AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿ ಸಾವಿಗೆ ಪ್ರೇಮ ಪ್ರಕರಣ ಕಾರಣವಾಯ್ತಾ?

ಕಲಬುರಗಿ: ನಾಪತ್ತೆಯಾಗಿದ್ದ ಬಾಲಕಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿಸೆಂಬರ್ 5ರಂದು ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಹೊರವಲಯದಲ್ಲಿ ಮನೆಯ ಬಳಿ ಆಟವಾಡುತ್ತಿದ್ದ ಶ್ವೇತಾ(5) ನಾಪತ್ತೆಯಾಗಿದ್ದಳು. ತಂದೆ ನಿಂಗಪ್ಪ ಪೂಜಾರಿ ಮಗಳಿಗಾಗಿ ಹುಡುಕಾಟ ನಡೆಸಿದ್ದರು. ಕೆಲ ದಿನಗಳ ನಂತರ ಗ್ರಾಮದ ಹೊರವಲಯ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಗು ಶವವಾಗಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ನಿಧಿಗಾಗಿ ಬಾಲಕಿಯನ್ನು ಬಲಿಕೊಟ್ಟಿರುವುದಾಗಿ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಗಾಣಗಾಪುರ […]

ಬಾಲಕಿ ಸಾವಿಗೆ ಪ್ರೇಮ ಪ್ರಕರಣ ಕಾರಣವಾಯ್ತಾ?
ಸಾಧು ಶ್ರೀನಾಥ್​
|

Updated on:Dec 13, 2019 | 8:07 PM

Share

ಕಲಬುರಗಿ: ನಾಪತ್ತೆಯಾಗಿದ್ದ ಬಾಲಕಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿಸೆಂಬರ್ 5ರಂದು ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಹೊರವಲಯದಲ್ಲಿ ಮನೆಯ ಬಳಿ ಆಟವಾಡುತ್ತಿದ್ದ ಶ್ವೇತಾ(5) ನಾಪತ್ತೆಯಾಗಿದ್ದಳು.

ತಂದೆ ನಿಂಗಪ್ಪ ಪೂಜಾರಿ ಮಗಳಿಗಾಗಿ ಹುಡುಕಾಟ ನಡೆಸಿದ್ದರು. ಕೆಲ ದಿನಗಳ ನಂತರ ಗ್ರಾಮದ ಹೊರವಲಯ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಗು ಶವವಾಗಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ನಿಧಿಗಾಗಿ ಬಾಲಕಿಯನ್ನು ಬಲಿಕೊಟ್ಟಿರುವುದಾಗಿ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ವೈಷಮ್ಯದಿಂದ ಕೊಲೆ ಶಂಕೆ: ಗ್ರಾಮದ ಕೆಲವರ ಮೇಲೆ ಬಾಲಕಿ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಬಾಲಕಿ ನಾಪತ್ತೆಯಾದ ದಿನ ಮುಕುಂದ ಮತ್ತು ಹಯ್ಯಾಳಿ ಜೊತೆ ನಿಂಗಪ್ಪ ಜಗಳ ಮಾಡಿದ್ದ. ತಮ್ಮ ಸಂಬಂಧಿ ಯುವತಿಗೆ ತೊಂದರೆ ನೀಡಿದ್ದಕ್ಕೆ ನಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದ್ದ. ಇದೇ ಕಾರಣದಿಂದ ಮಗಳನ್ನು ಅಪಹರಿಸಿ ಕೊಲೆ ಮಾಡಿರಬಹುದೆಂದು ಮುಕುಂದಂಪ್ಪ, ಹಯ್ಯಾಳಿ, ಅಶೋಕ ಎಂಬುವವರ ವಿರುದ್ಧ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಲಕಿ ಸಾವಿಗೆ ಪ್ರೇಮ ಪ್ರಕರಣ ಕಾರಣ? ಬಾಲಕಿ ಸಾವಿಗೆ ಪ್ರೇಮ ಪ್ರಕರಣ ಕಾರಣವಾಗಿರೋ ಶಂಕೆ ವ್ಯಕ್ತವಾಗಿದೆ. ನಿಂಗಪ್ಪನ ಸಂಬಂಧಿ ಯುವತಿಯನ್ನ ಮುಕುಂದಪ್ಪ ಪ್ರೀತಿಸ್ತಿದ್ದ. ಇವರಿಬ್ಬರು ದೇವಸ್ಥಾನದ ಬಳಿ ಮಾತನಾಡುತ್ತಿದ್ದಿದ್ದನ್ನು ನಿಂಗಪ್ಪನ ಸಂಬಂಧಿಗಳು ವಿಡಿಯೋ ಮಾಡಿದ್ದರು. ಈ ವಿಡಿಯೋ ಇಟ್ಚುಕೊಂಡು ನಮ್ಮ ಕುಟುಂಬದ ಯುವತಿ ತಂಟೆಗೆ ಬರದಂತೆ ಮುಕುಂದಪ್ಪ ಮತ್ತು ಆತನ ಸಹೋದರನಿಗೆ ನಿಂಗಪ್ಪ ಎಚ್ಚರಿಕೆ ನೀಡಿದ್ದ. ಆಗ ಎರಡು ಕುಟುಂಬದವರು ಕೈಕೈ ಮಿಲಾಯಿಸಿದ್ದರು. ಆಗ ನೀನು ಕಣ್ಣೀರು ಹಾಕ್ತೀಯ, ನಿನಗೆ ಬೇಕಾದ ಅತ್ಯಮೂಲ್ಯ ವಸ್ತು ಕಳಕೋತಿಯ ಅಂತ ಬೆದರಿಕೆ ಹಾಕಿದ್ದನಂತೆ‌. ಬೆಳಗ್ಗೆ ಗಲಾಟೆಯಾದ್ರೆ ಅಂದು ಸಂಜೆ ಬಾಲಕಿ ನಾಪತ್ತೆಯಾಗಿದ್ದಳು.

ಹೀಗಾಗಿ ಅವರೇ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಅಂತ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಘಟನೆ ಸಂಬಂಧ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಮುಕುಂದಪ್ಪ, ಹಯ್ಯಾಳಿ ಸೇರಿದಂತೆ ಒಟ್ಟು 7 ಜನರ ವಿರುದ್ಧ ದೂರು ದಾಖಲಾಗಿದೆ.  ಬಾಲಕಿ ತಂದೆ ನಿಂಗಪ್ಪ ದೂರಿನ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Published On - 1:41 pm, Fri, 13 December 19

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್