ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 3, ಬಾಗಲಕೋಟೆಯ ಇಬ್ಬರಿಗೆ ಕೊರೊನಾ ತಗುಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಈವರೆಗೆ 25 ಜನರು ಬಲಿಯಾಗಿದ್ದಾರೆ. 606 ಸೋಂಕಿತರ ಪೈಕಿ 282 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 299 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇಂದು ದೃಢವಾದ ಸೋಂಕಿತರ ವಿವರ […]

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: May 03, 2020 | 12:46 PM

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 3, ಬಾಗಲಕೋಟೆಯ ಇಬ್ಬರಿಗೆ ಕೊರೊನಾ ತಗುಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಈವರೆಗೆ 25 ಜನರು ಬಲಿಯಾಗಿದ್ದಾರೆ. 606 ಸೋಂಕಿತರ ಪೈಕಿ 282 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 299 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ದೃಢವಾದ ಸೋಂಕಿತರ ವಿವರ ಹೀಗಿದೆ:
602ನೇ ಸೋಂಕಿತೆ ಕಲಬುರಗಿಯ 13 ವರ್ಷದ ಯುವತಿ
532ನೇ ಸೋಂಕಿತರ ಸಂಪರ್ಕದಿಂದ ಯುವತಿಗೆ ಸೋಂಕು
603ನೇ ಸೋಂಕಿತ ಕಲಬುರಗಿಯ 54 ವರ್ಷದ ಪುರುಷ
532ನೇ ಸೋಂಕಿತರ ಸಂಪರ್ಕದಿಂದ ವ್ಯಕ್ತಿಗೆ ಸೋಂಕು
604ನೇ ಸೋಂಕಿತ ಕಲಬುರಗಿಯ 41 ವರ್ಷದ ಪುರುಷ
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು
605ನೇ ಸೋಂಕಿತ ಮುಧೋಳದ 68 ವರ್ಷದ ವೃದ್ಧ
ಬಾಗಲಕೋಟೆ ಜಿಲ್ಲೆಯ ಮುಧೋಳದ ವೃದ್ಧನಿಗೆ ಸೋಂಕು
380ನೇ ಸೋಂಕಿತರ ಸಂಪರ್ಕದಿಂದ ವೃದ್ಧನಿಗೆ ಸೋಂಕು
606ನೇ ಸೋಂಕಿತೆ ಮುಧೋಳದ 60 ವರ್ಷದ ವೃದ್ಧೆ
380ನೇ ಸೋಂಕಿತರ ಸಂಪರ್ಕದಿಂದ ವೃದ್ಧನಿಗೆ ಸೋಂಕು

Published On - 12:13 pm, Sun, 3 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us