AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷ ಪ್ರೀತಿಸಿ, ವಿವಾಹವಾಗಿ ನಾಪತ್ತೆಯಾದ ಗಂಡ!

5 ವರ್ಷ ಪ್ರೀತಿಸಿ ವಿವಾಹವಾಗಿ ನಂತರ ಸಂಬಂಧಿಕರ ಮನೆಯಲ್ಲಿಯೇ ಪತ್ನಿಯನ್ನು ಬಿಟ್ಟು ನಾಪತ್ತೆಯಾದ ಪತಿ(ತೇಜಸ್ವಿ) ವಿರುದ್ಧ ಪತ್ನಿ(ಶ್ರುತಿ) ಆರೋಪಿಸಿದ್ದಾರೆ.

5 ವರ್ಷ ಪ್ರೀತಿಸಿ, ವಿವಾಹವಾಗಿ ನಾಪತ್ತೆಯಾದ ಗಂಡ!
ಪತಿ ತೇಜಸ್ವಿ ಮತ್ತು ಪತ್ನಿ ಶ್ರುತಿ
shruti hegde
|

Updated on: Feb 04, 2021 | 10:59 AM

Share

ಮಂಡ್ಯ: ಐದು ವರ್ಷ ಕಾಲ ಪ್ರೀತಿಸಿ, ವಿವಾಹವಾಗಿ ನಂತರ ಸಂಬಂಧಿಕರ ಮನೆಯಲ್ಲಿ ತನ್ನನ್ನು ಬಿಟ್ಟು ಪತಿರಾಯ ನಾಪತ್ತೆಯಾಗಿದ್ದಾರೆ. ತನ್ನ ಪತಿ ತೇಜಸ್ವಿ 8 ತಿಂಗಳ ಹಿಂದೆಯೇ ಮತ್ತೋರ್ವಳನ್ನು ಮದುವೆಯಾಗಿರುವುದಾಗಿ ತಿಳಿದು ಬಂದಿದೆ ಎಂದು ಪತ್ನಿ ಶ್ರುತಿ ಆರೋಪಿಸಿದ್ದಾರೆ.

ತೇಜಸ್ವಿ, ಮದ್ದೂರು ತಾಲೂಕಿನ ಹುಲಿಗೆರೆಪುರದವರು. ಅದೇ ಗ್ರಾಮದ ಶ್ರುತಿ ಎಂಬಾಕೆಯನ್ನು 5 ವರ್ಷದಿಂದ ಪ್ರೀತಿಸುತ್ತಿದ್ದ. 1 ವರ್ಷದ ಹಿಂದೆ ಮೋಸ ಮಾಡಲು ಹೊರಟಿದ್ದು, ಶ್ರುತಿ ತೇಜಸ್ವಿಯ ವಿರುದ್ಧ ಪ್ರೀತಿಸಿ ಅತ್ಯಾಚಾರ, ವಂಚನೆ ದೂರು ದಾಖಲಿಸಿದ್ದರು.

ಈ ಕುರಿತಂತೆ, ಮದ್ದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಹೀಗಾಗಿ, ಮದುವೆಯಾಗುವಂತೆ ನಾಟಕವಾಡಿ 2020ರ ನ. 8ರಂದು ಶ್ರುತಿಯನ್ನು ವಿವಾಹವಾಗಿದ್ದರು.

ತೇಜಸ್ವಿ ಮತ್ತು ಶ್ರುತಿ ಮದುವೆಯ ವಿವಾಹ ಪತ್ರ

ವಿವಾಹದ ರಿಜಿಸ್ಟರ್​ ಮಾಡಿಸಲು ಹೋದಾಗ 8 ತಿಂಗಳ ಹಿಂದೆ ಮತ್ತೊಂದು ಯುವತಿಯನ್ನು ಮದುವೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಮೊದಲ ಹೆಂಡತಿಯ ಮನೆಯಲ್ಲಿ ತೇಜಸ್ವಿ ಇರುವುದು ತಿಳಿದು ಬಂದಿದ್ದು, ಶ್ರುತಿ ಹೋಗುವಷ್ಟರಲ್ಲಿ ಅಲ್ಲಿಂದ ಎಸ್ಕೇಪ್​ ಆಗಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರೆದುರು ಶ್ರುತಿ ಕಣ್ಣಿರು ತೋಡಿಕೊಂಡಿದ್ದಾರೆ. ನ್ಯಾಯ ಕೊಡಿಸುವಂತೆ ಪೊಲೀಸರೆದುರು ಮನವಿ ಮಾಡಿಕೊಂಡಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್