AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತ ವರದಿ ಶಾಕ್! ಬೆಂಗಳೂರಿನಲ್ಲಿ ಮೇ ಅಂತ್ಯಕ್ಕೆ ಸೋಂಕಿತರು ಎಷ್ಟು?

ಬೆಂಗಳೂರು: ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿ ಬೆಂಗಳೂರಿಗರನ್ನು ಬೆಚ್ಚಿಬೀಳುವಂತೆ ಮಾಡಿದೆ. ಮೇ ಅಂತ್ಯದ ವೇಳೆಗೆ ಸೋಂಕಿತರ ಸಂಖ್ಯೆ ಐದು ಸಾವಿರಕ್ಕೆ ಏರಿಕೆಯಾಗಲಿದೆ ಎಂಬ ಆಘಾತಕಾರಿ ವರದಿಯನ್ನ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುವಂತಹ ಸಾಧ್ಯತೆ ಇದೆ. ನಗರದಲ್ಲಿ ಲಾಕ್​ಡೌನ್ ಕಟ್ಟುನಿಟ್ಟಾಗಿ ಮುಂದುವರಿಸಿದ್ದರೂ ಸೋಂಕಿತರ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರು ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದೆ. ಸದ್ಯ ಬೆಂಗಳೂರಿನಲ್ಲಿ 141 ಸೋಂಕಿತರಿದ್ದು, ಮೇ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ […]

ಜಿಲ್ಲಾಡಳಿತ ವರದಿ ಶಾಕ್! ಬೆಂಗಳೂರಿನಲ್ಲಿ ಮೇ ಅಂತ್ಯಕ್ಕೆ ಸೋಂಕಿತರು ಎಷ್ಟು?
ಸಾಧು ಶ್ರೀನಾಥ್​
|

Updated on:May 01, 2020 | 10:11 AM

Share

ಬೆಂಗಳೂರು: ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿ ಬೆಂಗಳೂರಿಗರನ್ನು ಬೆಚ್ಚಿಬೀಳುವಂತೆ ಮಾಡಿದೆ. ಮೇ ಅಂತ್ಯದ ವೇಳೆಗೆ ಸೋಂಕಿತರ ಸಂಖ್ಯೆ ಐದು ಸಾವಿರಕ್ಕೆ ಏರಿಕೆಯಾಗಲಿದೆ ಎಂಬ ಆಘಾತಕಾರಿ ವರದಿಯನ್ನ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುವಂತಹ ಸಾಧ್ಯತೆ ಇದೆ.

ನಗರದಲ್ಲಿ ಲಾಕ್​ಡೌನ್ ಕಟ್ಟುನಿಟ್ಟಾಗಿ ಮುಂದುವರಿಸಿದ್ದರೂ ಸೋಂಕಿತರ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರು ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದೆ. ಸದ್ಯ ಬೆಂಗಳೂರಿನಲ್ಲಿ 141 ಸೋಂಕಿತರಿದ್ದು, ಮೇ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 4,811 ಕ್ಕೆ ಏರಿಕೆಯಾಗಬಹುದು ಎನ್ನಲಾಗಿದೆ.

ಪಾದರಾಯನಪುರ, ಹೊಂಗಸಂದ್ರ ಸೇರಿದಂತೆ ಹಲವೆಡೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಯಾವುದೇ ಸೋಂಕಿತರ ಸಂಪರ್ಕ ಹಾಗೂ ಕೊರೊನಾ‌ ಲಕ್ಷಣಗಳಿಲ್ಲದ ವ್ಯಕ್ತಿಗಳಲ್ಲೂ ಸೋಂಕು ಪತ್ತೆಯಾಗುತ್ತಿದೆ. ರ್ಯಾಂಡಮ್ ಟೆಸ್ಟ್​ಗಳಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಮೇ ಅಂತ್ಯದೊಳಗೆ 5 ಸಾವಿರ ಸೋಂಕಿತರು ಪತ್ತೆಯಾಗಬಹುದು ಎಂದು ಅಂದಾಜಿಸಲಾಗಿದೆ.

ನಗರದಲ್ಲಿ ಸೋಂಕಿತರು ಹೆಚ್ಚಾದ್ರೆ ಎಷ್ಟು ವೈದ್ಯರು ಬೇಕು ಗೊತ್ತಾ? ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿಯ ಪ್ರಕಾರ ಬೆಂಗಳೂರಿನಲ್ಲಿ ಮೇ ಅಂತ್ಯದಲ್ಲಿ 5 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಲಿದ್ದಾರೆ. ಹೀಗಾಗಿ ಸೋಂಕನ್ನು ನಿಯಂತ್ರಿಸಲು ಹೆಚ್ಚು ಜನ ವೈದ್ಯರ ಅವಶ್ಯಕತೆ ಇದೆ.4 ಸಾವಿರ ಸೋಂಕಿತರು ಪತ್ತೆಯಾದ್ರೆ 2241 ಜನ ಜೂನಿಯರ್ ಡಾಕ್ಟರ್ಸ್​ಗಳ ಅವಶ್ಯಕತೆ ಬೀಳುತ್ತೆ.

ಆದ್ರೆ, ಹಾಲಿ 310 ಜನ ಜೂನಿಯರ್ ಡಾಕ್ಟರ್ಸ್​ಗಳು ಇದ್ದಾರೆ. ಕನ್ಸಲ್ಟೆಂಟ್ 1078 ಜನರ ಅವಶ್ಯಕತೆ ಬೀಳಬಹುದು. ಹಾಲಿ 107 ಜನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಡಾಟಾ ಎಂಟ್ರಿ ಆಪರೇಟರ್ 699 ಜನರ ಅವಶ್ಯಕತೆ ಬೀಳಬಹುದು. ಹಾಲಿ 20 ಜನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರೂಪ್ ಡಿ ನೌಕರರು 981 ಜನ ಅವಶ್ಯಕತೆ ಬೀಳಬಹುದು. ನಗರದ ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ವೈದ್ಯರ ಸಹಾಯ ಪಡೆಯಲು ಸಿದ್ಧತೆ ನಡೆಸಬಹುದು. https://www.facebook.com/Tv9Kannada/videos/526634084692700/

Published On - 9:20 am, Fri, 1 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ