AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತ ವರದಿ ಶಾಕ್! ಬೆಂಗಳೂರಿನಲ್ಲಿ ಮೇ ಅಂತ್ಯಕ್ಕೆ ಸೋಂಕಿತರು ಎಷ್ಟು?

ಬೆಂಗಳೂರು: ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿ ಬೆಂಗಳೂರಿಗರನ್ನು ಬೆಚ್ಚಿಬೀಳುವಂತೆ ಮಾಡಿದೆ. ಮೇ ಅಂತ್ಯದ ವೇಳೆಗೆ ಸೋಂಕಿತರ ಸಂಖ್ಯೆ ಐದು ಸಾವಿರಕ್ಕೆ ಏರಿಕೆಯಾಗಲಿದೆ ಎಂಬ ಆಘಾತಕಾರಿ ವರದಿಯನ್ನ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುವಂತಹ ಸಾಧ್ಯತೆ ಇದೆ. ನಗರದಲ್ಲಿ ಲಾಕ್​ಡೌನ್ ಕಟ್ಟುನಿಟ್ಟಾಗಿ ಮುಂದುವರಿಸಿದ್ದರೂ ಸೋಂಕಿತರ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರು ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದೆ. ಸದ್ಯ ಬೆಂಗಳೂರಿನಲ್ಲಿ 141 ಸೋಂಕಿತರಿದ್ದು, ಮೇ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ […]

ಜಿಲ್ಲಾಡಳಿತ ವರದಿ ಶಾಕ್! ಬೆಂಗಳೂರಿನಲ್ಲಿ ಮೇ ಅಂತ್ಯಕ್ಕೆ ಸೋಂಕಿತರು ಎಷ್ಟು?
ಸಾಧು ಶ್ರೀನಾಥ್​
|

Updated on:May 01, 2020 | 10:11 AM

Share

ಬೆಂಗಳೂರು: ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿ ಬೆಂಗಳೂರಿಗರನ್ನು ಬೆಚ್ಚಿಬೀಳುವಂತೆ ಮಾಡಿದೆ. ಮೇ ಅಂತ್ಯದ ವೇಳೆಗೆ ಸೋಂಕಿತರ ಸಂಖ್ಯೆ ಐದು ಸಾವಿರಕ್ಕೆ ಏರಿಕೆಯಾಗಲಿದೆ ಎಂಬ ಆಘಾತಕಾರಿ ವರದಿಯನ್ನ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುವಂತಹ ಸಾಧ್ಯತೆ ಇದೆ.

ನಗರದಲ್ಲಿ ಲಾಕ್​ಡೌನ್ ಕಟ್ಟುನಿಟ್ಟಾಗಿ ಮುಂದುವರಿಸಿದ್ದರೂ ಸೋಂಕಿತರ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರು ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದೆ. ಸದ್ಯ ಬೆಂಗಳೂರಿನಲ್ಲಿ 141 ಸೋಂಕಿತರಿದ್ದು, ಮೇ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 4,811 ಕ್ಕೆ ಏರಿಕೆಯಾಗಬಹುದು ಎನ್ನಲಾಗಿದೆ.

ಪಾದರಾಯನಪುರ, ಹೊಂಗಸಂದ್ರ ಸೇರಿದಂತೆ ಹಲವೆಡೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಯಾವುದೇ ಸೋಂಕಿತರ ಸಂಪರ್ಕ ಹಾಗೂ ಕೊರೊನಾ‌ ಲಕ್ಷಣಗಳಿಲ್ಲದ ವ್ಯಕ್ತಿಗಳಲ್ಲೂ ಸೋಂಕು ಪತ್ತೆಯಾಗುತ್ತಿದೆ. ರ್ಯಾಂಡಮ್ ಟೆಸ್ಟ್​ಗಳಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಮೇ ಅಂತ್ಯದೊಳಗೆ 5 ಸಾವಿರ ಸೋಂಕಿತರು ಪತ್ತೆಯಾಗಬಹುದು ಎಂದು ಅಂದಾಜಿಸಲಾಗಿದೆ.

ನಗರದಲ್ಲಿ ಸೋಂಕಿತರು ಹೆಚ್ಚಾದ್ರೆ ಎಷ್ಟು ವೈದ್ಯರು ಬೇಕು ಗೊತ್ತಾ? ಜಿಲ್ಲಾಡಳಿತ ಸಿದ್ಧಪಡಿಸಿರುವ ಅಂದಾಜು ವರದಿಯ ಪ್ರಕಾರ ಬೆಂಗಳೂರಿನಲ್ಲಿ ಮೇ ಅಂತ್ಯದಲ್ಲಿ 5 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಲಿದ್ದಾರೆ. ಹೀಗಾಗಿ ಸೋಂಕನ್ನು ನಿಯಂತ್ರಿಸಲು ಹೆಚ್ಚು ಜನ ವೈದ್ಯರ ಅವಶ್ಯಕತೆ ಇದೆ.4 ಸಾವಿರ ಸೋಂಕಿತರು ಪತ್ತೆಯಾದ್ರೆ 2241 ಜನ ಜೂನಿಯರ್ ಡಾಕ್ಟರ್ಸ್​ಗಳ ಅವಶ್ಯಕತೆ ಬೀಳುತ್ತೆ.

ಆದ್ರೆ, ಹಾಲಿ 310 ಜನ ಜೂನಿಯರ್ ಡಾಕ್ಟರ್ಸ್​ಗಳು ಇದ್ದಾರೆ. ಕನ್ಸಲ್ಟೆಂಟ್ 1078 ಜನರ ಅವಶ್ಯಕತೆ ಬೀಳಬಹುದು. ಹಾಲಿ 107 ಜನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಡಾಟಾ ಎಂಟ್ರಿ ಆಪರೇಟರ್ 699 ಜನರ ಅವಶ್ಯಕತೆ ಬೀಳಬಹುದು. ಹಾಲಿ 20 ಜನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರೂಪ್ ಡಿ ನೌಕರರು 981 ಜನ ಅವಶ್ಯಕತೆ ಬೀಳಬಹುದು. ನಗರದ ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ವೈದ್ಯರ ಸಹಾಯ ಪಡೆಯಲು ಸಿದ್ಧತೆ ನಡೆಸಬಹುದು. https://www.facebook.com/Tv9Kannada/videos/526634084692700/

Published On - 9:20 am, Fri, 1 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ