ನಲ್ಲಿ ಮದ್ಯದ ಬಾಟಲ್ ಲೋಡ್ ಮಾಡಿ ಕಳಿಸುತ್ತಿದ್ದು, ಬೆಂಗಳೂರಿಗೆ ಬಸ್​ ಬರ್ತಿದ್ದಂತೆ ಪುರುಷೋತ್ತಮ್ ಇಳಿಸಿಕೊಳ್ಳುತ್ತಿದ್ದ. ಬಳಿಕ ಮದ್ಯದ ಬಾಟಲ್​ಗಳನ್ನ ಮನೆಯಲ್ಲಿ ಸಂಗ್ರಹಿಸಿಡುತ್ತಿದ್ದ.

ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

ಅ.27ರಂದು ಬನಶಂಕರಿ 2ನೇ ಹಂತದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಆರೋಪಿ ಪುರುಷೋತ್ತಮ್ ನಿಂತಿದ್ದ. ಆತನ ಚಲನವಲನ ಅಬಕಾರಿ ಸಿಬ್ಬಂದಿಗೆ ಅನುಮಾನ ಮೂಡಿಸಿತ್ತು. ಈ ವೇಳೆ ಬ್ಯಾಗ್ ತೆಗೆದು ಪರಿಶೀಲಿಸಿದಾಗ ಗೋವಾದಲ್ಲಿ ಮಾತ್ರ ಮಾರಾಟ (FOR SALE IN GOA ONLY) ಎಂದು ಬಾಟಲ್ ಮೇಲೆ ನಮೂದಿಸಿರುವುದು ಪತ್ತೆ ಆಗಿದೆ.

ಇದನ್ನೂ ಓದಿ: ಯಾದಗಿರಿ: ಸ್ವಾಮೀಜಿ ವೇಷ ತೊಟ್ಟು ಹಿರಿಯರ ಕಾಡಿಕೆ ಪರಿಹರಿಸುವುದಾಗಿ ವಂಚನೆ

ಬಳಿಕ ಆರೋಪಿ ಮೊಬೈಲ್ ಪರಿಶೀಲನೆ ನಡೆಸಿದ ಅಬಕಾರಿ ಸಿಬ್ಬಂದಿ, ಈ ವೇಳೆ ಗೋವಾದ ಮದ್ಯದ ಅಂಗಡಿ ಜೊತೆಗಿನ ನಂಟು ಬಯಲಾಗಿದೆ. ಗೋವಾದಿಂದ ಬೆಂಗಳೂರಿಗೆ ಮದ್ಯ ತರಿಸಿದ್ದ ಬಿಲ್​ಗಳು ಕೂಡ ಪತ್ತೆ ಆಗಿದ್ದು, ಮನೆಗೆ ಕರೆದೊಯ್ದು ಪರಿಶೀಲಿಸಿದಾಗ ಮದ್ಯದ ಬಾಟಲ್​ಗಳು​ ಪತ್ತೆ ಆಗಿವೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಕಳ್ಳತನ

ಚಿಕ್ಕಬಳ್ಳಾಪುರ: ನಗರದ ಬಿ.ಬಿ.ರಸ್ತೆಯಲ್ಲಿರುವ ಫಸ್ಟ್ ಕ್ರೈ ಬಟ್ಟೆ ಶೋ ರೂಂ, ಕಾಂತಿ ಸ್ವೀಟ್ಸ್, ಕ್ಲಾಸಿಕ್ ಮೊಬೈಲ್ ಶಾಪ್, ಮ್ಯೂಟಯಲ್ ಪಂಡ್ ಕಛೇರಿಗೆ ಕನ್ನ ಹಾಕಿರುವಂತಹ ಘಟನೆ ನಡೆದಿದೆ. ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಫಸ್ಟ್ ಕ್ರೈನ ಗ್ಲಾಸ್ ಹೊಡೆದು ಒಳ ನುಗ್ಗಿರುವ ಕಳ್ಳನೋರ್ವ 50 ಸಾವಿರ ರೂ ಹಣ ಕದ್ದು ಪರಾರಿಯಾಗಿದ್ದಾನೆ. ಕಳ್ಳತನದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?